ಚಿತ್ರ ಮಂಜರಿ

ಮುಂಗಾರುಮಳೆ ಮನೆಯಲ್ಲಿ ಪೂಜಾ ಗಾಂಧಿ

ಮದುವೆಯ ಬಳಿಕ ನಟಿ ಪೂಜಾ ಗಾಂಧಿಯವರು ತಮ್ಮ ಪತಿ ವಿಜಯ್‌ ಘೋರ್ಪಡೆ ಅವರೊಂದಿಗೆ ಕವಿಶೈಲಕ್ಕೆ ಭೇಟಿ ನೀಡಿದ್ದರು. ಇದೀಗ ಮುಂಗಾರು ಮಳೆ ಚಿತ್ರದ ಚಿತ್ರೀಕರಣ ನಡೆದ ಮನೆಗೆ ಮಳೆ ಹುಡುಗಿ ವಿಸಿಟ್‌ ಕೊಟ್ಟಿದ್ದಾರೆ.

ಮುಂಗಾರುಮಳೆ ಮನೆಗೆ ಹೊಗಿರುವ ವಿಡಿಯೋವನ್ನು ನಟಿ ಪೂಜಾಗಾಂಧಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಸಿನಿಮಾ ಚಿತ್ರೀಕರಣದ ಸಿಹಿ ಕ್ಷಣಗಳನ್ನು ಮೆಲುಕು ಹಾಕಿದ್ದಾರೆ.

ಕುಪ್ಪಳಿ ಬಳಿಕ ಮುಂಗಾರು ಮಳೆ ಚಿತ್ರದ ಶೂಟಿಂಗ್‌ ನಡೆದಿದ್ದ ಸಕಲೇಶಪುರಕ್ಕೆ ಭೇಟಿ ಕೊಟ್ಟಿರುವ ಪೂಜಾ ಗಾಂಧಿ ಮುಂಗಾರು ಮಳೆ ಮನೆಯಲ್ಲಿ ಸುಂದರ ಕ್ಷಣಗಳನ್ನು ಕಳೆದಿದ್ದು, ಮನೆಯ ವಿಡಿಯೋ ಮಾಡುತ್ತಾ ಮಾತನಾಡಿದ್ದಾರೆ. ಸಿನಿಮಾ ಚಿತ್ರೀಕರಣದ ವೇಳೆ ನಡೆದಿದ್ದ ಸಿಹಿ ಘಟನೆಗಳನ್ನು ಹಂಚಿಕೊಂಡಿದ್ದು, ಮನೆಯ ಯಾವ ಭಾಗದಲ್ಲಿ ಯಾವ ಸೀನ್‌ ಚಿತ್ರೀಕರಣ ಮಾಡಲಾಗಿದೆ ಎಂಬುದನ್ನು ವಿವರಿಸಿದ್ದಾರೆ.

ಇನ್ನು ತಮ್ಮ ಅಚ್ಚು ಮೆಚ್ಚಿನ ಜಾಗವಾದ ಔಟ್‌ ಹೌಸ್‌ ನಲ್ಲಿ ಪದ್ಮಜಾ ರಾವ್‌, ಸುಧಾ ಬೆಳವಾಡಿ ಅವರೊಂದಿಗೆ ಕಳೆದ ಸುಂದರ ಕ್ಷಣಗಳನ್ನು ಅತ್ಯಂತ ಸಂತೋಷದಿಂದ ಮೆಲುಕು ಹಾಕಿರುವ ಪೂಜಾಗಾಂಧಿ ಇದು ನಮ್ಮೆಲ್ಲರ ಅಚ್ಚುಮೆಚ್ಚಿನ ಜಾಗವಾಗಿತ್ತು. ನಮ್ಮೆಲ್ಲರಿಗೂ ಇದು ಮೇಕಪ್‌ ರೂಮ್‌ ಆಗಿತ್ತು. ಎಲ್ಲರೂ ಇಲ್ಲಿ ಬಹಳಾ ಎಂಜಾಯ್‌ ಮಾಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ನಾನು 2006 ರಲ್ಲಿ ಮೊದಲ ಬಾರಿಗೆ ಕರ್ನಾಟಕಕ್ಕೆ ಬಂದೆ. ಮುಂಗಾರು ಮಳೆ ಸಿನಿಮಾಗೆ ನಾಯಕಿಯಾಗಿ ಯೋಗರಾಜ್‌ ಭಟ್‌ ಅವರು ನನ್ನನ್ನು ಇಲ್ಲಿಗೆ ಕರೆಸಿಕೊಂಡಿದ್ದರು. ಅವರಿಗೆ ನಾನು ಯಾವಾಗಲೂ ಋಣಿಯಾಗಿರುತ್ತೇನೆ. 2006 ರಲ್ಲಿ ನಾನು ಇಲ್ಲಿಗೆ ಬಂದಾಗ ಈ ಮನೆ, ಜನ ಎಲ್ಲರೂ ಹೊಸಬರು. ಆದರೆ ಈಗ ನಾವೆಲ್ಲರೂ ಚಿರಪರಿಚಿತರು ಎಂದಿದ್ದಾರೆ ನಟಿ ಪೂಜಾ ಗಾಂಧಿ.

ಮದುವೆಯ ಬಳಿಕ ನಾನು ಇಲ್ಲಿಗೆ ಬರಲೇ ಬೇಕು ಎಂದುಕೊಂಡಿದ್ದೆ. ಅದರಂತೆ ಬಂದಿದ್ದೇನೆ. ಈ ಜಾಗಗಳನ್ನು ನೋಡಿದ ಬಳಿಕ ನನ್ನ ಹಳೆಯ ನೆನಪುಗಳು ಮರುಕಳಿಸಿವೆ. ಇದರಿಂದ ಹೇಳಲಾರದಷ್ಟು ಖುಷಿಯಾಗುತ್ತಿದೆ. ಇದು ನನ್ನ ಗ್ರಾಟಿಟಿಟ್ಯೂಡ್‌ ಜರ್ನಿ ಎಂದಿದ್ದಾರೆ.

lokesh

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

7 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

7 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

7 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

7 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

7 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

7 hours ago