ಮದುವೆಯ ಬಳಿಕ ನಟಿ ಪೂಜಾ ಗಾಂಧಿಯವರು ತಮ್ಮ ಪತಿ ವಿಜಯ್ ಘೋರ್ಪಡೆ ಅವರೊಂದಿಗೆ ಕವಿಶೈಲಕ್ಕೆ ಭೇಟಿ ನೀಡಿದ್ದರು. ಇದೀಗ ಮುಂಗಾರು ಮಳೆ ಚಿತ್ರದ ಚಿತ್ರೀಕರಣ ನಡೆದ ಮನೆಗೆ ಮಳೆ ಹುಡುಗಿ ವಿಸಿಟ್ ಕೊಟ್ಟಿದ್ದಾರೆ.
ಮುಂಗಾರುಮಳೆ ಮನೆಗೆ ಹೊಗಿರುವ ವಿಡಿಯೋವನ್ನು ನಟಿ ಪೂಜಾಗಾಂಧಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಸಿನಿಮಾ ಚಿತ್ರೀಕರಣದ ಸಿಹಿ ಕ್ಷಣಗಳನ್ನು ಮೆಲುಕು ಹಾಕಿದ್ದಾರೆ.
ಕುಪ್ಪಳಿ ಬಳಿಕ ಮುಂಗಾರು ಮಳೆ ಚಿತ್ರದ ಶೂಟಿಂಗ್ ನಡೆದಿದ್ದ ಸಕಲೇಶಪುರಕ್ಕೆ ಭೇಟಿ ಕೊಟ್ಟಿರುವ ಪೂಜಾ ಗಾಂಧಿ ಮುಂಗಾರು ಮಳೆ ಮನೆಯಲ್ಲಿ ಸುಂದರ ಕ್ಷಣಗಳನ್ನು ಕಳೆದಿದ್ದು, ಮನೆಯ ವಿಡಿಯೋ ಮಾಡುತ್ತಾ ಮಾತನಾಡಿದ್ದಾರೆ. ಸಿನಿಮಾ ಚಿತ್ರೀಕರಣದ ವೇಳೆ ನಡೆದಿದ್ದ ಸಿಹಿ ಘಟನೆಗಳನ್ನು ಹಂಚಿಕೊಂಡಿದ್ದು, ಮನೆಯ ಯಾವ ಭಾಗದಲ್ಲಿ ಯಾವ ಸೀನ್ ಚಿತ್ರೀಕರಣ ಮಾಡಲಾಗಿದೆ ಎಂಬುದನ್ನು ವಿವರಿಸಿದ್ದಾರೆ.
ಇನ್ನು ತಮ್ಮ ಅಚ್ಚು ಮೆಚ್ಚಿನ ಜಾಗವಾದ ಔಟ್ ಹೌಸ್ ನಲ್ಲಿ ಪದ್ಮಜಾ ರಾವ್, ಸುಧಾ ಬೆಳವಾಡಿ ಅವರೊಂದಿಗೆ ಕಳೆದ ಸುಂದರ ಕ್ಷಣಗಳನ್ನು ಅತ್ಯಂತ ಸಂತೋಷದಿಂದ ಮೆಲುಕು ಹಾಕಿರುವ ಪೂಜಾಗಾಂಧಿ ಇದು ನಮ್ಮೆಲ್ಲರ ಅಚ್ಚುಮೆಚ್ಚಿನ ಜಾಗವಾಗಿತ್ತು. ನಮ್ಮೆಲ್ಲರಿಗೂ ಇದು ಮೇಕಪ್ ರೂಮ್ ಆಗಿತ್ತು. ಎಲ್ಲರೂ ಇಲ್ಲಿ ಬಹಳಾ ಎಂಜಾಯ್ ಮಾಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ.
ನಾನು 2006 ರಲ್ಲಿ ಮೊದಲ ಬಾರಿಗೆ ಕರ್ನಾಟಕಕ್ಕೆ ಬಂದೆ. ಮುಂಗಾರು ಮಳೆ ಸಿನಿಮಾಗೆ ನಾಯಕಿಯಾಗಿ ಯೋಗರಾಜ್ ಭಟ್ ಅವರು ನನ್ನನ್ನು ಇಲ್ಲಿಗೆ ಕರೆಸಿಕೊಂಡಿದ್ದರು. ಅವರಿಗೆ ನಾನು ಯಾವಾಗಲೂ ಋಣಿಯಾಗಿರುತ್ತೇನೆ. 2006 ರಲ್ಲಿ ನಾನು ಇಲ್ಲಿಗೆ ಬಂದಾಗ ಈ ಮನೆ, ಜನ ಎಲ್ಲರೂ ಹೊಸಬರು. ಆದರೆ ಈಗ ನಾವೆಲ್ಲರೂ ಚಿರಪರಿಚಿತರು ಎಂದಿದ್ದಾರೆ ನಟಿ ಪೂಜಾ ಗಾಂಧಿ.
ಮದುವೆಯ ಬಳಿಕ ನಾನು ಇಲ್ಲಿಗೆ ಬರಲೇ ಬೇಕು ಎಂದುಕೊಂಡಿದ್ದೆ. ಅದರಂತೆ ಬಂದಿದ್ದೇನೆ. ಈ ಜಾಗಗಳನ್ನು ನೋಡಿದ ಬಳಿಕ ನನ್ನ ಹಳೆಯ ನೆನಪುಗಳು ಮರುಕಳಿಸಿವೆ. ಇದರಿಂದ ಹೇಳಲಾರದಷ್ಟು ಖುಷಿಯಾಗುತ್ತಿದೆ. ಇದು ನನ್ನ ಗ್ರಾಟಿಟಿಟ್ಯೂಡ್ ಜರ್ನಿ ಎಂದಿದ್ದಾರೆ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…