ಚಿತ್ರ ಮಂಜರಿ

ವಿಮಾನ ಪತನ: ನಟ ಕ್ರಿಸ್ಟಿಯನ್ ಆಲಿವರ್ ನಿಧನ

ಲಾಸ್ ಏಂಜಲೀಸ್: ಕೆರಿಬಿಯನ್ ಸಮುದ್ರ ದ್ವೀಪದಲ್ಲಿ ಶುಕ್ರವಾರ ಪತನಗೊಂಡ ವಿಮಾಣದಲ್ಲಿ ಜರ್ಮನ್ ಮೂಲದ ಹಾಲಿವುಡ್ ನಟ ಕ್ರಿಸ್ಟಿಯನ್ ಆಲಿವರ್ ಮತ್ತವರ ಇಬ್ಬರು ಪುತ್ರಿಯರು ಮತ್ತು ಪೈಲೆಟ್‌ ಸೇರಿದಂತೆ ಒಟ್ಟು ನಾಲ್ಕು ಜನರು ಮರಣ ಹೊಂದಿದ್ದಾರೆ.

ಕೆರೆಬಿಯನ್ ದ್ವೀಪ ಪ್ರದೇಶವಾದ ಬೆಕ್ವಿಯಾದಿಂದ ಸಣ್ಣ ವಿಮಾನದಲ್ಲಿ ಮಕ್ಕಳೊಡನೆ ಆಲಿವರ್‌ ಪ್ರಯಾಣಿಸುತ್ತಿದ್ದು, ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್ ದ್ವೀಪ ಪ್ರದೇಶದ ಸಮುದ್ರದಲ್ಲಿ ವಿಮಾನ ಪತನವಾಗಿದೆ.

ಸ್ಥಳಕ್ಕೆ ಕೋಸ್ಟ್‌ ಗಾರ್ಡ್‌, ನೌಕಾದಳ ಧಾವಿಸಿದ್ದು, ಮೃತದೇಹಗಳನ್ನು ಹೊರತೆಗೆಯಲಾಗಿದೆ. ವಿಮಾನ ಪತನಕ್ಕೆ ಕಾರಣ ತಿಳಿದುಬಂದಿಲ್ಲ, ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸೇಂಟ್ ವಿನ್ಸೆಂಟ್ ಪೊಲೀಸರು ತಿಳಿಸಿದ್ದಾರೆ.

ಜರ್ಮನಿ ಮೂಲದ ನಟ ಆಲಿವರ್ ಅವರು ಹಾಲಿವುಡ್‌ನ ‘ಸ್ಪೀಡ್ ರೇಸರ್’, ‘ದಿ ಗುಡ್ ಜರ್ಮನ್’, ‘ಜಿಪ್ಪರ್’, ‘ಇಂಡಿಯಾನ ಜೋನಸ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ‘ಸೇವ್ ಬೈ ದಿ ಬೆಲ್’, ‘ದಿ ನ್ಯೂ ಕ್ಲಾಸ್’ ಎಂಬ ಟೆಲಿವಿಷನ್ ಸಿರೀಸ್‌ಗಳಲ್ಲಿಯೂ ಅವರು ಅಭಿನಯಿಸಿದ್ದು, 35ಕ್ಕೂ ಹೆಚ್ಚು ಸಿನಿಮಾ, ಟಿವಿ ಸಿರೀಸ್‌ಗಳಿಗೆ ಅವರು ಬಣ್ಣ ಹಚ್ಚಿದ್ದರು.

andolanait

Recent Posts

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

8 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

26 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

49 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago

ಓದುಗರ ಪತ್ರ: ರತನ್‌ ಟಾಟಾರಿಗೆ ಭಾರತರತ್ನ ನೀಡಿ

ಕೆಲ ಗಣ್ಯರು ನಿಧನರಾದಾಗ ದುಃಖವಾಗುತ್ತದೆ. ಇನ್ನೂ ಕೆಲ ಗಣ್ಯರನ್ನು ಕಳೆದುಕೊಂಡಾಗ ದುಃಖದ ಕೋಡಿಯೇ ಹರಿಯುತ್ತದೆ; ದೇಶಾದ್ಯಂತ ಮೌನ ಹೆಪ್ಪುಗಟ್ಟುತ್ತದೆ. ಹೀಗೆ…

3 hours ago