ಮದುವೆಯ ಬಳಿಕ ನಟಿ ಪೂಜಾ ಗಾಂಧಿಯವರು ತಮ್ಮ ಪತಿ ವಿಜಯ್ ಘೋರ್ಪಡೆ ಅವರೊಂದಿಗೆ ಕವಿಶೈಲಕ್ಕೆ ಭೇಟಿ ನೀಡಿದ್ದರು. ಇದೀಗ ಮುಂಗಾರು ಮಳೆ ಚಿತ್ರದ ಚಿತ್ರೀಕರಣ ನಡೆದ ಮನೆಗೆ ಮಳೆ ಹುಡುಗಿ ವಿಸಿಟ್ ಕೊಟ್ಟಿದ್ದಾರೆ.
ಮುಂಗಾರುಮಳೆ ಮನೆಗೆ ಹೊಗಿರುವ ವಿಡಿಯೋವನ್ನು ನಟಿ ಪೂಜಾಗಾಂಧಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಸಿನಿಮಾ ಚಿತ್ರೀಕರಣದ ಸಿಹಿ ಕ್ಷಣಗಳನ್ನು ಮೆಲುಕು ಹಾಕಿದ್ದಾರೆ.
ಕುಪ್ಪಳಿ ಬಳಿಕ ಮುಂಗಾರು ಮಳೆ ಚಿತ್ರದ ಶೂಟಿಂಗ್ ನಡೆದಿದ್ದ ಸಕಲೇಶಪುರಕ್ಕೆ ಭೇಟಿ ಕೊಟ್ಟಿರುವ ಪೂಜಾ ಗಾಂಧಿ ಮುಂಗಾರು ಮಳೆ ಮನೆಯಲ್ಲಿ ಸುಂದರ ಕ್ಷಣಗಳನ್ನು ಕಳೆದಿದ್ದು, ಮನೆಯ ವಿಡಿಯೋ ಮಾಡುತ್ತಾ ಮಾತನಾಡಿದ್ದಾರೆ. ಸಿನಿಮಾ ಚಿತ್ರೀಕರಣದ ವೇಳೆ ನಡೆದಿದ್ದ ಸಿಹಿ ಘಟನೆಗಳನ್ನು ಹಂಚಿಕೊಂಡಿದ್ದು, ಮನೆಯ ಯಾವ ಭಾಗದಲ್ಲಿ ಯಾವ ಸೀನ್ ಚಿತ್ರೀಕರಣ ಮಾಡಲಾಗಿದೆ ಎಂಬುದನ್ನು ವಿವರಿಸಿದ್ದಾರೆ.
ಇನ್ನು ತಮ್ಮ ಅಚ್ಚು ಮೆಚ್ಚಿನ ಜಾಗವಾದ ಔಟ್ ಹೌಸ್ ನಲ್ಲಿ ಪದ್ಮಜಾ ರಾವ್, ಸುಧಾ ಬೆಳವಾಡಿ ಅವರೊಂದಿಗೆ ಕಳೆದ ಸುಂದರ ಕ್ಷಣಗಳನ್ನು ಅತ್ಯಂತ ಸಂತೋಷದಿಂದ ಮೆಲುಕು ಹಾಕಿರುವ ಪೂಜಾಗಾಂಧಿ ಇದು ನಮ್ಮೆಲ್ಲರ ಅಚ್ಚುಮೆಚ್ಚಿನ ಜಾಗವಾಗಿತ್ತು. ನಮ್ಮೆಲ್ಲರಿಗೂ ಇದು ಮೇಕಪ್ ರೂಮ್ ಆಗಿತ್ತು. ಎಲ್ಲರೂ ಇಲ್ಲಿ ಬಹಳಾ ಎಂಜಾಯ್ ಮಾಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ.
ನಾನು 2006 ರಲ್ಲಿ ಮೊದಲ ಬಾರಿಗೆ ಕರ್ನಾಟಕಕ್ಕೆ ಬಂದೆ. ಮುಂಗಾರು ಮಳೆ ಸಿನಿಮಾಗೆ ನಾಯಕಿಯಾಗಿ ಯೋಗರಾಜ್ ಭಟ್ ಅವರು ನನ್ನನ್ನು ಇಲ್ಲಿಗೆ ಕರೆಸಿಕೊಂಡಿದ್ದರು. ಅವರಿಗೆ ನಾನು ಯಾವಾಗಲೂ ಋಣಿಯಾಗಿರುತ್ತೇನೆ. 2006 ರಲ್ಲಿ ನಾನು ಇಲ್ಲಿಗೆ ಬಂದಾಗ ಈ ಮನೆ, ಜನ ಎಲ್ಲರೂ ಹೊಸಬರು. ಆದರೆ ಈಗ ನಾವೆಲ್ಲರೂ ಚಿರಪರಿಚಿತರು ಎಂದಿದ್ದಾರೆ ನಟಿ ಪೂಜಾ ಗಾಂಧಿ.
ಮದುವೆಯ ಬಳಿಕ ನಾನು ಇಲ್ಲಿಗೆ ಬರಲೇ ಬೇಕು ಎಂದುಕೊಂಡಿದ್ದೆ. ಅದರಂತೆ ಬಂದಿದ್ದೇನೆ. ಈ ಜಾಗಗಳನ್ನು ನೋಡಿದ ಬಳಿಕ ನನ್ನ ಹಳೆಯ ನೆನಪುಗಳು ಮರುಕಳಿಸಿವೆ. ಇದರಿಂದ ಹೇಳಲಾರದಷ್ಟು ಖುಷಿಯಾಗುತ್ತಿದೆ. ಇದು ನನ್ನ ಗ್ರಾಟಿಟಿಟ್ಯೂಡ್ ಜರ್ನಿ ಎಂದಿದ್ದಾರೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…