ಚಿತ್ರ ಮಂಜರಿ

ದರ್ಶನ್‌ ಕೈನಲ್ಲಿ ಲಾಂಗ್;‌ ಕೇಸ್‌ ಆಗುತ್ತಾ, ಪೊಲೀಸ್‌ ಆಯುಕ್ತರು ಹೇಳಿದ್ದೇನು?

ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ವಿವಾದಗಳು ಯಾಕೋ ಬಿಡುವಂತೆ ಕಾಣುತ್ತಿಲ್ಲ. ಒಂದಲ್ಲ ಒಂದು ವಿಷಯಕ್ಕೆ ದರ್ಶನ್‌ ಕಾಂಟ್ರವರ್ಸಿಯಲ್ಲಿ ಇದ್ದೇ ಇರುತ್ತಾರೆ. ಕೆಲ ದಿನಗಳ ಹಿಂದೆ ಬಿಗ್‌ ಬಾಸ್‌ ಸ್ಪರ್ಧಿ ವರ್ತೂರ್‌ ಸಂತೋಷ್‌ ಹುಲಿ ಉಗುರಿನ ಪೆಂಡೆಂಟ್‌ ಧರಿಸಿದ್ದ ಕಾರಣ ಅರೆಸ್ಟ್‌ ಆದ ಬೆನ್ನಲ್ಲೇ ದರ್ಶನ್‌ ಹುಲಿ ಉಗುರಿನ ಪೆಂಡೆಂಟ್‌ ಧರಿಸಿದ್ದ ಫೋಟೊವೊಂದು ವೈರಲ್‌ ಆಗಿತ್ತು ಹಾಗೂ ದರ್ಶನ್‌ ಅವರನ್ನು ಯಾವಾಗ ಬಂಧಿಸುತ್ತೀರ ಎಂಬ ಪ್ರಶ್ನೆಗಳೂ ಸಹ ಎದ್ದಿದ್ದವು.

ಹೀಗೆ ಈ ವಿವಾದದಲ್ಲಿ ದರ್ಶನ್‌ ಅವರ ಹೆಸರು ತಳುಕಿ ಹಾಕಿಕೊಂಡದ್ದು ಮರೆಯಾಗುವ ಮುನ್ನವೇ ದರ್ಶನ್‌ ಅವರ ಹೆಸರು ಮತ್ತೊಂದು ವಿವಾದದಲ್ಲಿ ಕೇಳಿ ಬರುತ್ತಿದೆ. ಹೌದು, ರಾಜ್ಯೋತ್ಸವ ಆಚರಣೆಯ ಕಾರ್ಯಕ್ರಮದಲ್ಲಿ ದರ್ಶನ್‌ ಬೆಳ್ಳಿ ಲಾಂಗ್‌ ಹಿಡಿದು ಪ್ರದರ್ಶಿಸಿದ ಕಾರಣ ಅವರನ್ನು ಬಂಧಿಸಲಾಗುತ್ತದೆ ಎನ್ನಲಾಗುತ್ತಿದೆ.

ಬೆಂಗಳೂರಿನ ಜಯನಗರದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ದರ್ಶನ್‌ ಅವರನ್ನು ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಲಾಗಿತ್ತು. ವೇದಿಕೆ ಮೇಲೆ ದರ್ಶನ್‌ ಅವರನ್ನು ಸನ್ಮಾನಿಸಿದ ಅಭಿಮಾನಿಗಳು ಬೆಳ್ಳಿಯ ಕಿರೀಟ ಹಾಗೂ ಬೆಳ್ಳಿ ಮಚ್ಚನ್ನು ಉಡುಗೊರೆಯನ್ನಾಗಿ ನೀಡಿದರು. ಅಭಿಮಾನಿಗಳು ನೀಡಿದ ಲಾಂಗ್‌ ಅನ್ನು ದರ್ಶನ್‌ ಎತ್ತಿ ಹಿಡಿದು ಪೋಸ್‌ ನೀಡಿದರು.

ಇನ್ನು ದರ್ಶನ್‌ ಲಾಂಗ್‌ ಹಿಡಿದ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆಯೇ ದರ್ಶನ್‌ ಅರೆಸ್ಟ್‌ ಏನಾದರೂ ಆಗ್ತಾರಾ ಎಂಬ ಪ್ರಶ್ನೆ ಎದ್ದಿದೆ. ಈ ಕುರಿತು ಮಾತನಾಡಿರುವ ಬೆಂಗಳೂರು ಪೊಲೀಸ್‌ ಆಯುಕ್ತ ಬಿ ದಯಾನಂದ್‌ ಅವರು “ಅದು ನಿಜವಾದಾ ಮಚ್ಚಾ ಅಥವಾ ನಕಲಿನ ಎಂಬುದನ್ನು ಪರಿಶೀಲಿಸುತ್ತೇವೆ. ಕಾನೂನಾತ್ಮಕವಾಗಿ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲಾಗುವುದು” ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ದರ್ಶನ್‌ ತಪ್ಪು ಮಾಡಿದ್ರೆ ಖಂಡಿತವಾಗಿ ಶಿಕ್ಷೆ ಆಗುತ್ತೆ ಎಂದು ಬಿ ದಯಾನಂದ್‌ ಪರೋಕ್ಷವಾಗಿ ಹೇಳಿದ್ದಾರೆ.

andolana

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

8 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

8 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

9 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

9 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

10 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

10 hours ago