ರಾಷ್ಟ್ರಕವಿ ಕುವೆಂಪು ಅವರ ಆಶಯದ ಮಂತ್ರ ಮಾಂಗಲ್ಯ ಪದ್ದತಿಯ ಮೂಲಕ ಹೊಸ ಬಾಳಿಗೆ ಕಾಲಿಟ್ಟ ನಟಿ ಪೂಜಾ ಗಾಂಧಿ ಅವರು ಇದೀಗ ಕುವೆಂಪು ಅವರ ಹುಟ್ಟೂರಿನಲ್ಲಿರುವ ಕವಿ ಶೈಲಕ್ಕೆ ಪತಿ ವಿಜಯ್ ಘೋರ್ಪಡೆಯವರ ಜೊತೆ ಭೇಟಿ ನೀಡಿದ್ದಾರೆ.
ಈ ಫೊಟೋವನ್ನು ನಟಿ ಪೂಜಾ ಗಾಂಧಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಕವಿಶೈಲ ಎಂದು ಬರೆದುಕೊಂಡಿದ್ದಾರೆ. ಮಳೆ ಹುಡುಗಿಯ ಕನ್ನಡ ಪ್ರೇಮಕ್ಕೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದ್ದು, ನವ ಜೋಡಿಗೆ ಶುಭ ಹಾರೈಸಿದ್ದಾರೆ.
ಉತ್ತರ ಪ್ರದೇಶ ಮೂಲದವರಾದ ಪೂಜಾ ಗಾಂಧಿ ಕನ್ನಡ ಚಿತ್ರರಂಗದಲ್ಲಿ ಬದುಕು ಕಟ್ಟಿಕೊಂಡಿದ್ದಾರೆ. ತಮ್ಮ ಮಾತೃ ಭಾಷೆ ಹಿಂದಿ ಆದರೂ ಕೂಡ ಅವರು ಕನ್ನಡ ಭಾಷೆಯ ಮೇಲೆ ಪೂಜಾ ಗಾಂಧಿ ಅವರು ಅಪಾರವಾದ ಒಲವನ್ನು ಹೊಂದಿದ್ದಾರೆ. ಕರ್ನಾಟಕದಲ್ಲಿ ಇರುವ ಪರ ಭಾಷಿಕರೂ ಕೂಡ ಕನ್ನಡವನ್ನು ಕಲಿಯಬೇಕು ಎಂದು ಹೇಳುವ ಪೂಜಾ ಗಾಂಧಿ ಸ್ಪಷ್ಟವಾಗಿ ಕನ್ನಡ ಮಾತನಾಡಲು ಕಲಿತಿದ್ದಾರೆ.
ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ದೊಡ್ಡ ಮಟ್ಟದ ಸಕ್ಸಸ್ ತಂದುಕೊಟ್ಟ ಮುಂಗಾರುಮಳೆ ಸಿನಿಮಾ ಮೂಲಕ ಕನ್ನಡ ಚಿತ್ರಂಗಕ್ಕೆ ಪಾದಾರ್ಪಣೆ ಮಾಡಿದ್ದ ಪೂಜಾ ಗಾಂಧಿ ಅವರು ನವೆಂಬರ್ 23 ರಂದು ಬೆಂಗಳೂರಿನ ಯಲಹಂಕದಲ್ಲಿ ಕುವೆಂಪು ಆಶಯದ ಮಂತ್ರ ಮಾಂಗಲ್ಯ ಪದ್ದತಿಯ ಮೂಲಕ ಉದ್ಯಮಿ ವಿಜಯ್ ಘೋರ್ಪಡೆ ಅವರ ಕೈ ಹಿಡಿದು ಹೊಸ ಜೀವನಕ್ಕೆ ಕಾಲಿರಿಸಿದ್ದರು. ಸ್ಯಾಂಡಲ್ವುಡ್ ನ ಹಲವಾರು ನಟ ನಟಿಯರು ಮದುವೆಯಲ್ಲಿ ಭಾಗಿಯಾಗಿ ನವ ವಧು ವರರಿಗೆ ಶುಭ ಕೋರಿದ್ದರು.
ವಿಶೇಷವೆಂದರೆ ನಟಿ ಪೂಜಾ ಗಾಂಧಿ ಅವರು ತಮ್ಮ ಕೈಯ್ಯಾರೆ ಅಚ್ಚ ಕನ್ನಡದಲ್ಲಿ ಮದುವೆಯ ಆಮಂತ್ರಣ ಪತ್ರಿಕೆ ಬರೆದು ಆತ್ಮೀಯವಾಗಿ ಮದುವೆಗೆ ಆಹ್ವಾನಿಸಿದ್ದರು.
ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ…
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ನಷ್ಟದಿಂದ ಹೊರಬರಲು ಬಸ್ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಿದೆ. ಆದರೆ ಈ…
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಶಾಖೆಗೆ ಪ್ರತಿನಿತ್ಯ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ…
ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ…
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…