ಚಿತ್ರ ಮಂಜರಿ

ಒಟಿಟಿ ವೇದಿಕೆಯತ್ತ ʼಆರ್ಕೆಸ್ಟ್ರಾ, ಮೈಸೂರುʼ

ಬೆಂಗಳೂರು : ಪೂರ್ಣಚಂದ್ರ ಮೈಸೂರು ಮುಖ್ಯಭೂಮಿಕೆಯಲ್ಲಿ ನಟಿಸಿರುವ ʼಆರ್ಕೆಸ್ಟ್ರಾ, ಮೈಸೂರುʼ ಸಿನಿಮಾ ಚಿತ್ರಮಂದಿರಗಳಲ್ಲಿ ತೆರೆಕಂಡು ಒಂದು ತಿಂಗಳು ಕಳೆಯುವ ಮುನ್ನವೇ ಒಟಿಟಿಯತ್ತ ಮುಖ ಮಾಡಿದ್ದು, ಒಟಿಟಿ ವೇದಿಕೆಯಲ್ಲಿ ಚಿತ್ರ ಬಿಡುಗಡೆಯಾಗುತ್ತಿರುವ ಬಗ್ಗೆ ಡಾಲಿ ಪಿಕ್ಚರ್ಸ್‌ ಮಾಹಿತಿ ಹಂಚಿಕೊಂಡಿದೆ.

ʼಆರ್ಕೆಸ್ಟ್ರಾ ಮೈಸೂರುʼ ಸಿನಿಮಾ ಜನವರಿ 12ರಂದು ತೆರೆಗೆ ಬಂದಿತ್ತು. ಟ್ರೈಲರ್‌ ಮತ್ತು ಹಾಡುಗಳ ಮೂಲಕ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಬಿಡುಗಡೆಯಾದ ಮೊದಲ ದಿನವೇ ಚಿತ್ರಕ್ಕೆ ಪ್ರೇಕ್ಷಕರ ಕೊರತೆ ಎದುರಾಗಿದೆ ಎಂದು ನಿರ್ಮಾಪಕ ರಘು ದಿಕ್ಷಿತ್‌ ಅಳಲು ತೋಡಿಕೊಂಡಿದ್ದರು. ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ತೆರೆಕಂಡ 15 ದಿನಕ್ಕೆ ಒಟಿಟಿಯಲ್ಲಿ ಬಿಡುಗಡೆ”

ಈ ಬಗ್ಗೆ ಟ್ವಿಟರ್‌ನಲ್ಲಿ ಪತ್ರವೊಂದನ್ನು ಹಂಚಿಕೊಂಡಿರುವ ಡಾಲಿ ಪಿಕ್ಚರ್ಸ್‌, ನಮ್ಮ ʼಆರ್ಕೆಸ್ಟ್ರಾ ಮೈಸೂರುʼ ತಂಡ ಕಥೆ ಹೇಳಬೇಕೆಂಬ ಕನಸು ಕಂಡವರು. ಮೈಸೂರಿನಲ್ಲೇ ಹುಟ್ಟಿ ಬೆಳೆದ, ಆರ್ಕೆಸ್ಟ್ರಾ ಸಂಸ್ಕೃತಿ ಮತ್ತು ಸಂಗೀತವುಳ್ಳ ಕಥೆಯೊಂದನ್ನು ಕನಸು ಕಾಣುವ ಪ್ರತಿಯೊಬ್ಬರಿಗೂ ಹತ್ತಿರವಾಗುವಂತಹ ಚಿತ್ರವಾಗಿಸಿ ತೋರಿಸಬೇಕೆಂದು ಮಾಡಿದ ಸಿನಿಮಾ, ‘ಆರ್ಕೆಸ್ಟ್ರಾ ಮೈಸೂರು’. ನಮ್ಮ ಈ ಕನಸನ್ನು ಬೆಳ್ಳಿ ಪರದೆಯಲ್ಲಿ ಆಸ್ವಾದಿಸಿದ ಅಷ್ಟೂ ಪ್ರೇಕ್ಷಕರಿಗೆ, ಕುಟುಂಬದವರಿಗೆ, ಗೆಳೆಯವರ್ಗಕ್ಕೆ ನಾವು ಮಣಿ. ಅದರಲ್ಲೂ, ಮೈಸೂರಿನ ಜನತೆ ʼಡಿಆರ್‌ಸಿʼ ಚಿತ್ರಮಂದಿರ ತುಂಬಿಸುವ ಮೂಲಕ ತೋರುತ್ತಿರುವ ವಿಶೇಷ ಪ್ರೀತಿಗೆ ನಾವು ಆಭಾರಿ. ಈಗ ಮುಂದಿನ ಹೆಜ್ಜೆ ನಮ್ಮ ಸಿನಿಮಾ ನೋಡಿ ಮೆಚ್ಚಿದ ʼಅಮೆಜಾನ್‌ ಪ್ರೈಂʼ ಸಂಸ್ಥೆ ಇದೀಗ ಚಿತ್ರವನ್ನು ಪ್ರಸಾರ ಮಾಡಲು ಮುಂದೆ ಬಂದಿದೆ. ಮತ್ತಷ್ಟು ಚಿತ್ರರಸಿಕರನ್ನು ತಲುಪಲು ‘ಆರ್ಕೆಸ್ಟ್ರಾ ಮೈಸೂರು’ ಚಿತ್ರ ಜನವರಿ 27ರಿಂದ ಪ್ರೈಂ ವಿಡಿಯೋಸ್‌ನಲ್ಲಿ ಬರಲಿದೆ. ಸಿನಿಮಾ ನೋಡಿ ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ” ಎಂದು ಮಾಹಿತಿ ನೀಡಿದೆ.

 

andolanait

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

8 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago