ಚಿತ್ರ ಮಂಜರಿ

ಜವಾನ್ ಗೆ ಪೈರಸಿ ಕಾಟ : ಪೊಲೀಸರಿಗೆ ದೂರು ನೀಡಿದ ಶಾರುಖ್‌

ಬಾಕ್ಸ್ ಆಫೀಸಿನಲ್ಲಿ ಭಾರೀ ಕಮಾಲ್ ಮಾಡುತ್ತಿರುವ ಜವಾನ್ ಚಿತ್ರಕ್ಕೆ ಪೈರಸಿ ಕಾಟ ಶುರುವಾಗಿದೆ. ಬಿಡುಗಡೆಯಾದ ಕೆಲವೇ ದಿನಗಳಲ್ಲೇ ಥಿಯೇಟರ್ ನಲ್ಲಿ ಶೂಟ್ ಮಾಡಲಾದ ಜವಾನ್ ಸಿನಿಮಾವನ್ನು ರಿಲೀಸ್ ಮಾಡಿದ್ದು, ಅದು ಸೋಷಿಯಲ್ ಮೀಡಿಯಾದಲ್ಲೂ ಶೇರ್ ಆಗಿದೆ. ಈ ಲಿಂಕ್ ಅನ್ನು ಹಂಚಿಕೊಳ್ಳುವವರ ವಿರುದ್ಧ ಶಾರುಖ್ ಖಾನ್ ಸಮರಕ್ಕೆ ಮುಂದಾಗಿದ್ದಾರೆ.

ಸ್ವತಃ ಶಾರುಖ್ ಖಾನ್ ಅವರೇ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಇವರ ಪತ್ನಿ ಗೌರಿ ಖಾನ್ ಇದರ ನಿರ್ಮಾಪಕರು. ಹಾಗಾಗಿ ಪೈರಸಿ ಮಾಡುವವರ ವಿರುದ‍್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಈ ಕುರಿತಾಗಿ ಈಗಾಗಲೇ ಅವರು ಮುಂಬೈನ ಸಾಂತಾಕ್ರೂಜ್ ವೆಸ್ಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜೊತೆಗೆ ಪೈರಸಿ ಪತ್ತೆ ಹಚ್ಚುವಂತಹ ಏಜೆನ್ಸಿಗಳನ್ನೂ ಅವರು ನೇಮಿಸಿಕೊಂಡಿದ್ದಾರೆ.

ಜವಾನ್ ಸಿನಿಮಾ ಚಿತ್ರಮಂದಿರಲ್ಲಿ ಸಕ್ಸಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಈ ನಡುವೆಯೇ ಜವಾನ್ 2 ಬರುವ ಬಗ್ಗೆ ಗುಡ್ ನ್ಯೂಸ್ ಸಿಕ್ಕಿದೆ. ಶಾರುಖ್- ವಿಜಯ್ ಸೇತುಪತಿ ಜುಗಲ್‌ಬಂದಿ ಜವಾನ್ ಸಿನಿಮಾದಲ್ಲಿ ವರ್ಕೌಟ್ ಆಗಿದೆ. ಸದಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಇರುವ ಶಾರುಖ್‌ಗೆ ಜವಾನ್ ಚಿತ್ರದ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಅವರ ಉತ್ತರ ಜವಾನ್ 2 ಬರುವ ಬಗ್ಗೆ ಸೂಚನೆ ಕೊಟ್ಟಿದೆ

