ಬೆಂಗಳೂರು : ಪೂರ್ಣಚಂದ್ರ ಮೈಸೂರು ಮುಖ್ಯಭೂಮಿಕೆಯಲ್ಲಿ ನಟಿಸಿರುವ ʼಆರ್ಕೆಸ್ಟ್ರಾ, ಮೈಸೂರುʼ ಸಿನಿಮಾ ಚಿತ್ರಮಂದಿರಗಳಲ್ಲಿ ತೆರೆಕಂಡು ಒಂದು ತಿಂಗಳು ಕಳೆಯುವ ಮುನ್ನವೇ ಒಟಿಟಿಯತ್ತ ಮುಖ ಮಾಡಿದ್ದು, ಒಟಿಟಿ ವೇದಿಕೆಯಲ್ಲಿ ಚಿತ್ರ ಬಿಡುಗಡೆಯಾಗುತ್ತಿರುವ ಬಗ್ಗೆ ಡಾಲಿ ಪಿಕ್ಚರ್ಸ್ ಮಾಹಿತಿ ಹಂಚಿಕೊಂಡಿದೆ.
ʼಆರ್ಕೆಸ್ಟ್ರಾ ಮೈಸೂರುʼ ಸಿನಿಮಾ ಜನವರಿ 12ರಂದು ತೆರೆಗೆ ಬಂದಿತ್ತು. ಟ್ರೈಲರ್ ಮತ್ತು ಹಾಡುಗಳ ಮೂಲಕ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಬಿಡುಗಡೆಯಾದ ಮೊದಲ ದಿನವೇ ಚಿತ್ರಕ್ಕೆ ಪ್ರೇಕ್ಷಕರ ಕೊರತೆ ಎದುರಾಗಿದೆ ಎಂದು ನಿರ್ಮಾಪಕ ರಘು ದಿಕ್ಷಿತ್ ಅಳಲು ತೋಡಿಕೊಂಡಿದ್ದರು. ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ತೆರೆಕಂಡ 15 ದಿನಕ್ಕೆ ಒಟಿಟಿಯಲ್ಲಿ ಬಿಡುಗಡೆ”
ಈ ಬಗ್ಗೆ ಟ್ವಿಟರ್ನಲ್ಲಿ ಪತ್ರವೊಂದನ್ನು ಹಂಚಿಕೊಂಡಿರುವ ಡಾಲಿ ಪಿಕ್ಚರ್ಸ್, ನಮ್ಮ ʼಆರ್ಕೆಸ್ಟ್ರಾ ಮೈಸೂರುʼ ತಂಡ ಕಥೆ ಹೇಳಬೇಕೆಂಬ ಕನಸು ಕಂಡವರು. ಮೈಸೂರಿನಲ್ಲೇ ಹುಟ್ಟಿ ಬೆಳೆದ, ಆರ್ಕೆಸ್ಟ್ರಾ ಸಂಸ್ಕೃತಿ ಮತ್ತು ಸಂಗೀತವುಳ್ಳ ಕಥೆಯೊಂದನ್ನು ಕನಸು ಕಾಣುವ ಪ್ರತಿಯೊಬ್ಬರಿಗೂ ಹತ್ತಿರವಾಗುವಂತಹ ಚಿತ್ರವಾಗಿಸಿ ತೋರಿಸಬೇಕೆಂದು ಮಾಡಿದ ಸಿನಿಮಾ, ‘ಆರ್ಕೆಸ್ಟ್ರಾ ಮೈಸೂರು’. ನಮ್ಮ ಈ ಕನಸನ್ನು ಬೆಳ್ಳಿ ಪರದೆಯಲ್ಲಿ ಆಸ್ವಾದಿಸಿದ ಅಷ್ಟೂ ಪ್ರೇಕ್ಷಕರಿಗೆ, ಕುಟುಂಬದವರಿಗೆ, ಗೆಳೆಯವರ್ಗಕ್ಕೆ ನಾವು ಮಣಿ. ಅದರಲ್ಲೂ, ಮೈಸೂರಿನ ಜನತೆ ʼಡಿಆರ್ಸಿʼ ಚಿತ್ರಮಂದಿರ ತುಂಬಿಸುವ ಮೂಲಕ ತೋರುತ್ತಿರುವ ವಿಶೇಷ ಪ್ರೀತಿಗೆ ನಾವು ಆಭಾರಿ. ಈಗ ಮುಂದಿನ ಹೆಜ್ಜೆ ನಮ್ಮ ಸಿನಿಮಾ ನೋಡಿ ಮೆಚ್ಚಿದ ʼಅಮೆಜಾನ್ ಪ್ರೈಂʼ ಸಂಸ್ಥೆ ಇದೀಗ ಚಿತ್ರವನ್ನು ಪ್ರಸಾರ ಮಾಡಲು ಮುಂದೆ ಬಂದಿದೆ. ಮತ್ತಷ್ಟು ಚಿತ್ರರಸಿಕರನ್ನು ತಲುಪಲು ‘ಆರ್ಕೆಸ್ಟ್ರಾ ಮೈಸೂರು’ ಚಿತ್ರ ಜನವರಿ 27ರಿಂದ ಪ್ರೈಂ ವಿಡಿಯೋಸ್ನಲ್ಲಿ ಬರಲಿದೆ. ಸಿನಿಮಾ ನೋಡಿ ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ” ಎಂದು ಮಾಹಿತಿ ನೀಡಿದೆ.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…