ಚಿತ್ರ ಮಂಜರಿ

ಪವರ್‌ ಸ್ಟಾರ್‌ ಪುನೀತ್‌ ಹುಟ್ಟುಹಬ್ಬದ ಪ್ರಯುಕ್ತ ‘ಅಪ್ಪು ದೇವರ ಮಾಲೆ’ ಧರಿಸಲು‌ ಕರೆ

ಬೆಂಗಳೂರು : ಶಬರಿಮಲೆ ಅಯ್ಯಪ್ಪ ಮಾಲೆಯಂತೆ ‘ಅಪ್ಪು ದೇವರ ಮಾಲೆ’ ಧರಿಸಲು ಹೊಸಪೇಟೆ ಅಭಿಮಾನಿ ಬಳಗ ಕರೆ ನೀಡಿರುವುದು ಸಾಮಾಜಿಕ ಮಾಧ್ಯಗಳಲ್ಲಿ ಭಾರೀ ಚರ್ಚೆಗೆ ಗುರಿಯಾಗಿದೆ. ಈ ವ್ರತದ ಕುರಿತು ಪರ–ವಿರೋಧದ ಅಭಿಪ್ರಾಯಗಳು ಹೊರಬರುತ್ತಿವೆ.

ಹೊಸಪೇಟೆಯ ಅಪ್ಪು ಅಭಿಮಾನಿಗಳ ಸಂಘ ಮಾರ್ಚ್​ 1ರಿಂದ​ 17ರವರೆಗೆ ಮಾಲಾಧಾರಣೆ ವ್ರತ ಆಚರಿಸಲು ಕರೆ ನೀಡಿದೆ. ಈ ಸಂಬಂಧ ಸಿದ್ಧಪಡಿಸಲಾದ ವ್ರತಾಚರಣೆ ನಿಯಮಗಳನ್ನು ಒಳಗೊಂಡಿರುವ ಕರಪತ್ರ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಮಾರ್ಚ್‌.17ರಂದು ಪುನೀತ್‌ ಹುಟ್ಟುಹಬ್ಬ ಇರುವುದರಿಂದ ಅಭಿಮಾನಿಗಳ ಸಂಘ ಈ ವ್ರತಕ್ಕೆ ಕರೆ ನೀಡಿದೆ. ಅಪ್ಪು ಮಾಲೆ ಧರಿಸಿದವರು ಮಾರ್ಚ್​ 18ರಂದು ಪುನೀತ್​ ರಾಜ್​ಕುಮಾರ್​ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ತಮ್ಮ ನೆಚ್ಚಿನ ನಟನಿಗೆ ಗೌರವ ಸಲ್ಲಿಸಬೇಕು ಎಂದು ಸಂಘ ಹೇಳಿದೆ.

ಹೊಸಪೇಟೆಯಲ್ಲಿ ಪುನೀತ್​ ರಾಜ್​ಕುಮಾರ್​ ಪ್ರತಿಮೆ ಇದೆ. ಅಪ್ಪು ಅಭಿಮಾನಿ ಎಂದು ಕರೆದುಕೊಂಡವರಿಂದ ಇದೇ ಊರಿನಲ್ಲಿ ನಟ ದರ್ಶನ್‌ ಮೇಲೆ ಇತ್ತೀಚೆಗೆ ಹಲ್ಲೆಯೂ ನಡೆದಿತ್ತು. ಇದೀಗ ಮಾಲೆ ಧರಿಸುವ ವ್ರತ ಹಮ್ಮಿಕೊಂಡಿದೆ. ಅಯ್ಯಪ್ಪ ಮಾಲಾಧಾರಣೆಯಂತೆ ರೂಪಿಸಲಾಗಿರುವ ಈ ಕಾರ್ಯಕ್ರಮಕ್ಕೆ ಕೆಲವರಿಂದ ತೀವ್ರ ವಿರೋಧವೂ ವ್ಯಕ್ತವಾಗುತ್ತಿದೆ. ಈ ರೀತಿ ಮಾಡುವುದು ಅಯ್ಯಪ್ಪ ಸ್ವಾಮಿಗೆ ಅವಮಾನ ಮಾಡಿದಂತೆ, ಮೌಢ್ಯತೆಯ ಹೊಸ ರೂಪ ಎಂದು ನೆಟ್ಟಿಗರು ಪ್ರತಿಕ್ರಿಯಿಸುತ್ತಿದ್ದಾರೆ.

‌‘ಅಪ್ಪು ದೇವರ ಮಾಲೆ’ ವ್ರತ ಆಚರಿಸುವವರು ಕೆಲವಷ್ಟು ನಿಯಮಗಳು :
ಅಪ್ಪು ಚಿತ್ರ ಹೊಂದಿರುವ ಡಾಲರ್​ ಧರಿಸಬೇಕು. ಕೇಸರಿ ಶಾಲು, ಪಂಚೆ, ಶರ್ಟ್​ ಧರಿಸಿ ಅಪ್ಪು ಭಾವಚಿತ್ರವನ್ನಿಟ್ಟು ಪೂಜಿಸಬೇಕು. ಬೆಳಗ್ಗೆ ಸೂರ್ಯ ಹುಟ್ಟುವುದಕ್ಕಿಂತ ಮೊದಲು ಮತ್ತು ಸಂಜೆ ಸೂರ್ಯ ಮುಳುಗಿದ ನಂತರ ಸ್ನಾನ ಮಾಡಬೇಕು ಎಂದು ಅಭಿಮಾನಿಗಳ ಸಂಘ ಹೇಳಿದೆ.

ಅಭಿಮಾನಿಗಳು 11,5 ಮತ್ತು ಒಂದು ದಿನದ ಮಾಲೆ ಧರಿಸಬಹುದು. ದಿನಸಿ ವಸ್ತುಗಳಿರುವ ಇಡುಮುರಿಯನ್ನು ಹೊತ್ತು ಪುನೀತ್​ ರಾಜ್​ಕುಮಾರ್​ ಅವರ ಪುಣ್ಯಭೂಮಿಗೆ ತೆರಳಬೇಕು. ಸಮಾಧಿ ದರ್ಶನ ಪಡೆದ ನಂತರ ಹಂಪಿಯ ಪುಣ್ಯ ನದಿಯಲ್ಲಿ ಸ್ನಾನ ಮಾಡಿ, ಬಳಿಕ ವಿರೂಪಾಕ್ಷ ದೇವರಿಗೆ ಪೂಜೆ ಸಲ್ಲಿಸಿ ಮಾಲೆ ವಿಸರ್ಜಿಸತಕ್ಕದ್ದು ಎಂದು ಕರಪತ್ರದಲ್ಲಿ ಸೂಚಿಸಲಾಗಿದೆ.  ಹೊಸಪೇಟೆಯ ಪುನೀತ್‌ ರಾಜ್‌ಕುಮಾರ್‌ ವೃತ್ತದಲ್ಲಿ ಮಾಲೆ ಧರಿಸುವವರು ಸೇರಬೇಕೆಂದು ತಿಳಿಸಲಾಗಿದೆ

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago