ಚಿತ್ರ ಮಂಜರಿ

ಪವರ್‌ ಸ್ಟಾರ್‌ ಪುನೀತ್‌ ಹುಟ್ಟುಹಬ್ಬದ ಪ್ರಯುಕ್ತ ‘ಅಪ್ಪು ದೇವರ ಮಾಲೆ’ ಧರಿಸಲು‌ ಕರೆ

ಬೆಂಗಳೂರು : ಶಬರಿಮಲೆ ಅಯ್ಯಪ್ಪ ಮಾಲೆಯಂತೆ ‘ಅಪ್ಪು ದೇವರ ಮಾಲೆ’ ಧರಿಸಲು ಹೊಸಪೇಟೆ ಅಭಿಮಾನಿ ಬಳಗ ಕರೆ ನೀಡಿರುವುದು ಸಾಮಾಜಿಕ ಮಾಧ್ಯಗಳಲ್ಲಿ ಭಾರೀ ಚರ್ಚೆಗೆ ಗುರಿಯಾಗಿದೆ. ಈ ವ್ರತದ ಕುರಿತು ಪರ–ವಿರೋಧದ ಅಭಿಪ್ರಾಯಗಳು ಹೊರಬರುತ್ತಿವೆ.

ಹೊಸಪೇಟೆಯ ಅಪ್ಪು ಅಭಿಮಾನಿಗಳ ಸಂಘ ಮಾರ್ಚ್​ 1ರಿಂದ​ 17ರವರೆಗೆ ಮಾಲಾಧಾರಣೆ ವ್ರತ ಆಚರಿಸಲು ಕರೆ ನೀಡಿದೆ. ಈ ಸಂಬಂಧ ಸಿದ್ಧಪಡಿಸಲಾದ ವ್ರತಾಚರಣೆ ನಿಯಮಗಳನ್ನು ಒಳಗೊಂಡಿರುವ ಕರಪತ್ರ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಮಾರ್ಚ್‌.17ರಂದು ಪುನೀತ್‌ ಹುಟ್ಟುಹಬ್ಬ ಇರುವುದರಿಂದ ಅಭಿಮಾನಿಗಳ ಸಂಘ ಈ ವ್ರತಕ್ಕೆ ಕರೆ ನೀಡಿದೆ. ಅಪ್ಪು ಮಾಲೆ ಧರಿಸಿದವರು ಮಾರ್ಚ್​ 18ರಂದು ಪುನೀತ್​ ರಾಜ್​ಕುಮಾರ್​ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ತಮ್ಮ ನೆಚ್ಚಿನ ನಟನಿಗೆ ಗೌರವ ಸಲ್ಲಿಸಬೇಕು ಎಂದು ಸಂಘ ಹೇಳಿದೆ.

ಹೊಸಪೇಟೆಯಲ್ಲಿ ಪುನೀತ್​ ರಾಜ್​ಕುಮಾರ್​ ಪ್ರತಿಮೆ ಇದೆ. ಅಪ್ಪು ಅಭಿಮಾನಿ ಎಂದು ಕರೆದುಕೊಂಡವರಿಂದ ಇದೇ ಊರಿನಲ್ಲಿ ನಟ ದರ್ಶನ್‌ ಮೇಲೆ ಇತ್ತೀಚೆಗೆ ಹಲ್ಲೆಯೂ ನಡೆದಿತ್ತು. ಇದೀಗ ಮಾಲೆ ಧರಿಸುವ ವ್ರತ ಹಮ್ಮಿಕೊಂಡಿದೆ. ಅಯ್ಯಪ್ಪ ಮಾಲಾಧಾರಣೆಯಂತೆ ರೂಪಿಸಲಾಗಿರುವ ಈ ಕಾರ್ಯಕ್ರಮಕ್ಕೆ ಕೆಲವರಿಂದ ತೀವ್ರ ವಿರೋಧವೂ ವ್ಯಕ್ತವಾಗುತ್ತಿದೆ. ಈ ರೀತಿ ಮಾಡುವುದು ಅಯ್ಯಪ್ಪ ಸ್ವಾಮಿಗೆ ಅವಮಾನ ಮಾಡಿದಂತೆ, ಮೌಢ್ಯತೆಯ ಹೊಸ ರೂಪ ಎಂದು ನೆಟ್ಟಿಗರು ಪ್ರತಿಕ್ರಿಯಿಸುತ್ತಿದ್ದಾರೆ.

‌‘ಅಪ್ಪು ದೇವರ ಮಾಲೆ’ ವ್ರತ ಆಚರಿಸುವವರು ಕೆಲವಷ್ಟು ನಿಯಮಗಳು :
ಅಪ್ಪು ಚಿತ್ರ ಹೊಂದಿರುವ ಡಾಲರ್​ ಧರಿಸಬೇಕು. ಕೇಸರಿ ಶಾಲು, ಪಂಚೆ, ಶರ್ಟ್​ ಧರಿಸಿ ಅಪ್ಪು ಭಾವಚಿತ್ರವನ್ನಿಟ್ಟು ಪೂಜಿಸಬೇಕು. ಬೆಳಗ್ಗೆ ಸೂರ್ಯ ಹುಟ್ಟುವುದಕ್ಕಿಂತ ಮೊದಲು ಮತ್ತು ಸಂಜೆ ಸೂರ್ಯ ಮುಳುಗಿದ ನಂತರ ಸ್ನಾನ ಮಾಡಬೇಕು ಎಂದು ಅಭಿಮಾನಿಗಳ ಸಂಘ ಹೇಳಿದೆ.

