ಚಿತ್ರ ಮಂಜರಿ

ವಿಮಾನ ಪತನ: ನಟ ಕ್ರಿಸ್ಟಿಯನ್ ಆಲಿವರ್ ನಿಧನ

ಲಾಸ್ ಏಂಜಲೀಸ್: ಕೆರಿಬಿಯನ್ ಸಮುದ್ರ ದ್ವೀಪದಲ್ಲಿ ಶುಕ್ರವಾರ ಪತನಗೊಂಡ ವಿಮಾಣದಲ್ಲಿ ಜರ್ಮನ್ ಮೂಲದ ಹಾಲಿವುಡ್ ನಟ ಕ್ರಿಸ್ಟಿಯನ್ ಆಲಿವರ್ ಮತ್ತವರ ಇಬ್ಬರು ಪುತ್ರಿಯರು ಮತ್ತು ಪೈಲೆಟ್‌ ಸೇರಿದಂತೆ ಒಟ್ಟು ನಾಲ್ಕು ಜನರು ಮರಣ ಹೊಂದಿದ್ದಾರೆ.

ಕೆರೆಬಿಯನ್ ದ್ವೀಪ ಪ್ರದೇಶವಾದ ಬೆಕ್ವಿಯಾದಿಂದ ಸಣ್ಣ ವಿಮಾನದಲ್ಲಿ ಮಕ್ಕಳೊಡನೆ ಆಲಿವರ್‌ ಪ್ರಯಾಣಿಸುತ್ತಿದ್ದು, ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್ ದ್ವೀಪ ಪ್ರದೇಶದ ಸಮುದ್ರದಲ್ಲಿ ವಿಮಾನ ಪತನವಾಗಿದೆ.

ಸ್ಥಳಕ್ಕೆ ಕೋಸ್ಟ್‌ ಗಾರ್ಡ್‌, ನೌಕಾದಳ ಧಾವಿಸಿದ್ದು, ಮೃತದೇಹಗಳನ್ನು ಹೊರತೆಗೆಯಲಾಗಿದೆ. ವಿಮಾನ ಪತನಕ್ಕೆ ಕಾರಣ ತಿಳಿದುಬಂದಿಲ್ಲ, ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸೇಂಟ್ ವಿನ್ಸೆಂಟ್ ಪೊಲೀಸರು ತಿಳಿಸಿದ್ದಾರೆ.

ಜರ್ಮನಿ ಮೂಲದ ನಟ ಆಲಿವರ್ ಅವರು ಹಾಲಿವುಡ್‌ನ ‘ಸ್ಪೀಡ್ ರೇಸರ್’, ‘ದಿ ಗುಡ್ ಜರ್ಮನ್’, ‘ಜಿಪ್ಪರ್’, ‘ಇಂಡಿಯಾನ ಜೋನಸ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ‘ಸೇವ್ ಬೈ ದಿ ಬೆಲ್’, ‘ದಿ ನ್ಯೂ ಕ್ಲಾಸ್’ ಎಂಬ ಟೆಲಿವಿಷನ್ ಸಿರೀಸ್‌ಗಳಲ್ಲಿಯೂ ಅವರು ಅಭಿನಯಿಸಿದ್ದು, 35ಕ್ಕೂ ಹೆಚ್ಚು ಸಿನಿಮಾ, ಟಿವಿ ಸಿರೀಸ್‌ಗಳಿಗೆ ಅವರು ಬಣ್ಣ ಹಚ್ಚಿದ್ದರು.

andolanait

Recent Posts

ಮಹದೇಶ್ವರಬೆಟ್ಟ ಠಾಣೆ ಮುಖ್ಯಪೇದೆ ಅಮಾನತ್ತು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಲಾರಿ ಚಾಲಕನ ಜೊತೆ ಅಸಭ್ಯವಾಗಿ ವರ್ತಿಸಿದ್ದ ಪೊಲೀಸ್ ಮುಖ್ಯಪೇದೆಯನ್ನು ಕೊಳ್ಳೇಗಾಲ…

10 hours ago

ಸಾಕು ನಾಯಿ ಹೊತ್ತೊಯ್ದ ಚಿರತೆ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ನಂಜನಗೂಡು: ಚಿರತೆಯೊಂದು ಸಾಕು ನಾಯಿಯನ್ನು ಹೊತ್ತೊಯ್ದಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ತಾಲ್ಲೂಕಿನ ವೀರೇಗೌಡನ ಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

11 hours ago

ಹನೂರು| ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಮತ್ತೊಂದು ಚಿರತೆ ಸೆರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ತಪ್ಪಲಿನ ಇಂಡಿಗನತ್ತ, ನಾಗಮಲೆ ಗ್ರಾಮಗಳಲ್ಲಿ ಹಲವಾರು…

11 hours ago

ಮೈಸೂರು ಜಿಲ್ಲೆಯಲ್ಲಿ ಶೇ.96 ರಷ್ಟು ಮತದಾರರ ಮ್ಯಾಪಿಂಗ್‌ ಪೂರ್ಣ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

12 hours ago

ಕೆಆರ್‌ಎಸ್‌ನಲ್ಲಿ ನೀರಿನ ಕೊರತೆಯಿಲ್ಲ: ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ: ರೈತರು ಹಾಗೂ ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ಕೆಆರ್‌ಎಸ್‌ನಲ್ಲಿ ಸದ್ಯಕ್ಕೆ ನೀರಿನ ಕೊರತೆಯಿಲ್ಲ ಎಂದು ಶಾಸಕ…

12 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಮಂತ್ರಿ ಸ್ಥಾನ ಇರಬೇಕಿತ್ತು: ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಮಂತ್ರಿ ಸ್ಥಾನ ಇರಬೇಕಿತ್ತು ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು…

13 hours ago