ನವದೆಹಲಿ : ಬಾಲಿವುಡ್ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದ ವಿಚಾರ, ಇದೀಗ ದೇಶಭಕ್ತಿಯನ್ನು ಪ್ರಶ್ನಿಸುವಲ್ಲಿಗೆ ಹೋಗಿದೆ. ಹಿಂದೂಗಳ ಭಾವನೆಗೆ ಧಕ್ಕೆ ತರುವುದಕ್ಕಾಗಿಯೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ನಟ ಶಾರುಖ್ ಖಾನ್ ಮೇಲೆ ಆರೋಪಗಳನ್ನು ಮಾಡಲಾಗುತ್ತಿದೆ. ಈ ಕುರಿತು ಶಾರುಖ್ ಖಾನ್ ಮತ್ತೊಂದು ಟ್ವಿಟ್ ಮಾಡಿದ್ದು, ‘ಪಠಾಣ್ ಸಿನಿಮಾ ಕೂಡ ದೇಶಭಕ್ತಿಯನ್ನು ಸಾರುತ್ತದೆ’ ಎಂದು ಬರೆದುಕೊಂಡಿದ್ದಾರೆ. ಸಿನಿಮಾವನ್ನು ಬಾಯ್ಕಾಟ್ ಮಾಡುವುದರಲ್ಲಿ ಅರ್ಥವೇ ಇಲ್ಲವೆಂದಿದ್ದಾರೆ.
ಪಠಾಣ್ ಸಿನಿಮಾ ಬಾಯ್ಕಾಟ್ ಮಾಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ತೊಟ್ಟಿದ್ದಾರೆ ಎನ್ನುವುದು ಒಂದು ಕಡೆಯಾದರೆ, ಈ ಬಿಕಿನಿ ತೊಟ್ಟ ಸಂದರ್ಭದಲ್ಲಿ ಬರುವ ಹಾಡೊಂದರ ಸಾಹಿತ್ಯ ‘ನಾಚಿಕೆ ಇಲ್ಲದ ಬಣ್ಣ’ ಎನ್ನುವುದಾಗಿದೆ. ಇದು ಹಿಂದೂಗಳನ್ನು ಹೀಯಾಳಿಸುವ ಉದ್ದೇಶದಿಂದಲೇ ಮಾಡಿದ ಕೃತ್ಯ ಎಂದು ಹೇಳಲಾಗುತ್ತಿದೆ. ಹಾಗಾಗಿ ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಿ ಎನ್ನುವ ಧ್ವನಿ ಸಾಕಷ್ಟು ಜೋರಾಗಿದೆ.
ಬೆಂಗಳೂರು: ಜೆಡಿಎಸ್ ಪಕ್ಷ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ…
ಗುಂಡ್ಲುಪೇಟೆ: ಪಂಚ ಗ್ಯಾರಂಟಿಗಳ ಘೋಷಣೆಯೊಂದಿಗೆ ಅಧಿಕಾರಕ್ಕೇರಿದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಂಪೂರ್ಣವಾಗಿ ಕುಸಿದಿದೆ. ಈ ನಡುವೆ ಗ್ಯಾರಂಟಿಗಳಿಂದ ಸರ್ಕಾರಕ್ಕೆ…
ಇಸ್ರೇಲ್: ಭಾರತ ಮತ್ತು ಇಸ್ರೇಲ್ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ…
ಉದಯಪುರ: ಉದಯಪುರದ ಅರಮನೆಯಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ…
ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ…
ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…