ಅಭಿಮಾನಿಗಳು 11,5 ಮತ್ತು ಒಂದು ದಿನದ ಮಾಲೆ ಧರಿಸಬಹುದು. ದಿನಸಿ ವಸ್ತುಗಳಿರುವ ಇಡುಮುರಿಯನ್ನು ಹೊತ್ತು ಪುನೀತ್​ ರಾಜ್​ಕುಮಾರ್​ ಅವರ ಪುಣ್ಯಭೂಮಿಗೆ ತೆರಳಬೇಕು. ಸಮಾಧಿ ದರ್ಶನ ಪಡೆದ ನಂತರ ಹಂಪಿಯ ಪುಣ್ಯ ನದಿಯಲ್ಲಿ ಸ್ನಾನ ಮಾಡಿ, ಬಳಿಕ ವಿರೂಪಾಕ್ಷ ದೇವರಿಗೆ ಪೂಜೆ ಸಲ್ಲಿಸಿ ಮಾಲೆ ವಿಸರ್ಜಿಸತಕ್ಕದ್ದು ಎಂದು ಕರಪತ್ರದಲ್ಲಿ ಸೂಚಿಸಲಾಗಿದೆ.  ಹೊಸಪೇಟೆಯ ಪುನೀತ್‌ ರಾಜ್‌ಕುಮಾರ್‌ ವೃತ್ತದಲ್ಲಿ ಮಾಲೆ ಧರಿಸುವವರು ಸೇರಬೇಕೆಂದು ತಿಳಿಸಲಾಗಿದೆ

andolanait

Recent Posts

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಂಗಳೂರು: ಕೆ.ಆರ್.ಪುರಂ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್‌ ಅವರಿಗೆ ಕಾನೂನು ಸಂಕಷ್ಟ ಮತ್ತಷ್ಟು ಬಿಗಿಯಾಗಿದೆ. ಬಿಕ್ಲು…

6 mins ago

ಕೆನಡಾದಲ್ಲಿ ಕನ್ನಡಿಗ ಚಂದನ್‌ ಕುಮಾರ್‌ ಸಾವು: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಪರಮೇಶ್ವರ್‌

ಬೆಂಗಳೂರು: ಕೆನಡಾದಲ್ಲಿ ಕೊಲೆಯಾದ ಚಂದನ್ ಕುಮಾರ್ ಪಾರ್ಥಿವ ಶರೀರವನ್ನು ಶೀಘ್ರವೇ ಭಾರತಕ್ಕೆ ತರಲು ಪ್ರಯತ್ನಿಸುತ್ತಿರುವುದಾಗಿ ಎಂದು ಗೃಹ ಸಚಿವ ಪರಮೇಶ್ವರ್‌…

38 mins ago

ಮಹಾರಾಷ್ಟ್ರದ ನೂತನ ಡಿಸಿಎಂ ಆಗಿ ಸುನೇತ್ರಾ ಪವಾರ್‌ ಅಧಿಕಾರ ಸ್ವೀಕಾರ

ಮುಂಬೈ: ಮಹಾರಾಷ್ಟ್ರದ ನೂತನ ಡಿಸಿಎಂ ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಪವಾರ್‌ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಅಜಿತ್‌ ಪವಾರ್‌…

53 mins ago

ಮಹಾರಾಷ್ಟ್ರ ಮಾಜಿ ಸಿಎಂ ಶರದ್‌ ಪವಾರ್‌ ಆಸ್ಪತ್ರೆಗೆ ದಾಖಲು: ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವದೆಹಲಿ: ಎನ್‌ಸಿಪಿ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಮಾಜಿ ಸಿಎಂ ಶರದ್‌ ಪವಾರ್‌ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಸೋಮವಾರ ಪುಣೆಯ ಖಾಸಗಿ…

56 mins ago

ಬೇಸಿಗೆಗೂ ಮುನ್ನ ಕುಡಿಯುವ ನೀರಿಗಾಗಿ ಹಾಹಾಕಾರ: ಗ್ರಾ.ಪಂ ಕಚೇರಿಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ

ನಂಜನಗೂಡು: ಬೇಸಿಗೆಗೂ ಮುನ್ನವೇ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಾಗಿದ್ದು, ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.…

1 hour ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಪ್ರಕರಣವೊಂದರ ಆರೋಪಿ ಸೆರೆ

ಮೈಸೂರು: ಪ್ರಕರಣವೊಂದರ ಆರೋಪಿ ಸೆರೆ ಹಿಡಿಯುವಲ್ಲಿ ಮೈಸೂರು ನಗರ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರು ನಗರ ದೇವರಾಜ ಪೊಲಿಸ್ ಠಾಣಾ…

1 hour ago