ಚಿತ್ರ ಮಂಜರಿ

ನಾಳೆ ಮಂತ್ರ ಮಾಂಗಲ್ಯದ ಮೂಲಕ ಹೊಸ ಬಾಳಿಗೆ ಕಾಲಿಡಲಿದ್ದಾರೆ ಪೂಜಾ ಗಾಂಧಿ

ನಟಿ ಪೂಜಾ ಗಾಂಧಿಯವರು ಕವೆಂಪು ಅವರ ಆಶಯದ ಮಂತ್ರ ಮಾಂಗಲ್ಯದ ಮೂಲಕ ಉದ್ಯಮಿ ವಿಜಯ್‌ ಘೋರ್ಪಡೆ ಜೊತೆ ನಾಳೆ ಹೊಸ ಜೀವನಕ್ಕೆ ಕಾಲಿಡಲಿದ್ದಾರೆ.

ಮಂತ್ರ ಮಾಂಗಲ್ಯದ ಮೂಲಕ ಮಳೆ ಹುಡುಗಿ ಬೆಂಗಳೂರಿನ ಲಾಜಿಸ್ಟಿಕ್‌ ಕಂಪನಿಯ ಮಾಲಿಕ ವಿಜಯ್‌ ಜೊತೆ ಹೊಸ ಜೀವನ ಆರಂಭಿಸಲಿದ್ದಾರೆ.

ಉತ್ತರ ಪ್ರದೇಶ ಮೂಲದವರಾದ ಪೂಜಾ ಗಾಂಧಿಯವರಿಗೆ ಸ್ಯಾಂಡಲ್ವುಡ್‌ ಗೆ ಕಾಲಿಟ್ಟಾಗ ಕನ್ನಡ ಸರಿಯಾಗಿ ಬರುತ್ತಿರಲಿಲ್ಲ ಆಗ ವಿಜಯ್‌ ಅವರೇ ಪೂಜಾ ಗಾಂಧಿಗೆ ಕನ್ನಡ ಕಲಿಸಿದ್ದರು. ಇದೀಗ ಮುಂಗಾರು ಮಳೆ ಬೆಡಗಿ ಕನ್ನಡ ಕಲಿಸಿದ ಗುರುವನ್ನೇ ವರಿಸಲಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಬದುಕು ಕಟ್ಟಿಕೊಂಡಿರುವ ಪೂಜಾ ಗಾಂಧಿ ತಮ್ಮ ಮಾತೃ ಭಾಷೆ ಹಿಂದಿ ಆದರೂ ಕೂಡ ಅವರು ಕನ್ನಡ ಭಾಷೆಯ ಮೇಲೆ ಅಪಾರವಾದ ಒಲವನ್ನು ಹೊಂದಿದ್ದಾರೆ. ಕರ್ನಾಟಕದಲ್ಲಿ ಇರುವ ಪರ ಭಾಷಿಕರೂ ಕೂಡ ಕನ್ನಡವನ್ನು ಕಲಿಯಬೇಕು ಎಂದು ಹೇಳುವ ಪೂಜಾ ಗಾಂಧಿ ಸ್ಪಷ್ಟವಾಗಿ ಕನ್ನಡ ಮಾತನಾಡಲು ಕಲಿತಿದ್ದಾರೆ. ಇದೀಗ ಸ್ಪಷ್ಟವಾಗಿ ಕನ್ನಡ ಕಲಿತಿರುವ ಪೂಜಾಗಾಂಧಿ ತಮ್ಮ ಕೈಯಾರೆ ಮದುವೆ ಆಮಂತ್ರಣ ಪತ್ರಿಕೆಯನ್ನು ಬರೆದಿದ್ದಾರೆ.

ಆಮಂತ್ರಣ ಪತ್ರಿಕೆಯಲ್ಲೇನಿದೆ ? : ಪ್ರೀತಿಯ ಮಾಧ್ಯಮ ಮಿತ್ರರಿಗೆ, ಆತ್ಮೀಯರೇ, ನಿಮಗೆಲ್ಲರಿಗೂ ನನ್ನ ನಮಸ್ಕಾರಗಳು. ನನ್ನ ಚಿತ್ರ ಜೀವನದ ಎಲ್ಲಾ ಬೆಳವಣಿಗೆಯಲ್ಲಿ ನೀವು ನನ್ನ ಜೊತೆಯಾಗಿದ್ದೀರಿ. ನವೆಂಬರ್‌ 29-11- 2023 ನೇ ತಾರೀಕು ಸಂಜೆ ಕವೆಂಪು ಆಶಯದ ” ಮಂತ್ರ ಮಾಂಗಲ್ಯದ” ಮೂಲಕ ವಿಜಯ್‌ ಘೋರ್ಪಡೆಯವರೊಂದಿಗೆ ಮದುವೆಯಾಗುತ್ತಿದ್ದೇನೆ. ಕುಟುಂಬದವರಾಗಿ ನೀವು ಬಂದು ಹರಸಿ, ಆಶಿರ್ವದಿಸಿ. ಎಂದು ಮದುವೆಯ ಆಮಂತ್ರಣ ನೀಡಿದ್ದಾರೆ. ಆಮಂತ್ರಣ ಪತ್ರಿಕೆಯಲ್ಲಿ ಮನವಿಯೊಂದನ್ನು ಮಾಡಿರುವ ನಟಿ ತಮ್ಮಲ್ಲಿ ಸವಿನಯ ಮನವಿ ಮದುವೆಯ ಸಮಯದಲ್ಲಿ ಯಾವುದೇ ಕ್ಯಾಮೆರಾಗಳಿಗೆ ಅವಕಾಶವಿರುವುದಿಲ್ಲ. ಅನ್ಯಥಾ ಭಾವಿಸಬೇಡಿ. ನಾವೇ ನಿಮಗೆ ಸಾಧ್ಯವಾದಷ್ಟು ಫೋಟೋಗಳನ್ನು ಮತ್ತು ದೃಶ್ಯಾವಳಿಗಳನ್ನು ತಲುಪಿಸುತ್ತೇವೆ. ಮದುವೆಯ ಸಮಯವನ್ನು ನಾಳೆ 29-11-2023 ರ ಬೆಳಗ್ಗೆ ನಮ್ಮ ಪಿ.ಆರ್.ಓ ಸುಧೀಂದ್ರ ವೆಂಕಟೇಶ್‌ ಅವರು ತಿಳಿಸುತ್ತಾರೆ. ಈ ಶುಭ ಸಂದರ್ಭದಲ್ಲಿ ಮತ್ತೊಮ್ಮೆ ನಿಮಗೆಲ್ಲರಿಗೂ ನನ್ನ ಮನದಾಳದ ಧನ್ಯವಾದಗಳು ನಿಮ್ಮ ಮನೆ ಮಗಳು ಪೂಜಾ ಗಾಂಧಿ ಎಂದು ಬರೆದಿದ್ದಾರೆ.

lokesh

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

6 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

6 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

7 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

7 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

12 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

12 hours ago