ಬೆಂಗಳೂರು: ಜಾ.ದಳ ಒಂದು ಬ್ರಾಹ್ಮಣ್ಯದ ಪಕ್ಷ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.
ಜಾ.ದಳ ಮುಖಂಡ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಚೇತನ್, ಜಾ.ದಳ ಬ್ರಾಹ್ಮಣ್ಯವನ್ನು ಪೋಷಿಸುವ ಪಕ್ಷ ಎಂದು ಹೇಳಿದ್ದಾರೆ.
HDK claims: ‘Pralhad Joshi comes from Peshwa Brahmin tradition that killed Gandhi; he is not an ‘old Karnataka tradition’ Brahmin— who we worship & whose feet we fall to’
Such sectarian & superstitious hogwash!
Brahmins are not problem; BRAHMINISM is
JDS is a Brahminical party
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) February 6, 2023
ಈ ಹಿಂದೆ ಕುಮಾರಸ್ವಾಮಿ ಅವರು, ಪ್ರಲ್ಹಾದ್ ಜೋಶಿಯು ಗಾಂಧಿಯನ್ನು ಕೊಂದ ಪೇಶ್ವೆ ಬ್ರಾಹ್ಮಣ ಸಂಪ್ರದಾಯದಿಂದ ಬಂದವರು; ಜೋಶಿ ‘ಹಳೆಯ ಕರ್ನಾಟಕದ ಸಂಪ್ರದಾಯದ’ ಬ್ರಾಹ್ಮಣರಲ್ಲ ಎಂದು ಹೇಳಿದ್ದರು. ಮುಂದುವರಿದು ನಾವು ‘ಹಳೆಯ ಕರ್ನಾಟಕ ಸಂಪ್ರದಾಯದ’ ಬ್ರಾಹ್ಮಣರನ್ನು ಪೂಜಿಸುತ್ತೇವೆ ಮತ್ತು ಅವರ ಕಾಲಿಗೆ ಬೀಳುತ್ತೇವೆ ಎಂದು ಹೇಳಿಕೆ ನೀಡಿದ್ದರು.
ಇದಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಚೇತನ್, ಇದು ಎಂತಹ ಪಂಥೀಯ ಮತ್ತು ಮೂಢನಂಬಿಕೆಯ ಅಸಂಬದ್ಧತೆ! ಎಂದಿದ್ದಾರೆ. ಹಾಗೇ ನಮಗೆ ಬ್ರಾಹ್ಮಣರು ಸಮಸ್ಯೆಯಲ್ಲ, ಬ್ರಾಹ್ಮಣ್ಯವು ದೊಡ್ಡ ಸಮಸ್ಯೆಯಾಗಿದೆ. ಜಾ.ದಳ ಒಂದು ಬ್ರಾಹ್ಮಣ್ಯದ ಪಕ್ಷ ಎಂದು ಹೇಳಿದ್ದಾರೆ.





