ಚಿತ್ರ ಮಂಜರಿ

ಬಿಡುಗಡೆಗೊಂಡ ಮೂರೇ ದಿನಕ್ಕೆ ಭರ್ಜರಿ ಗಳಿಕೆಯತ್ತ ʼಪಠಾಣ್ʼ ಸಿನಿಮಾ

ನವದೆಹಲಿ: ಶಾರುಖ್ ಖಾನ್, ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ಮುಖ್ಯ ಭೂಮಿಕೆಯಲ್ಲಿರುವ ಹಿಂದಿಯ ಪಠಾಣ್ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಮೂರೇ ದಿನಗಳಲ್ಲಿ ₹313 ಕೋಟಿ ಗಳಿಕೆ ಕಂಡಿದೆ. ಜನವರಿ 25ರಂದು ತೆರೆ ಕಂಡ ಚಿತ್ರ ಮೂರನೇ ದಿನ ಹಿಂದಿಯಲ್ಲಿ ₹38 ಕೋಟಿ ನಿವ್ವಳ ಗಳಿಕೆ ಕಂಡಿದೆ. ಇತರೆ ಭಾಷೆಗಳಲ್ಲಿ ₹1.25 ಕೋಟಿ ಗಳಿಸಿದೆ ಎಂದು ಚಿತ್ರ ನಿರ್ಮಾಣ ಮಾಡಿರುವ ಯಶ್‌ ರಾಜ್ ಫಿಲ್ಮ್ಸ್ ತಿಳಿಸಿದೆ.

‘ಮೂರನೇ ದಿನ ಚಿತ್ರವು ಭಾರತದಲ್ಲಿ ₹39.25 ನಿವ್ವಳ ಗಳಿಕೆ (ಒಟ್ಟು ₹47ಕೋಟಿ) ಕಂಡಿದ್ದು, ವಿದೇಶದಲ್ಲಿ ಒಟ್ಟು ₹43 ಕೋಟಿ ಗಳಿಸಿದೆ. ಒಟ್ಟಾರೆ ವಿಶ್ವದಾದ್ಯಂತ ಮೂರನೇ ದಿನದ ಗಳಿಕೆ ₹90 ಕೋಟಿ ಆಗಿದೆ’ ಎಂದು ಸಂಸ್ಥೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. 4 ವರ್ಷಗಳ ದೀರ್ಘ ವಿರಾಮದ ಬಳಿಕ ತೆರೆ ಕಂಡಿರುವ ಶಾರುಖ್ ಖಾನ್ ಅವರ ಚಿತ್ರ ಮೊದಲ ದಿನವೇ ವಿಶ್ವದಾದ್ಯಂತ ₹106 ಕೋಟಿ ಗಳಿಸಿತ್ತು. ಎರಡನೇ ದಿನ ₹113.6 ಕೋಟಿ ಮತ್ತು ಮೂರನೇ ದಿನ ₹90 ಕೋಟಿ ಗಳಿಸಿದೆ.

ಮೂರು ದಿನಗಳ ಬಳಿಕ ಚಿತ್ರ ಭಾರತದಲ್ಲಿ ₹201 ಕೋಟಿ ಮತ್ತು ವಿದೇಶದಲ್ಲಿ ₹112 ಕೊಟಿ ಗಳಿಕೆ ಕಂಡಿದೆ. ಪಠಾಣ್ ಚಿತ್ರವು ಮೊದಲ ದಿನ ಭಾರತ ಮತ್ತು ವಿದೇಶದಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಹಿಂದಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ‘ಪಠಾಣ್ ಚಿತ್ರವನ್ನು ವಿಶ್ವದಾದ್ಯಂತ ಇರುವ ಭಾರತೀಯರು ಆಶೀರ್ವದಿಸಿದ್ದಾರೆ. ಚಿತ್ರ ಮುನ್ನುಗ್ಗುತ್ತಿರುವ ಪರಿ ಅಭೂತಪೂರ್ವ ಮತ್ತು ಐತಿಹಾಸಿಕವಾದದ್ದು’ಎಂದು ಯಶ್ ರಾಜ್ ಫಿಲ್ಮ್ಸ್ ಸಿಇಒ ಅಕ್ಷಯೆ ವಿಧಾನಿ ಹೇಳಿದ್ದಾರೆ.

ಯಶ್ ರಾಜ್ ಫಿಲ್ಮ್ಸ್ ಪ್ರಕಾರ, ಪಠಾಣ್ ಚಿತ್ರವು 21 ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದಿದೆ. ಚಿತ್ರದಲ್ಲಿ ಸಲ್ಮಾನ್ ಖಾನ್, ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

andolanait

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

2 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

2 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

3 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

3 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

4 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

5 hours ago