ರಾಷ್ಟ್ರಕವಿ ಕುವೆಂಪು ಅವರ ಆಶಯದ ಮಂತ್ರ ಮಾಂಗಲ್ಯ ಪದ್ದತಿಯ ಮೂಲಕ ಹೊಸ ಬಾಳಿಗೆ ಕಾಲಿಟ್ಟ ನಟಿ ಪೂಜಾ ಗಾಂಧಿ ಅವರು ಇದೀಗ ಕುವೆಂಪು ಅವರ ಹುಟ್ಟೂರಿನಲ್ಲಿರುವ ಕವಿ ಶೈಲಕ್ಕೆ ಪತಿ ವಿಜಯ್ ಘೋರ್ಪಡೆಯವರ ಜೊತೆ ಭೇಟಿ ನೀಡಿದ್ದಾರೆ.
ಈ ಫೊಟೋವನ್ನು ನಟಿ ಪೂಜಾ ಗಾಂಧಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಕವಿಶೈಲ ಎಂದು ಬರೆದುಕೊಂಡಿದ್ದಾರೆ. ಮಳೆ ಹುಡುಗಿಯ ಕನ್ನಡ ಪ್ರೇಮಕ್ಕೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದ್ದು, ನವ ಜೋಡಿಗೆ ಶುಭ ಹಾರೈಸಿದ್ದಾರೆ.
ಉತ್ತರ ಪ್ರದೇಶ ಮೂಲದವರಾದ ಪೂಜಾ ಗಾಂಧಿ ಕನ್ನಡ ಚಿತ್ರರಂಗದಲ್ಲಿ ಬದುಕು ಕಟ್ಟಿಕೊಂಡಿದ್ದಾರೆ. ತಮ್ಮ ಮಾತೃ ಭಾಷೆ ಹಿಂದಿ ಆದರೂ ಕೂಡ ಅವರು ಕನ್ನಡ ಭಾಷೆಯ ಮೇಲೆ ಪೂಜಾ ಗಾಂಧಿ ಅವರು ಅಪಾರವಾದ ಒಲವನ್ನು ಹೊಂದಿದ್ದಾರೆ. ಕರ್ನಾಟಕದಲ್ಲಿ ಇರುವ ಪರ ಭಾಷಿಕರೂ ಕೂಡ ಕನ್ನಡವನ್ನು ಕಲಿಯಬೇಕು ಎಂದು ಹೇಳುವ ಪೂಜಾ ಗಾಂಧಿ ಸ್ಪಷ್ಟವಾಗಿ ಕನ್ನಡ ಮಾತನಾಡಲು ಕಲಿತಿದ್ದಾರೆ.
ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ದೊಡ್ಡ ಮಟ್ಟದ ಸಕ್ಸಸ್ ತಂದುಕೊಟ್ಟ ಮುಂಗಾರುಮಳೆ ಸಿನಿಮಾ ಮೂಲಕ ಕನ್ನಡ ಚಿತ್ರಂಗಕ್ಕೆ ಪಾದಾರ್ಪಣೆ ಮಾಡಿದ್ದ ಪೂಜಾ ಗಾಂಧಿ ಅವರು ನವೆಂಬರ್ 23 ರಂದು ಬೆಂಗಳೂರಿನ ಯಲಹಂಕದಲ್ಲಿ ಕುವೆಂಪು ಆಶಯದ ಮಂತ್ರ ಮಾಂಗಲ್ಯ ಪದ್ದತಿಯ ಮೂಲಕ ಉದ್ಯಮಿ ವಿಜಯ್ ಘೋರ್ಪಡೆ ಅವರ ಕೈ ಹಿಡಿದು ಹೊಸ ಜೀವನಕ್ಕೆ ಕಾಲಿರಿಸಿದ್ದರು. ಸ್ಯಾಂಡಲ್ವುಡ್ ನ ಹಲವಾರು ನಟ ನಟಿಯರು ಮದುವೆಯಲ್ಲಿ ಭಾಗಿಯಾಗಿ ನವ ವಧು ವರರಿಗೆ ಶುಭ ಕೋರಿದ್ದರು.
ವಿಶೇಷವೆಂದರೆ ನಟಿ ಪೂಜಾ ಗಾಂಧಿ ಅವರು ತಮ್ಮ ಕೈಯ್ಯಾರೆ ಅಚ್ಚ ಕನ್ನಡದಲ್ಲಿ ಮದುವೆಯ ಆಮಂತ್ರಣ ಪತ್ರಿಕೆ ಬರೆದು ಆತ್ಮೀಯವಾಗಿ ಮದುವೆಗೆ ಆಹ್ವಾನಿಸಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…