Mysore
26
overcast clouds

Social Media

ಮಂಗಳವಾರ, 12 ಮೇ 2026
Light
Dark

ಜಾ.ದಳ ಬ್ರಾಹ್ಮಣ್ಯದ ಪಕ್ಷ: ಚೇತನ್ ಅಹಿಂಸಾ

ಬೆಂಗಳೂರು: ಜಾ.ದಳ ಒಂದು ಬ್ರಾಹ್ಮಣ್ಯದ ಪಕ್ಷ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.
ಜಾ.ದಳ ಮುಖಂಡ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಚೇತನ್, ಜಾ.ದಳ ಬ್ರಾಹ್ಮಣ್ಯವನ್ನು ಪೋಷಿಸುವ ಪಕ್ಷ ಎಂದು ಹೇಳಿದ್ದಾರೆ.

ಈ ಹಿಂದೆ ಕುಮಾರಸ್ವಾಮಿ ಅವರು, ಪ್ರಲ್ಹಾದ್ ಜೋಶಿಯು ಗಾಂಧಿಯನ್ನು ಕೊಂದ ಪೇಶ್ವೆ ಬ್ರಾಹ್ಮಣ ಸಂಪ್ರದಾಯದಿಂದ ಬಂದವರು; ಜೋಶಿ ‘ಹಳೆಯ ಕರ್ನಾಟಕದ ಸಂಪ್ರದಾಯದ’ ಬ್ರಾಹ್ಮಣರಲ್ಲ ಎಂದು ಹೇಳಿದ್ದರು. ಮುಂದುವರಿದು ನಾವು ‘ಹಳೆಯ ಕರ್ನಾಟಕ ಸಂಪ್ರದಾಯದ’ ಬ್ರಾಹ್ಮಣರನ್ನು ಪೂಜಿಸುತ್ತೇವೆ ಮತ್ತು ಅವರ ಕಾಲಿಗೆ ಬೀಳುತ್ತೇವೆ ಎಂದು ಹೇಳಿಕೆ ನೀಡಿದ್ದರು.
ಇದಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಚೇತನ್, ಇದು ಎಂತಹ ಪಂಥೀಯ ಮತ್ತು ಮೂಢನಂಬಿಕೆಯ ಅಸಂಬದ್ಧತೆ! ಎಂದಿದ್ದಾರೆ. ಹಾಗೇ ನಮಗೆ ಬ್ರಾಹ್ಮಣರು ಸಮಸ್ಯೆಯಲ್ಲ, ಬ್ರಾಹ್ಮಣ್ಯವು ದೊಡ್ಡ ಸಮಸ್ಯೆಯಾಗಿದೆ. ಜಾ.ದಳ ಒಂದು ಬ್ರಾಹ್ಮಣ್ಯದ ಪಕ್ಷ ಎಂದು ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!