ಚಿತ್ರ ಮಂಜರಿ

ನಾಳೆ ಮಂತ್ರ ಮಾಂಗಲ್ಯದ ಮೂಲಕ ಹೊಸ ಬಾಳಿಗೆ ಕಾಲಿಡಲಿದ್ದಾರೆ ಪೂಜಾ ಗಾಂಧಿ

ನಟಿ ಪೂಜಾ ಗಾಂಧಿಯವರು ಕವೆಂಪು ಅವರ ಆಶಯದ ಮಂತ್ರ ಮಾಂಗಲ್ಯದ ಮೂಲಕ ಉದ್ಯಮಿ ವಿಜಯ್‌ ಘೋರ್ಪಡೆ ಜೊತೆ ನಾಳೆ ಹೊಸ ಜೀವನಕ್ಕೆ ಕಾಲಿಡಲಿದ್ದಾರೆ.

ಮಂತ್ರ ಮಾಂಗಲ್ಯದ ಮೂಲಕ ಮಳೆ ಹುಡುಗಿ ಬೆಂಗಳೂರಿನ ಲಾಜಿಸ್ಟಿಕ್‌ ಕಂಪನಿಯ ಮಾಲಿಕ ವಿಜಯ್‌ ಜೊತೆ ಹೊಸ ಜೀವನ ಆರಂಭಿಸಲಿದ್ದಾರೆ.

ಉತ್ತರ ಪ್ರದೇಶ ಮೂಲದವರಾದ ಪೂಜಾ ಗಾಂಧಿಯವರಿಗೆ ಸ್ಯಾಂಡಲ್ವುಡ್‌ ಗೆ ಕಾಲಿಟ್ಟಾಗ ಕನ್ನಡ ಸರಿಯಾಗಿ ಬರುತ್ತಿರಲಿಲ್ಲ ಆಗ ವಿಜಯ್‌ ಅವರೇ ಪೂಜಾ ಗಾಂಧಿಗೆ ಕನ್ನಡ ಕಲಿಸಿದ್ದರು. ಇದೀಗ ಮುಂಗಾರು ಮಳೆ ಬೆಡಗಿ ಕನ್ನಡ ಕಲಿಸಿದ ಗುರುವನ್ನೇ ವರಿಸಲಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಬದುಕು ಕಟ್ಟಿಕೊಂಡಿರುವ ಪೂಜಾ ಗಾಂಧಿ ತಮ್ಮ ಮಾತೃ ಭಾಷೆ ಹಿಂದಿ ಆದರೂ ಕೂಡ ಅವರು ಕನ್ನಡ ಭಾಷೆಯ ಮೇಲೆ ಅಪಾರವಾದ ಒಲವನ್ನು ಹೊಂದಿದ್ದಾರೆ. ಕರ್ನಾಟಕದಲ್ಲಿ ಇರುವ ಪರ ಭಾಷಿಕರೂ ಕೂಡ ಕನ್ನಡವನ್ನು ಕಲಿಯಬೇಕು ಎಂದು ಹೇಳುವ ಪೂಜಾ ಗಾಂಧಿ ಸ್ಪಷ್ಟವಾಗಿ ಕನ್ನಡ ಮಾತನಾಡಲು ಕಲಿತಿದ್ದಾರೆ. ಇದೀಗ ಸ್ಪಷ್ಟವಾಗಿ ಕನ್ನಡ ಕಲಿತಿರುವ ಪೂಜಾಗಾಂಧಿ ತಮ್ಮ ಕೈಯಾರೆ ಮದುವೆ ಆಮಂತ್ರಣ ಪತ್ರಿಕೆಯನ್ನು ಬರೆದಿದ್ದಾರೆ.

ಆಮಂತ್ರಣ ಪತ್ರಿಕೆಯಲ್ಲೇನಿದೆ ? : ಪ್ರೀತಿಯ ಮಾಧ್ಯಮ ಮಿತ್ರರಿಗೆ, ಆತ್ಮೀಯರೇ, ನಿಮಗೆಲ್ಲರಿಗೂ ನನ್ನ ನಮಸ್ಕಾರಗಳು. ನನ್ನ ಚಿತ್ರ ಜೀವನದ ಎಲ್ಲಾ ಬೆಳವಣಿಗೆಯಲ್ಲಿ ನೀವು ನನ್ನ ಜೊತೆಯಾಗಿದ್ದೀರಿ. ನವೆಂಬರ್‌ 29-11- 2023 ನೇ ತಾರೀಕು ಸಂಜೆ ಕವೆಂಪು ಆಶಯದ ” ಮಂತ್ರ ಮಾಂಗಲ್ಯದ” ಮೂಲಕ ವಿಜಯ್‌ ಘೋರ್ಪಡೆಯವರೊಂದಿಗೆ ಮದುವೆಯಾಗುತ್ತಿದ್ದೇನೆ. ಕುಟುಂಬದವರಾಗಿ ನೀವು ಬಂದು ಹರಸಿ, ಆಶಿರ್ವದಿಸಿ. ಎಂದು ಮದುವೆಯ ಆಮಂತ್ರಣ ನೀಡಿದ್ದಾರೆ. ಆಮಂತ್ರಣ ಪತ್ರಿಕೆಯಲ್ಲಿ ಮನವಿಯೊಂದನ್ನು ಮಾಡಿರುವ ನಟಿ ತಮ್ಮಲ್ಲಿ ಸವಿನಯ ಮನವಿ ಮದುವೆಯ ಸಮಯದಲ್ಲಿ ಯಾವುದೇ ಕ್ಯಾಮೆರಾಗಳಿಗೆ ಅವಕಾಶವಿರುವುದಿಲ್ಲ. ಅನ್ಯಥಾ ಭಾವಿಸಬೇಡಿ. ನಾವೇ ನಿಮಗೆ ಸಾಧ್ಯವಾದಷ್ಟು ಫೋಟೋಗಳನ್ನು ಮತ್ತು ದೃಶ್ಯಾವಳಿಗಳನ್ನು ತಲುಪಿಸುತ್ತೇವೆ. ಮದುವೆಯ ಸಮಯವನ್ನು ನಾಳೆ 29-11-2023 ರ ಬೆಳಗ್ಗೆ ನಮ್ಮ ಪಿ.ಆರ್.ಓ ಸುಧೀಂದ್ರ ವೆಂಕಟೇಶ್‌ ಅವರು ತಿಳಿಸುತ್ತಾರೆ. ಈ ಶುಭ ಸಂದರ್ಭದಲ್ಲಿ ಮತ್ತೊಮ್ಮೆ ನಿಮಗೆಲ್ಲರಿಗೂ ನನ್ನ ಮನದಾಳದ ಧನ್ಯವಾದಗಳು ನಿಮ್ಮ ಮನೆ ಮಗಳು ಪೂಜಾ ಗಾಂಧಿ ಎಂದು ಬರೆದಿದ್ದಾರೆ.

lokesh

Recent Posts

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

57 mins ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

1 hour ago

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

1 hour ago

ಶ್ರೀರಂಗಪಟ್ಟಣ | ಕರಗದ ವೇಳೆ ಕೊಂಡಕ್ಕೆ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

2 hours ago

ಪುರುಷರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ; ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…

2 hours ago

ಸಂವಿಧಾನದಿಂದಲೇ ನಾನಿಂದು ಮುಖ್ಯಮಂತ್ರಿ ಆಗಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…

3 hours ago