ಚಿತ್ರ ಮಂಜರಿ

ಒಟಿಟಿ ವೇದಿಕೆಯತ್ತ ʼಆರ್ಕೆಸ್ಟ್ರಾ, ಮೈಸೂರುʼ

ಬೆಂಗಳೂರು : ಪೂರ್ಣಚಂದ್ರ ಮೈಸೂರು ಮುಖ್ಯಭೂಮಿಕೆಯಲ್ಲಿ ನಟಿಸಿರುವ ʼಆರ್ಕೆಸ್ಟ್ರಾ, ಮೈಸೂರುʼ ಸಿನಿಮಾ ಚಿತ್ರಮಂದಿರಗಳಲ್ಲಿ ತೆರೆಕಂಡು ಒಂದು ತಿಂಗಳು ಕಳೆಯುವ ಮುನ್ನವೇ ಒಟಿಟಿಯತ್ತ ಮುಖ ಮಾಡಿದ್ದು, ಒಟಿಟಿ ವೇದಿಕೆಯಲ್ಲಿ ಚಿತ್ರ ಬಿಡುಗಡೆಯಾಗುತ್ತಿರುವ ಬಗ್ಗೆ ಡಾಲಿ ಪಿಕ್ಚರ್ಸ್‌ ಮಾಹಿತಿ ಹಂಚಿಕೊಂಡಿದೆ.

ʼಆರ್ಕೆಸ್ಟ್ರಾ ಮೈಸೂರುʼ ಸಿನಿಮಾ ಜನವರಿ 12ರಂದು ತೆರೆಗೆ ಬಂದಿತ್ತು. ಟ್ರೈಲರ್‌ ಮತ್ತು ಹಾಡುಗಳ ಮೂಲಕ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಬಿಡುಗಡೆಯಾದ ಮೊದಲ ದಿನವೇ ಚಿತ್ರಕ್ಕೆ ಪ್ರೇಕ್ಷಕರ ಕೊರತೆ ಎದುರಾಗಿದೆ ಎಂದು ನಿರ್ಮಾಪಕ ರಘು ದಿಕ್ಷಿತ್‌ ಅಳಲು ತೋಡಿಕೊಂಡಿದ್ದರು. ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ತೆರೆಕಂಡ 15 ದಿನಕ್ಕೆ ಒಟಿಟಿಯಲ್ಲಿ ಬಿಡುಗಡೆ”

ಈ ಬಗ್ಗೆ ಟ್ವಿಟರ್‌ನಲ್ಲಿ ಪತ್ರವೊಂದನ್ನು ಹಂಚಿಕೊಂಡಿರುವ ಡಾಲಿ ಪಿಕ್ಚರ್ಸ್‌, ನಮ್ಮ ʼಆರ್ಕೆಸ್ಟ್ರಾ ಮೈಸೂರುʼ ತಂಡ ಕಥೆ ಹೇಳಬೇಕೆಂಬ ಕನಸು ಕಂಡವರು. ಮೈಸೂರಿನಲ್ಲೇ ಹುಟ್ಟಿ ಬೆಳೆದ, ಆರ್ಕೆಸ್ಟ್ರಾ ಸಂಸ್ಕೃತಿ ಮತ್ತು ಸಂಗೀತವುಳ್ಳ ಕಥೆಯೊಂದನ್ನು ಕನಸು ಕಾಣುವ ಪ್ರತಿಯೊಬ್ಬರಿಗೂ ಹತ್ತಿರವಾಗುವಂತಹ ಚಿತ್ರವಾಗಿಸಿ ತೋರಿಸಬೇಕೆಂದು ಮಾಡಿದ ಸಿನಿಮಾ, ‘ಆರ್ಕೆಸ್ಟ್ರಾ ಮೈಸೂರು’. ನಮ್ಮ ಈ ಕನಸನ್ನು ಬೆಳ್ಳಿ ಪರದೆಯಲ್ಲಿ ಆಸ್ವಾದಿಸಿದ ಅಷ್ಟೂ ಪ್ರೇಕ್ಷಕರಿಗೆ, ಕುಟುಂಬದವರಿಗೆ, ಗೆಳೆಯವರ್ಗಕ್ಕೆ ನಾವು ಮಣಿ. ಅದರಲ್ಲೂ, ಮೈಸೂರಿನ ಜನತೆ ʼಡಿಆರ್‌ಸಿʼ ಚಿತ್ರಮಂದಿರ ತುಂಬಿಸುವ ಮೂಲಕ ತೋರುತ್ತಿರುವ ವಿಶೇಷ ಪ್ರೀತಿಗೆ ನಾವು ಆಭಾರಿ. ಈಗ ಮುಂದಿನ ಹೆಜ್ಜೆ ನಮ್ಮ ಸಿನಿಮಾ ನೋಡಿ ಮೆಚ್ಚಿದ ʼಅಮೆಜಾನ್‌ ಪ್ರೈಂʼ ಸಂಸ್ಥೆ ಇದೀಗ ಚಿತ್ರವನ್ನು ಪ್ರಸಾರ ಮಾಡಲು ಮುಂದೆ ಬಂದಿದೆ. ಮತ್ತಷ್ಟು ಚಿತ್ರರಸಿಕರನ್ನು ತಲುಪಲು ‘ಆರ್ಕೆಸ್ಟ್ರಾ ಮೈಸೂರು’ ಚಿತ್ರ ಜನವರಿ 27ರಿಂದ ಪ್ರೈಂ ವಿಡಿಯೋಸ್‌ನಲ್ಲಿ ಬರಲಿದೆ. ಸಿನಿಮಾ ನೋಡಿ ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ” ಎಂದು ಮಾಹಿತಿ ನೀಡಿದೆ.

 

andolanait

Recent Posts

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

2 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

4 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

5 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

5 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

8 hours ago

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ನಿಧನ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…

11 hours ago