ರಾಷ್ಟ್ರಕವಿ ಕುವೆಂಪು ಅವರ ಆಶಯದ ಮಂತ್ರ ಮಾಂಗಲ್ಯ ಪದ್ದತಿಯ ಮೂಲಕ ಹೊಸ ಬಾಳಿಗೆ ಕಾಲಿಟ್ಟ ನಟಿ ಪೂಜಾ ಗಾಂಧಿ ಅವರು ಇದೀಗ ಕುವೆಂಪು ಅವರ ಹುಟ್ಟೂರಿನಲ್ಲಿರುವ ಕವಿ ಶೈಲಕ್ಕೆ ಪತಿ ವಿಜಯ್ ಘೋರ್ಪಡೆಯವರ ಜೊತೆ ಭೇಟಿ ನೀಡಿದ್ದಾರೆ.
ಈ ಫೊಟೋವನ್ನು ನಟಿ ಪೂಜಾ ಗಾಂಧಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಕವಿಶೈಲ ಎಂದು ಬರೆದುಕೊಂಡಿದ್ದಾರೆ. ಮಳೆ ಹುಡುಗಿಯ ಕನ್ನಡ ಪ್ರೇಮಕ್ಕೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದ್ದು, ನವ ಜೋಡಿಗೆ ಶುಭ ಹಾರೈಸಿದ್ದಾರೆ.
ಉತ್ತರ ಪ್ರದೇಶ ಮೂಲದವರಾದ ಪೂಜಾ ಗಾಂಧಿ ಕನ್ನಡ ಚಿತ್ರರಂಗದಲ್ಲಿ ಬದುಕು ಕಟ್ಟಿಕೊಂಡಿದ್ದಾರೆ. ತಮ್ಮ ಮಾತೃ ಭಾಷೆ ಹಿಂದಿ ಆದರೂ ಕೂಡ ಅವರು ಕನ್ನಡ ಭಾಷೆಯ ಮೇಲೆ ಪೂಜಾ ಗಾಂಧಿ ಅವರು ಅಪಾರವಾದ ಒಲವನ್ನು ಹೊಂದಿದ್ದಾರೆ. ಕರ್ನಾಟಕದಲ್ಲಿ ಇರುವ ಪರ ಭಾಷಿಕರೂ ಕೂಡ ಕನ್ನಡವನ್ನು ಕಲಿಯಬೇಕು ಎಂದು ಹೇಳುವ ಪೂಜಾ ಗಾಂಧಿ ಸ್ಪಷ್ಟವಾಗಿ ಕನ್ನಡ ಮಾತನಾಡಲು ಕಲಿತಿದ್ದಾರೆ.
ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ದೊಡ್ಡ ಮಟ್ಟದ ಸಕ್ಸಸ್ ತಂದುಕೊಟ್ಟ ಮುಂಗಾರುಮಳೆ ಸಿನಿಮಾ ಮೂಲಕ ಕನ್ನಡ ಚಿತ್ರಂಗಕ್ಕೆ ಪಾದಾರ್ಪಣೆ ಮಾಡಿದ್ದ ಪೂಜಾ ಗಾಂಧಿ ಅವರು ನವೆಂಬರ್ 23 ರಂದು ಬೆಂಗಳೂರಿನ ಯಲಹಂಕದಲ್ಲಿ ಕುವೆಂಪು ಆಶಯದ ಮಂತ್ರ ಮಾಂಗಲ್ಯ ಪದ್ದತಿಯ ಮೂಲಕ ಉದ್ಯಮಿ ವಿಜಯ್ ಘೋರ್ಪಡೆ ಅವರ ಕೈ ಹಿಡಿದು ಹೊಸ ಜೀವನಕ್ಕೆ ಕಾಲಿರಿಸಿದ್ದರು. ಸ್ಯಾಂಡಲ್ವುಡ್ ನ ಹಲವಾರು ನಟ ನಟಿಯರು ಮದುವೆಯಲ್ಲಿ ಭಾಗಿಯಾಗಿ ನವ ವಧು ವರರಿಗೆ ಶುಭ ಕೋರಿದ್ದರು.
ವಿಶೇಷವೆಂದರೆ ನಟಿ ಪೂಜಾ ಗಾಂಧಿ ಅವರು ತಮ್ಮ ಕೈಯ್ಯಾರೆ ಅಚ್ಚ ಕನ್ನಡದಲ್ಲಿ ಮದುವೆಯ ಆಮಂತ್ರಣ ಪತ್ರಿಕೆ ಬರೆದು ಆತ್ಮೀಯವಾಗಿ ಮದುವೆಗೆ ಆಹ್ವಾನಿಸಿದ್ದರು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…