ಚಿತ್ರ ಮಂಜರಿ

ಬಿಡುಗಡೆಗೊಂಡ ಮೂರೇ ದಿನಕ್ಕೆ ಭರ್ಜರಿ ಗಳಿಕೆಯತ್ತ ʼಪಠಾಣ್ʼ ಸಿನಿಮಾ

ನವದೆಹಲಿ: ಶಾರುಖ್ ಖಾನ್, ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ಮುಖ್ಯ ಭೂಮಿಕೆಯಲ್ಲಿರುವ ಹಿಂದಿಯ ಪಠಾಣ್ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಮೂರೇ ದಿನಗಳಲ್ಲಿ ₹313 ಕೋಟಿ ಗಳಿಕೆ ಕಂಡಿದೆ. ಜನವರಿ 25ರಂದು ತೆರೆ ಕಂಡ ಚಿತ್ರ ಮೂರನೇ ದಿನ ಹಿಂದಿಯಲ್ಲಿ ₹38 ಕೋಟಿ ನಿವ್ವಳ ಗಳಿಕೆ ಕಂಡಿದೆ. ಇತರೆ ಭಾಷೆಗಳಲ್ಲಿ ₹1.25 ಕೋಟಿ ಗಳಿಸಿದೆ ಎಂದು ಚಿತ್ರ ನಿರ್ಮಾಣ ಮಾಡಿರುವ ಯಶ್‌ ರಾಜ್ ಫಿಲ್ಮ್ಸ್ ತಿಳಿಸಿದೆ.

‘ಮೂರನೇ ದಿನ ಚಿತ್ರವು ಭಾರತದಲ್ಲಿ ₹39.25 ನಿವ್ವಳ ಗಳಿಕೆ (ಒಟ್ಟು ₹47ಕೋಟಿ) ಕಂಡಿದ್ದು, ವಿದೇಶದಲ್ಲಿ ಒಟ್ಟು ₹43 ಕೋಟಿ ಗಳಿಸಿದೆ. ಒಟ್ಟಾರೆ ವಿಶ್ವದಾದ್ಯಂತ ಮೂರನೇ ದಿನದ ಗಳಿಕೆ ₹90 ಕೋಟಿ ಆಗಿದೆ’ ಎಂದು ಸಂಸ್ಥೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. 4 ವರ್ಷಗಳ ದೀರ್ಘ ವಿರಾಮದ ಬಳಿಕ ತೆರೆ ಕಂಡಿರುವ ಶಾರುಖ್ ಖಾನ್ ಅವರ ಚಿತ್ರ ಮೊದಲ ದಿನವೇ ವಿಶ್ವದಾದ್ಯಂತ ₹106 ಕೋಟಿ ಗಳಿಸಿತ್ತು. ಎರಡನೇ ದಿನ ₹113.6 ಕೋಟಿ ಮತ್ತು ಮೂರನೇ ದಿನ ₹90 ಕೋಟಿ ಗಳಿಸಿದೆ.

ಮೂರು ದಿನಗಳ ಬಳಿಕ ಚಿತ್ರ ಭಾರತದಲ್ಲಿ ₹201 ಕೋಟಿ ಮತ್ತು ವಿದೇಶದಲ್ಲಿ ₹112 ಕೊಟಿ ಗಳಿಕೆ ಕಂಡಿದೆ. ಪಠಾಣ್ ಚಿತ್ರವು ಮೊದಲ ದಿನ ಭಾರತ ಮತ್ತು ವಿದೇಶದಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಹಿಂದಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ‘ಪಠಾಣ್ ಚಿತ್ರವನ್ನು ವಿಶ್ವದಾದ್ಯಂತ ಇರುವ ಭಾರತೀಯರು ಆಶೀರ್ವದಿಸಿದ್ದಾರೆ. ಚಿತ್ರ ಮುನ್ನುಗ್ಗುತ್ತಿರುವ ಪರಿ ಅಭೂತಪೂರ್ವ ಮತ್ತು ಐತಿಹಾಸಿಕವಾದದ್ದು’ಎಂದು ಯಶ್ ರಾಜ್ ಫಿಲ್ಮ್ಸ್ ಸಿಇಒ ಅಕ್ಷಯೆ ವಿಧಾನಿ ಹೇಳಿದ್ದಾರೆ.

ಯಶ್ ರಾಜ್ ಫಿಲ್ಮ್ಸ್ ಪ್ರಕಾರ, ಪಠಾಣ್ ಚಿತ್ರವು 21 ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದಿದೆ. ಚಿತ್ರದಲ್ಲಿ ಸಲ್ಮಾನ್ ಖಾನ್, ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

andolanait

Recent Posts

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

7 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

7 hours ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

7 hours ago

ಅಳಿವಿನತ್ತ ರಾಜ್ಯದ ಮೊದಲ ಬಾಲಕಿಯರ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…

7 hours ago

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

13 hours ago