ಚಿತ್ರ ಮಂಜರಿ

ಮುಂಗಾರುಮಳೆ ಮನೆಯಲ್ಲಿ ಪೂಜಾ ಗಾಂಧಿ

ಮದುವೆಯ ಬಳಿಕ ನಟಿ ಪೂಜಾ ಗಾಂಧಿಯವರು ತಮ್ಮ ಪತಿ ವಿಜಯ್‌ ಘೋರ್ಪಡೆ ಅವರೊಂದಿಗೆ ಕವಿಶೈಲಕ್ಕೆ ಭೇಟಿ ನೀಡಿದ್ದರು. ಇದೀಗ ಮುಂಗಾರು ಮಳೆ ಚಿತ್ರದ ಚಿತ್ರೀಕರಣ ನಡೆದ ಮನೆಗೆ ಮಳೆ ಹುಡುಗಿ ವಿಸಿಟ್‌ ಕೊಟ್ಟಿದ್ದಾರೆ.

ಮುಂಗಾರುಮಳೆ ಮನೆಗೆ ಹೊಗಿರುವ ವಿಡಿಯೋವನ್ನು ನಟಿ ಪೂಜಾಗಾಂಧಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಸಿನಿಮಾ ಚಿತ್ರೀಕರಣದ ಸಿಹಿ ಕ್ಷಣಗಳನ್ನು ಮೆಲುಕು ಹಾಕಿದ್ದಾರೆ.

ಕುಪ್ಪಳಿ ಬಳಿಕ ಮುಂಗಾರು ಮಳೆ ಚಿತ್ರದ ಶೂಟಿಂಗ್‌ ನಡೆದಿದ್ದ ಸಕಲೇಶಪುರಕ್ಕೆ ಭೇಟಿ ಕೊಟ್ಟಿರುವ ಪೂಜಾ ಗಾಂಧಿ ಮುಂಗಾರು ಮಳೆ ಮನೆಯಲ್ಲಿ ಸುಂದರ ಕ್ಷಣಗಳನ್ನು ಕಳೆದಿದ್ದು, ಮನೆಯ ವಿಡಿಯೋ ಮಾಡುತ್ತಾ ಮಾತನಾಡಿದ್ದಾರೆ. ಸಿನಿಮಾ ಚಿತ್ರೀಕರಣದ ವೇಳೆ ನಡೆದಿದ್ದ ಸಿಹಿ ಘಟನೆಗಳನ್ನು ಹಂಚಿಕೊಂಡಿದ್ದು, ಮನೆಯ ಯಾವ ಭಾಗದಲ್ಲಿ ಯಾವ ಸೀನ್‌ ಚಿತ್ರೀಕರಣ ಮಾಡಲಾಗಿದೆ ಎಂಬುದನ್ನು ವಿವರಿಸಿದ್ದಾರೆ.

ಇನ್ನು ತಮ್ಮ ಅಚ್ಚು ಮೆಚ್ಚಿನ ಜಾಗವಾದ ಔಟ್‌ ಹೌಸ್‌ ನಲ್ಲಿ ಪದ್ಮಜಾ ರಾವ್‌, ಸುಧಾ ಬೆಳವಾಡಿ ಅವರೊಂದಿಗೆ ಕಳೆದ ಸುಂದರ ಕ್ಷಣಗಳನ್ನು ಅತ್ಯಂತ ಸಂತೋಷದಿಂದ ಮೆಲುಕು ಹಾಕಿರುವ ಪೂಜಾಗಾಂಧಿ ಇದು ನಮ್ಮೆಲ್ಲರ ಅಚ್ಚುಮೆಚ್ಚಿನ ಜಾಗವಾಗಿತ್ತು. ನಮ್ಮೆಲ್ಲರಿಗೂ ಇದು ಮೇಕಪ್‌ ರೂಮ್‌ ಆಗಿತ್ತು. ಎಲ್ಲರೂ ಇಲ್ಲಿ ಬಹಳಾ ಎಂಜಾಯ್‌ ಮಾಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ನಾನು 2006 ರಲ್ಲಿ ಮೊದಲ ಬಾರಿಗೆ ಕರ್ನಾಟಕಕ್ಕೆ ಬಂದೆ. ಮುಂಗಾರು ಮಳೆ ಸಿನಿಮಾಗೆ ನಾಯಕಿಯಾಗಿ ಯೋಗರಾಜ್‌ ಭಟ್‌ ಅವರು ನನ್ನನ್ನು ಇಲ್ಲಿಗೆ ಕರೆಸಿಕೊಂಡಿದ್ದರು. ಅವರಿಗೆ ನಾನು ಯಾವಾಗಲೂ ಋಣಿಯಾಗಿರುತ್ತೇನೆ. 2006 ರಲ್ಲಿ ನಾನು ಇಲ್ಲಿಗೆ ಬಂದಾಗ ಈ ಮನೆ, ಜನ ಎಲ್ಲರೂ ಹೊಸಬರು. ಆದರೆ ಈಗ ನಾವೆಲ್ಲರೂ ಚಿರಪರಿಚಿತರು ಎಂದಿದ್ದಾರೆ ನಟಿ ಪೂಜಾ ಗಾಂಧಿ.

ಮದುವೆಯ ಬಳಿಕ ನಾನು ಇಲ್ಲಿಗೆ ಬರಲೇ ಬೇಕು ಎಂದುಕೊಂಡಿದ್ದೆ. ಅದರಂತೆ ಬಂದಿದ್ದೇನೆ. ಈ ಜಾಗಗಳನ್ನು ನೋಡಿದ ಬಳಿಕ ನನ್ನ ಹಳೆಯ ನೆನಪುಗಳು ಮರುಕಳಿಸಿವೆ. ಇದರಿಂದ ಹೇಳಲಾರದಷ್ಟು ಖುಷಿಯಾಗುತ್ತಿದೆ. ಇದು ನನ್ನ ಗ್ರಾಟಿಟಿಟ್ಯೂಡ್‌ ಜರ್ನಿ ಎಂದಿದ್ದಾರೆ.

lokesh

Recent Posts

ಓದುಗರ ಪತ್ರ: ಸುಂಕ ಕದನಕೆ ತೆರೆ!

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…

3 hours ago

ಓದುಗರ ಪತ್ರ: ಶಾಲೆಗೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…

3 hours ago

ಓದುಗರ ಪತ್ರ: ಜಿಲ್ಲಾ ನ್ಯಾಯಾಲಯಗಳಿಗೆ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…

3 hours ago

ಓದುಗರ ಪತ್ರ: ಬೈಕ್ ವ್ಹೀಲಿಂಗ್ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಿ

ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…

3 hours ago

ಓದುಗರ ಪತ್ರ: ಮಹಾರಾಣಿ ಕಾಲೇಜಿನಲ್ಲಿ ಕ್ಯಾಂಟೀನ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…

3 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಸೆರೆಬ್ರಲ್ ಪಾಲ್ಸಿಯನ್ನು ಮಣಿಸಿ ಬದುಕು ಕಟ್ಟಿಕೊಂಡ ಸುಮಿತ್

‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…

3 hours ago