ಚಿತ್ರ ಮಂಜರಿ

ಕವಿಶೈಲಕ್ಕೆ ಭೇಟಿ ನೀಡಿದ ಪೂಜಾ ಗಾಂಧಿ ದಂಪತಿ

ರಾಷ್ಟ್ರಕವಿ ಕುವೆಂಪು ಅವರ ಆಶಯದ ಮಂತ್ರ ಮಾಂಗಲ್ಯ ಪದ್ದತಿಯ ಮೂಲಕ ಹೊಸ ಬಾಳಿಗೆ ಕಾಲಿಟ್ಟ ನಟಿ ಪೂಜಾ ಗಾಂಧಿ ಅವರು ಇದೀಗ ಕುವೆಂಪು ಅವರ ಹುಟ್ಟೂರಿನಲ್ಲಿರುವ ಕವಿ ಶೈಲಕ್ಕೆ ಪತಿ ವಿಜಯ್‌ ಘೋರ್ಪಡೆಯವರ ಜೊತೆ ಭೇಟಿ ನೀಡಿದ್ದಾರೆ.

ಈ ಫೊಟೋವನ್ನು ನಟಿ ಪೂಜಾ ಗಾಂಧಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಕವಿಶೈಲ ಎಂದು ಬರೆದುಕೊಂಡಿದ್ದಾರೆ. ಮಳೆ ಹುಡುಗಿಯ ಕನ್ನಡ ಪ್ರೇಮಕ್ಕೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದ್ದು, ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಉತ್ತರ ಪ್ರದೇಶ ಮೂಲದವರಾದ ಪೂಜಾ ಗಾಂಧಿ ಕನ್ನಡ ಚಿತ್ರರಂಗದಲ್ಲಿ ಬದುಕು ಕಟ್ಟಿಕೊಂಡಿದ್ದಾರೆ. ತಮ್ಮ ಮಾತೃ ಭಾಷೆ ಹಿಂದಿ ಆದರೂ ಕೂಡ ಅವರು ಕನ್ನಡ ಭಾಷೆಯ ಮೇಲೆ ಪೂಜಾ ಗಾಂಧಿ ಅವರು ಅಪಾರವಾದ ಒಲವನ್ನು ಹೊಂದಿದ್ದಾರೆ. ಕರ್ನಾಟಕದಲ್ಲಿ ಇರುವ ಪರ ಭಾಷಿಕರೂ ಕೂಡ ಕನ್ನಡವನ್ನು ಕಲಿಯಬೇಕು ಎಂದು ಹೇಳುವ ಪೂಜಾ ಗಾಂಧಿ ಸ್ಪಷ್ಟವಾಗಿ ಕನ್ನಡ ಮಾತನಾಡಲು ಕಲಿತಿದ್ದಾರೆ.

ಗೋಲ್ಡನ್‌ ಸ್ಟಾರ್‌ ಗಣೇಶ್‌ ಅವರಿಗೆ ದೊಡ್ಡ ಮಟ್ಟದ ಸಕ್ಸಸ್‌ ತಂದುಕೊಟ್ಟ ಮುಂಗಾರುಮಳೆ ಸಿನಿಮಾ ಮೂಲಕ ಕನ್ನಡ ಚಿತ್ರಂಗಕ್ಕೆ ಪಾದಾರ್ಪಣೆ ಮಾಡಿದ್ದ ಪೂಜಾ ಗಾಂಧಿ ಅವರು ನವೆಂಬರ್‌ 23 ರಂದು ಬೆಂಗಳೂರಿನ ಯಲಹಂಕದಲ್ಲಿ ಕುವೆಂಪು ಆಶಯದ ಮಂತ್ರ ಮಾಂಗಲ್ಯ ಪದ್ದತಿಯ ಮೂಲಕ ಉದ್ಯಮಿ ವಿಜಯ್‌ ಘೋರ್ಪಡೆ ಅವರ ಕೈ ಹಿಡಿದು ಹೊಸ ಜೀವನಕ್ಕೆ ಕಾಲಿರಿಸಿದ್ದರು. ಸ್ಯಾಂಡಲ್ವುಡ್‌ ನ ಹಲವಾರು ನಟ ನಟಿಯರು ಮದುವೆಯಲ್ಲಿ ಭಾಗಿಯಾಗಿ ನವ ವಧು ವರರಿಗೆ ಶುಭ ಕೋರಿದ್ದರು.

ವಿಶೇಷವೆಂದರೆ ನಟಿ ಪೂಜಾ ಗಾಂಧಿ ಅವರು ತಮ್ಮ ಕೈಯ್ಯಾರೆ ಅಚ್ಚ ಕನ್ನಡದಲ್ಲಿ ಮದುವೆಯ ಆಮಂತ್ರಣ ಪತ್ರಿಕೆ ಬರೆದು ಆತ್ಮೀಯವಾಗಿ ಮದುವೆಗೆ ಆಹ್ವಾನಿಸಿದ್ದರು.

lokesh

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

7 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

8 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

8 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

9 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

9 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

10 hours ago