ಚಿತ್ರ ಮಂಜರಿ

ಬಿಡುಗಡೆಗೊಂಡ ಮೂರೇ ದಿನಕ್ಕೆ ಭರ್ಜರಿ ಗಳಿಕೆಯತ್ತ ʼಪಠಾಣ್ʼ ಸಿನಿಮಾ

ನವದೆಹಲಿ: ಶಾರುಖ್ ಖಾನ್, ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ಮುಖ್ಯ ಭೂಮಿಕೆಯಲ್ಲಿರುವ ಹಿಂದಿಯ ಪಠಾಣ್ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಮೂರೇ ದಿನಗಳಲ್ಲಿ ₹313 ಕೋಟಿ ಗಳಿಕೆ ಕಂಡಿದೆ. ಜನವರಿ 25ರಂದು ತೆರೆ ಕಂಡ ಚಿತ್ರ ಮೂರನೇ ದಿನ ಹಿಂದಿಯಲ್ಲಿ ₹38 ಕೋಟಿ ನಿವ್ವಳ ಗಳಿಕೆ ಕಂಡಿದೆ. ಇತರೆ ಭಾಷೆಗಳಲ್ಲಿ ₹1.25 ಕೋಟಿ ಗಳಿಸಿದೆ ಎಂದು ಚಿತ್ರ ನಿರ್ಮಾಣ ಮಾಡಿರುವ ಯಶ್‌ ರಾಜ್ ಫಿಲ್ಮ್ಸ್ ತಿಳಿಸಿದೆ.

‘ಮೂರನೇ ದಿನ ಚಿತ್ರವು ಭಾರತದಲ್ಲಿ ₹39.25 ನಿವ್ವಳ ಗಳಿಕೆ (ಒಟ್ಟು ₹47ಕೋಟಿ) ಕಂಡಿದ್ದು, ವಿದೇಶದಲ್ಲಿ ಒಟ್ಟು ₹43 ಕೋಟಿ ಗಳಿಸಿದೆ. ಒಟ್ಟಾರೆ ವಿಶ್ವದಾದ್ಯಂತ ಮೂರನೇ ದಿನದ ಗಳಿಕೆ ₹90 ಕೋಟಿ ಆಗಿದೆ’ ಎಂದು ಸಂಸ್ಥೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. 4 ವರ್ಷಗಳ ದೀರ್ಘ ವಿರಾಮದ ಬಳಿಕ ತೆರೆ ಕಂಡಿರುವ ಶಾರುಖ್ ಖಾನ್ ಅವರ ಚಿತ್ರ ಮೊದಲ ದಿನವೇ ವಿಶ್ವದಾದ್ಯಂತ ₹106 ಕೋಟಿ ಗಳಿಸಿತ್ತು. ಎರಡನೇ ದಿನ ₹113.6 ಕೋಟಿ ಮತ್ತು ಮೂರನೇ ದಿನ ₹90 ಕೋಟಿ ಗಳಿಸಿದೆ.

ಮೂರು ದಿನಗಳ ಬಳಿಕ ಚಿತ್ರ ಭಾರತದಲ್ಲಿ ₹201 ಕೋಟಿ ಮತ್ತು ವಿದೇಶದಲ್ಲಿ ₹112 ಕೊಟಿ ಗಳಿಕೆ ಕಂಡಿದೆ. ಪಠಾಣ್ ಚಿತ್ರವು ಮೊದಲ ದಿನ ಭಾರತ ಮತ್ತು ವಿದೇಶದಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಹಿಂದಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ‘ಪಠಾಣ್ ಚಿತ್ರವನ್ನು ವಿಶ್ವದಾದ್ಯಂತ ಇರುವ ಭಾರತೀಯರು ಆಶೀರ್ವದಿಸಿದ್ದಾರೆ. ಚಿತ್ರ ಮುನ್ನುಗ್ಗುತ್ತಿರುವ ಪರಿ ಅಭೂತಪೂರ್ವ ಮತ್ತು ಐತಿಹಾಸಿಕವಾದದ್ದು’ಎಂದು ಯಶ್ ರಾಜ್ ಫಿಲ್ಮ್ಸ್ ಸಿಇಒ ಅಕ್ಷಯೆ ವಿಧಾನಿ ಹೇಳಿದ್ದಾರೆ.

ಯಶ್ ರಾಜ್ ಫಿಲ್ಮ್ಸ್ ಪ್ರಕಾರ, ಪಠಾಣ್ ಚಿತ್ರವು 21 ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದಿದೆ. ಚಿತ್ರದಲ್ಲಿ ಸಲ್ಮಾನ್ ಖಾನ್, ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

andolanait

Recent Posts

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

9 mins ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

28 mins ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

1 hour ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

2 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

2 hours ago

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ ಜಿಐಎಸ್ ಆಧಾರಿತ ಆಪ್ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…

2 hours ago