ಅಭಿಮಾನಿಯೊಬ್ಬರು, ಸರ್, ನೀವೇಕೆ ಕಾಳಿ ವಿಜಯ್ ಸೇತುಪತಿ ಜೊತೆಗೆ ಡೀಲ್ ಮಾಡಿಕೊಳ್ಳಲಿಲ್ಲ? ನಾನು ವಿಜಯ್ ಸೇತುಪತಿ ಸರ್‌ಗೆ ದೊಡ್ಡ ಅಭಿಮಾನಿ ಎಂದು ಟ್ವೀಟ್ ಮಾಡಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಶಾರುಖ್ ಖಾನ್, ನಾನು ಕೂಡ ವಿಜಯ್ ಸರ್‌ಗೆ ದೊಡ್ಡ ಅಭಿಮಾನಿ. ನಾನು ಈಗಾಗಲೇ ಕಾಳಿಯ ಕಪ್ಪು ಹಣವನ್ನು ತೆಗೆದುಕೊಂಡು ಬಂದಿದ್ದೇನೆ. ಈಗ ಬೇರೆಯವರ ಕಪ್ಪು ಹಣವನ್ನು ಹೊರ ತೆಗೆಯುವುದಕ್ಕೆ ಕಾಯುತ್ತಿದ್ದೇನೆ. ವೀಸಾಗಾಗಿ ಕಾಯುತ್ತಿದ್ದೇನೆ ಎಂದು ಟ್ಟೀಟ್ ಮಾಡಿದ್ದಾರೆ. ಈ ಟ್ವೀಟ್ ಜವಾನ್ 2 ಬರುವ ಬಗ್ಗೆ ಸೂಚನೆ ನೀಡುತ್ತಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ.

ವಾನ್‌ನಲ್ಲಿ ಕ್ಲೈಮ್ಯಾಕ್ಸ್‌ನಲ್ಲಿ ಮುಗಿದ ಮೇಲೆ ಪಾರ್ಟ್ 2 ಬರುವ ರೀತಿಯಲ್ಲಿ ಒಂದು ಸೀನ್ ಇಡಲಾಗಿದೆ. ಅದಕ್ಕೆ ತಕ್ಕಂತೆ ಶಾರುಖ್ ಟ್ವೀಟ್ ಕೂಡ ಹೋಲಿಕೆಯಾಗುತ್ತಿದೆ. ಜವಾನ್ ಸೀಕ್ವೆಲ್ ಬಂದೇ ಬರುತ್ತೆ ಅಂತಾ ಫ್ಯಾನ್ಸ್ ಸಂಭ್ರಮದಲ್ಲಿದ್ದಾರೆ.ಜವಾನ್ 2 ಬರುವ ಬಗ್ಗೆ ಈ ಮೂಲಕ ನಟ ಸುಳಿವು ನೀಡಿದ್ರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

lokesh

Recent Posts

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು : ಸಂಸದ ಯದುವೀರ್‌

ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು.…

36 mins ago

ಬಾಲವಿಕಾಸ ಅಕಾಡೆಮಿಯ ಬಾಲಗೌರವ ಪ್ರಶಸ್ತಿ : ಮೈಸೂರಿನ ತಬಲಾ ಬಾಲ ಪ್ರತಿಭೆ ಪಂಚಮಿ ಬಿದನೂರು ಸೇರಿದಂತೆ ಅನೇಕರಿಗೆ ಪ್ರಶಸ್ತಿ

ಬೆಳಗಾವಿ : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದ ಉತ್ತರ ಪ್ರವೇಶ ದ್ವಾರದ ಬಳಿ ಇರುವ…

38 mins ago

ಅಕ್ರಮ ಗಾಂಜಾ ಮಾರಾಟ : ಮಹಿಳೆ ಪೊಲೀಸ್ ವಶಕ್ಕೆ

ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…

2 hours ago

ಮತಗಳ್ಳತನದ ಹೋರಾಟದಲ್ಲಿ ರಾಜಕೀಯ ಉದ್ದೇಶವಿಲ್ಲ : ಡಿ.ಕೆ.ಶಿವಕುಮಾರ್

ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…

3 hours ago

10 ವರ್ಷದ ಪ್ರೀತಿಗೆ ಮೋಸ,ಹಣವೂ ದೋಖಾ : ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ

ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…

5 hours ago

ವರ್ಷಾಂತ್ಯಕ್ಕೂ ಸಫಾರಿ ಪುನಾರಂಭ ಸಾಧ್ಯತೆ ಕ್ಷೀಣ

ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…

5 hours ago