ಬೆಂಗಳೂರು : ಪೂರ್ಣಚಂದ್ರ ಮೈಸೂರು ಮುಖ್ಯಭೂಮಿಕೆಯಲ್ಲಿ ನಟಿಸಿರುವ ʼಆರ್ಕೆಸ್ಟ್ರಾ, ಮೈಸೂರುʼ ಸಿನಿಮಾ ಚಿತ್ರಮಂದಿರಗಳಲ್ಲಿ ತೆರೆಕಂಡು ಒಂದು ತಿಂಗಳು ಕಳೆಯುವ ಮುನ್ನವೇ ಒಟಿಟಿಯತ್ತ ಮುಖ ಮಾಡಿದ್ದು, ಒಟಿಟಿ ವೇದಿಕೆಯಲ್ಲಿ ಚಿತ್ರ ಬಿಡುಗಡೆಯಾಗುತ್ತಿರುವ ಬಗ್ಗೆ ಡಾಲಿ ಪಿಕ್ಚರ್ಸ್ ಮಾಹಿತಿ ಹಂಚಿಕೊಂಡಿದೆ.
ʼಆರ್ಕೆಸ್ಟ್ರಾ ಮೈಸೂರುʼ ಸಿನಿಮಾ ಜನವರಿ 12ರಂದು ತೆರೆಗೆ ಬಂದಿತ್ತು. ಟ್ರೈಲರ್ ಮತ್ತು ಹಾಡುಗಳ ಮೂಲಕ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಬಿಡುಗಡೆಯಾದ ಮೊದಲ ದಿನವೇ ಚಿತ್ರಕ್ಕೆ ಪ್ರೇಕ್ಷಕರ ಕೊರತೆ ಎದುರಾಗಿದೆ ಎಂದು ನಿರ್ಮಾಪಕ ರಘು ದಿಕ್ಷಿತ್ ಅಳಲು ತೋಡಿಕೊಂಡಿದ್ದರು. ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ತೆರೆಕಂಡ 15 ದಿನಕ್ಕೆ ಒಟಿಟಿಯಲ್ಲಿ ಬಿಡುಗಡೆ”
ಈ ಬಗ್ಗೆ ಟ್ವಿಟರ್ನಲ್ಲಿ ಪತ್ರವೊಂದನ್ನು ಹಂಚಿಕೊಂಡಿರುವ ಡಾಲಿ ಪಿಕ್ಚರ್ಸ್, ನಮ್ಮ ʼಆರ್ಕೆಸ್ಟ್ರಾ ಮೈಸೂರುʼ ತಂಡ ಕಥೆ ಹೇಳಬೇಕೆಂಬ ಕನಸು ಕಂಡವರು. ಮೈಸೂರಿನಲ್ಲೇ ಹುಟ್ಟಿ ಬೆಳೆದ, ಆರ್ಕೆಸ್ಟ್ರಾ ಸಂಸ್ಕೃತಿ ಮತ್ತು ಸಂಗೀತವುಳ್ಳ ಕಥೆಯೊಂದನ್ನು ಕನಸು ಕಾಣುವ ಪ್ರತಿಯೊಬ್ಬರಿಗೂ ಹತ್ತಿರವಾಗುವಂತಹ ಚಿತ್ರವಾಗಿಸಿ ತೋರಿಸಬೇಕೆಂದು ಮಾಡಿದ ಸಿನಿಮಾ, ‘ಆರ್ಕೆಸ್ಟ್ರಾ ಮೈಸೂರು’. ನಮ್ಮ ಈ ಕನಸನ್ನು ಬೆಳ್ಳಿ ಪರದೆಯಲ್ಲಿ ಆಸ್ವಾದಿಸಿದ ಅಷ್ಟೂ ಪ್ರೇಕ್ಷಕರಿಗೆ, ಕುಟುಂಬದವರಿಗೆ, ಗೆಳೆಯವರ್ಗಕ್ಕೆ ನಾವು ಮಣಿ. ಅದರಲ್ಲೂ, ಮೈಸೂರಿನ ಜನತೆ ʼಡಿಆರ್ಸಿʼ ಚಿತ್ರಮಂದಿರ ತುಂಬಿಸುವ ಮೂಲಕ ತೋರುತ್ತಿರುವ ವಿಶೇಷ ಪ್ರೀತಿಗೆ ನಾವು ಆಭಾರಿ. ಈಗ ಮುಂದಿನ ಹೆಜ್ಜೆ ನಮ್ಮ ಸಿನಿಮಾ ನೋಡಿ ಮೆಚ್ಚಿದ ʼಅಮೆಜಾನ್ ಪ್ರೈಂʼ ಸಂಸ್ಥೆ ಇದೀಗ ಚಿತ್ರವನ್ನು ಪ್ರಸಾರ ಮಾಡಲು ಮುಂದೆ ಬಂದಿದೆ. ಮತ್ತಷ್ಟು ಚಿತ್ರರಸಿಕರನ್ನು ತಲುಪಲು ‘ಆರ್ಕೆಸ್ಟ್ರಾ ಮೈಸೂರು’ ಚಿತ್ರ ಜನವರಿ 27ರಿಂದ ಪ್ರೈಂ ವಿಡಿಯೋಸ್ನಲ್ಲಿ ಬರಲಿದೆ. ಸಿನಿಮಾ ನೋಡಿ ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ” ಎಂದು ಮಾಹಿತಿ ನೀಡಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…