ಚಿತ್ರ ಮಂಜರಿ

ಮುಂಗಾರುಮಳೆ ಮನೆಯಲ್ಲಿ ಪೂಜಾ ಗಾಂಧಿ

ಮದುವೆಯ ಬಳಿಕ ನಟಿ ಪೂಜಾ ಗಾಂಧಿಯವರು ತಮ್ಮ ಪತಿ ವಿಜಯ್‌ ಘೋರ್ಪಡೆ ಅವರೊಂದಿಗೆ ಕವಿಶೈಲಕ್ಕೆ ಭೇಟಿ ನೀಡಿದ್ದರು. ಇದೀಗ ಮುಂಗಾರು ಮಳೆ ಚಿತ್ರದ ಚಿತ್ರೀಕರಣ ನಡೆದ ಮನೆಗೆ ಮಳೆ ಹುಡುಗಿ ವಿಸಿಟ್‌ ಕೊಟ್ಟಿದ್ದಾರೆ.

ಮುಂಗಾರುಮಳೆ ಮನೆಗೆ ಹೊಗಿರುವ ವಿಡಿಯೋವನ್ನು ನಟಿ ಪೂಜಾಗಾಂಧಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಸಿನಿಮಾ ಚಿತ್ರೀಕರಣದ ಸಿಹಿ ಕ್ಷಣಗಳನ್ನು ಮೆಲುಕು ಹಾಕಿದ್ದಾರೆ.

ಕುಪ್ಪಳಿ ಬಳಿಕ ಮುಂಗಾರು ಮಳೆ ಚಿತ್ರದ ಶೂಟಿಂಗ್‌ ನಡೆದಿದ್ದ ಸಕಲೇಶಪುರಕ್ಕೆ ಭೇಟಿ ಕೊಟ್ಟಿರುವ ಪೂಜಾ ಗಾಂಧಿ ಮುಂಗಾರು ಮಳೆ ಮನೆಯಲ್ಲಿ ಸುಂದರ ಕ್ಷಣಗಳನ್ನು ಕಳೆದಿದ್ದು, ಮನೆಯ ವಿಡಿಯೋ ಮಾಡುತ್ತಾ ಮಾತನಾಡಿದ್ದಾರೆ. ಸಿನಿಮಾ ಚಿತ್ರೀಕರಣದ ವೇಳೆ ನಡೆದಿದ್ದ ಸಿಹಿ ಘಟನೆಗಳನ್ನು ಹಂಚಿಕೊಂಡಿದ್ದು, ಮನೆಯ ಯಾವ ಭಾಗದಲ್ಲಿ ಯಾವ ಸೀನ್‌ ಚಿತ್ರೀಕರಣ ಮಾಡಲಾಗಿದೆ ಎಂಬುದನ್ನು ವಿವರಿಸಿದ್ದಾರೆ.

ಇನ್ನು ತಮ್ಮ ಅಚ್ಚು ಮೆಚ್ಚಿನ ಜಾಗವಾದ ಔಟ್‌ ಹೌಸ್‌ ನಲ್ಲಿ ಪದ್ಮಜಾ ರಾವ್‌, ಸುಧಾ ಬೆಳವಾಡಿ ಅವರೊಂದಿಗೆ ಕಳೆದ ಸುಂದರ ಕ್ಷಣಗಳನ್ನು ಅತ್ಯಂತ ಸಂತೋಷದಿಂದ ಮೆಲುಕು ಹಾಕಿರುವ ಪೂಜಾಗಾಂಧಿ ಇದು ನಮ್ಮೆಲ್ಲರ ಅಚ್ಚುಮೆಚ್ಚಿನ ಜಾಗವಾಗಿತ್ತು. ನಮ್ಮೆಲ್ಲರಿಗೂ ಇದು ಮೇಕಪ್‌ ರೂಮ್‌ ಆಗಿತ್ತು. ಎಲ್ಲರೂ ಇಲ್ಲಿ ಬಹಳಾ ಎಂಜಾಯ್‌ ಮಾಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ನಾನು 2006 ರಲ್ಲಿ ಮೊದಲ ಬಾರಿಗೆ ಕರ್ನಾಟಕಕ್ಕೆ ಬಂದೆ. ಮುಂಗಾರು ಮಳೆ ಸಿನಿಮಾಗೆ ನಾಯಕಿಯಾಗಿ ಯೋಗರಾಜ್‌ ಭಟ್‌ ಅವರು ನನ್ನನ್ನು ಇಲ್ಲಿಗೆ ಕರೆಸಿಕೊಂಡಿದ್ದರು. ಅವರಿಗೆ ನಾನು ಯಾವಾಗಲೂ ಋಣಿಯಾಗಿರುತ್ತೇನೆ. 2006 ರಲ್ಲಿ ನಾನು ಇಲ್ಲಿಗೆ ಬಂದಾಗ ಈ ಮನೆ, ಜನ ಎಲ್ಲರೂ ಹೊಸಬರು. ಆದರೆ ಈಗ ನಾವೆಲ್ಲರೂ ಚಿರಪರಿಚಿತರು ಎಂದಿದ್ದಾರೆ ನಟಿ ಪೂಜಾ ಗಾಂಧಿ.

ಮದುವೆಯ ಬಳಿಕ ನಾನು ಇಲ್ಲಿಗೆ ಬರಲೇ ಬೇಕು ಎಂದುಕೊಂಡಿದ್ದೆ. ಅದರಂತೆ ಬಂದಿದ್ದೇನೆ. ಈ ಜಾಗಗಳನ್ನು ನೋಡಿದ ಬಳಿಕ ನನ್ನ ಹಳೆಯ ನೆನಪುಗಳು ಮರುಕಳಿಸಿವೆ. ಇದರಿಂದ ಹೇಳಲಾರದಷ್ಟು ಖುಷಿಯಾಗುತ್ತಿದೆ. ಇದು ನನ್ನ ಗ್ರಾಟಿಟಿಟ್ಯೂಡ್‌ ಜರ್ನಿ ಎಂದಿದ್ದಾರೆ.

lokesh

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

3 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

4 hours ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

4 hours ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

4 hours ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

4 hours ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

4 hours ago