ಚಿತ್ರ ಮಂಜರಿ

ಬಿಡುಗಡೆಗೊಂಡ ಮೂರೇ ದಿನಕ್ಕೆ ಭರ್ಜರಿ ಗಳಿಕೆಯತ್ತ ʼಪಠಾಣ್ʼ ಸಿನಿಮಾ

ನವದೆಹಲಿ: ಶಾರುಖ್ ಖಾನ್, ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ಮುಖ್ಯ ಭೂಮಿಕೆಯಲ್ಲಿರುವ ಹಿಂದಿಯ ಪಠಾಣ್ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಮೂರೇ ದಿನಗಳಲ್ಲಿ ₹313 ಕೋಟಿ ಗಳಿಕೆ ಕಂಡಿದೆ. ಜನವರಿ 25ರಂದು ತೆರೆ ಕಂಡ ಚಿತ್ರ ಮೂರನೇ ದಿನ ಹಿಂದಿಯಲ್ಲಿ ₹38 ಕೋಟಿ ನಿವ್ವಳ ಗಳಿಕೆ ಕಂಡಿದೆ. ಇತರೆ ಭಾಷೆಗಳಲ್ಲಿ ₹1.25 ಕೋಟಿ ಗಳಿಸಿದೆ ಎಂದು ಚಿತ್ರ ನಿರ್ಮಾಣ ಮಾಡಿರುವ ಯಶ್‌ ರಾಜ್ ಫಿಲ್ಮ್ಸ್ ತಿಳಿಸಿದೆ.

‘ಮೂರನೇ ದಿನ ಚಿತ್ರವು ಭಾರತದಲ್ಲಿ ₹39.25 ನಿವ್ವಳ ಗಳಿಕೆ (ಒಟ್ಟು ₹47ಕೋಟಿ) ಕಂಡಿದ್ದು, ವಿದೇಶದಲ್ಲಿ ಒಟ್ಟು ₹43 ಕೋಟಿ ಗಳಿಸಿದೆ. ಒಟ್ಟಾರೆ ವಿಶ್ವದಾದ್ಯಂತ ಮೂರನೇ ದಿನದ ಗಳಿಕೆ ₹90 ಕೋಟಿ ಆಗಿದೆ’ ಎಂದು ಸಂಸ್ಥೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. 4 ವರ್ಷಗಳ ದೀರ್ಘ ವಿರಾಮದ ಬಳಿಕ ತೆರೆ ಕಂಡಿರುವ ಶಾರುಖ್ ಖಾನ್ ಅವರ ಚಿತ್ರ ಮೊದಲ ದಿನವೇ ವಿಶ್ವದಾದ್ಯಂತ ₹106 ಕೋಟಿ ಗಳಿಸಿತ್ತು. ಎರಡನೇ ದಿನ ₹113.6 ಕೋಟಿ ಮತ್ತು ಮೂರನೇ ದಿನ ₹90 ಕೋಟಿ ಗಳಿಸಿದೆ.

ಮೂರು ದಿನಗಳ ಬಳಿಕ ಚಿತ್ರ ಭಾರತದಲ್ಲಿ ₹201 ಕೋಟಿ ಮತ್ತು ವಿದೇಶದಲ್ಲಿ ₹112 ಕೊಟಿ ಗಳಿಕೆ ಕಂಡಿದೆ. ಪಠಾಣ್ ಚಿತ್ರವು ಮೊದಲ ದಿನ ಭಾರತ ಮತ್ತು ವಿದೇಶದಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಹಿಂದಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ‘ಪಠಾಣ್ ಚಿತ್ರವನ್ನು ವಿಶ್ವದಾದ್ಯಂತ ಇರುವ ಭಾರತೀಯರು ಆಶೀರ್ವದಿಸಿದ್ದಾರೆ. ಚಿತ್ರ ಮುನ್ನುಗ್ಗುತ್ತಿರುವ ಪರಿ ಅಭೂತಪೂರ್ವ ಮತ್ತು ಐತಿಹಾಸಿಕವಾದದ್ದು’ಎಂದು ಯಶ್ ರಾಜ್ ಫಿಲ್ಮ್ಸ್ ಸಿಇಒ ಅಕ್ಷಯೆ ವಿಧಾನಿ ಹೇಳಿದ್ದಾರೆ.

ಯಶ್ ರಾಜ್ ಫಿಲ್ಮ್ಸ್ ಪ್ರಕಾರ, ಪಠಾಣ್ ಚಿತ್ರವು 21 ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದಿದೆ. ಚಿತ್ರದಲ್ಲಿ ಸಲ್ಮಾನ್ ಖಾನ್, ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

andolanait

Recent Posts

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

22 mins ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

36 mins ago

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ ಜಿಐಎಸ್ ಆಧಾರಿತ ಆಪ್ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…

1 hour ago

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

5 hours ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

9 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

9 hours ago