ಚಿತ್ರ ಮಂಜರಿ

ಜವಾನ್ ಗೆ ಪೈರಸಿ ಕಾಟ : ಪೊಲೀಸರಿಗೆ ದೂರು ನೀಡಿದ ಶಾರುಖ್‌

ಬಾಕ್ಸ್ ಆಫೀಸಿನಲ್ಲಿ ಭಾರೀ ಕಮಾಲ್ ಮಾಡುತ್ತಿರುವ ಜವಾನ್ ಚಿತ್ರಕ್ಕೆ ಪೈರಸಿ ಕಾಟ ಶುರುವಾಗಿದೆ. ಬಿಡುಗಡೆಯಾದ ಕೆಲವೇ ದಿನಗಳಲ್ಲೇ ಥಿಯೇಟರ್ ನಲ್ಲಿ ಶೂಟ್ ಮಾಡಲಾದ ಜವಾನ್ ಸಿನಿಮಾವನ್ನು ರಿಲೀಸ್ ಮಾಡಿದ್ದು, ಅದು ಸೋಷಿಯಲ್ ಮೀಡಿಯಾದಲ್ಲೂ ಶೇರ್ ಆಗಿದೆ. ಈ ಲಿಂಕ್ ಅನ್ನು ಹಂಚಿಕೊಳ್ಳುವವರ ವಿರುದ್ಧ ಶಾರುಖ್ ಖಾನ್ ಸಮರಕ್ಕೆ ಮುಂದಾಗಿದ್ದಾರೆ.

ಸ್ವತಃ ಶಾರುಖ್ ಖಾನ್ ಅವರೇ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಇವರ ಪತ್ನಿ ಗೌರಿ ಖಾನ್ ಇದರ ನಿರ್ಮಾಪಕರು. ಹಾಗಾಗಿ ಪೈರಸಿ ಮಾಡುವವರ ವಿರುದ‍್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಈ ಕುರಿತಾಗಿ ಈಗಾಗಲೇ ಅವರು ಮುಂಬೈನ ಸಾಂತಾಕ್ರೂಜ್ ವೆಸ್ಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜೊತೆಗೆ ಪೈರಸಿ ಪತ್ತೆ ಹಚ್ಚುವಂತಹ ಏಜೆನ್ಸಿಗಳನ್ನೂ ಅವರು ನೇಮಿಸಿಕೊಂಡಿದ್ದಾರೆ.

ಜವಾನ್ ಸಿನಿಮಾ ಚಿತ್ರಮಂದಿರಲ್ಲಿ ಸಕ್ಸಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಈ ನಡುವೆಯೇ ಜವಾನ್ 2 ಬರುವ ಬಗ್ಗೆ ಗುಡ್ ನ್ಯೂಸ್ ಸಿಕ್ಕಿದೆ. ಶಾರುಖ್- ವಿಜಯ್ ಸೇತುಪತಿ ಜುಗಲ್‌ಬಂದಿ ಜವಾನ್ ಸಿನಿಮಾದಲ್ಲಿ ವರ್ಕೌಟ್ ಆಗಿದೆ. ಸದಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಇರುವ ಶಾರುಖ್‌ಗೆ ಜವಾನ್ ಚಿತ್ರದ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಅವರ ಉತ್ತರ ಜವಾನ್ 2 ಬರುವ ಬಗ್ಗೆ ಸೂಚನೆ ಕೊಟ್ಟಿದೆ

ಅಭಿಮಾನಿಯೊಬ್ಬರು, ಸರ್, ನೀವೇಕೆ ಕಾಳಿ ವಿಜಯ್ ಸೇತುಪತಿ ಜೊತೆಗೆ ಡೀಲ್ ಮಾಡಿಕೊಳ್ಳಲಿಲ್ಲ? ನಾನು ವಿಜಯ್ ಸೇತುಪತಿ ಸರ್‌ಗೆ ದೊಡ್ಡ ಅಭಿಮಾನಿ ಎಂದು ಟ್ವೀಟ್ ಮಾಡಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಶಾರುಖ್ ಖಾನ್, ನಾನು ಕೂಡ ವಿಜಯ್ ಸರ್‌ಗೆ ದೊಡ್ಡ ಅಭಿಮಾನಿ. ನಾನು ಈಗಾಗಲೇ ಕಾಳಿಯ ಕಪ್ಪು ಹಣವನ್ನು ತೆಗೆದುಕೊಂಡು ಬಂದಿದ್ದೇನೆ. ಈಗ ಬೇರೆಯವರ ಕಪ್ಪು ಹಣವನ್ನು ಹೊರ ತೆಗೆಯುವುದಕ್ಕೆ ಕಾಯುತ್ತಿದ್ದೇನೆ. ವೀಸಾಗಾಗಿ ಕಾಯುತ್ತಿದ್ದೇನೆ ಎಂದು ಟ್ಟೀಟ್ ಮಾಡಿದ್ದಾರೆ. ಈ ಟ್ವೀಟ್ ಜವಾನ್ 2 ಬರುವ ಬಗ್ಗೆ ಸೂಚನೆ ನೀಡುತ್ತಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ.

ವಾನ್‌ನಲ್ಲಿ ಕ್ಲೈಮ್ಯಾಕ್ಸ್‌ನಲ್ಲಿ ಮುಗಿದ ಮೇಲೆ ಪಾರ್ಟ್ 2 ಬರುವ ರೀತಿಯಲ್ಲಿ ಒಂದು ಸೀನ್ ಇಡಲಾಗಿದೆ. ಅದಕ್ಕೆ ತಕ್ಕಂತೆ ಶಾರುಖ್ ಟ್ವೀಟ್ ಕೂಡ ಹೋಲಿಕೆಯಾಗುತ್ತಿದೆ. ಜವಾನ್ ಸೀಕ್ವೆಲ್ ಬಂದೇ ಬರುತ್ತೆ ಅಂತಾ ಫ್ಯಾನ್ಸ್ ಸಂಭ್ರಮದಲ್ಲಿದ್ದಾರೆ.ಜವಾನ್ 2 ಬರುವ ಬಗ್ಗೆ ಈ ಮೂಲಕ ನಟ ಸುಳಿವು ನೀಡಿದ್ರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

lokesh

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

3 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

3 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

3 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

3 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

3 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago