ಚಿತ್ರ ಮಂಜರಿ

ಪವರ್‌ ಸ್ಟಾರ್‌ ಪುನೀತ್‌ ಹುಟ್ಟುಹಬ್ಬದ ಪ್ರಯುಕ್ತ ‘ಅಪ್ಪು ದೇವರ ಮಾಲೆ’ ಧರಿಸಲು‌ ಕರೆ

ಬೆಂಗಳೂರು : ಶಬರಿಮಲೆ ಅಯ್ಯಪ್ಪ ಮಾಲೆಯಂತೆ ‘ಅಪ್ಪು ದೇವರ ಮಾಲೆ’ ಧರಿಸಲು ಹೊಸಪೇಟೆ ಅಭಿಮಾನಿ ಬಳಗ ಕರೆ ನೀಡಿರುವುದು ಸಾಮಾಜಿಕ ಮಾಧ್ಯಗಳಲ್ಲಿ ಭಾರೀ ಚರ್ಚೆಗೆ ಗುರಿಯಾಗಿದೆ. ಈ ವ್ರತದ ಕುರಿತು ಪರ–ವಿರೋಧದ ಅಭಿಪ್ರಾಯಗಳು ಹೊರಬರುತ್ತಿವೆ.

ಹೊಸಪೇಟೆಯ ಅಪ್ಪು ಅಭಿಮಾನಿಗಳ ಸಂಘ ಮಾರ್ಚ್​ 1ರಿಂದ​ 17ರವರೆಗೆ ಮಾಲಾಧಾರಣೆ ವ್ರತ ಆಚರಿಸಲು ಕರೆ ನೀಡಿದೆ. ಈ ಸಂಬಂಧ ಸಿದ್ಧಪಡಿಸಲಾದ ವ್ರತಾಚರಣೆ ನಿಯಮಗಳನ್ನು ಒಳಗೊಂಡಿರುವ ಕರಪತ್ರ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಮಾರ್ಚ್‌.17ರಂದು ಪುನೀತ್‌ ಹುಟ್ಟುಹಬ್ಬ ಇರುವುದರಿಂದ ಅಭಿಮಾನಿಗಳ ಸಂಘ ಈ ವ್ರತಕ್ಕೆ ಕರೆ ನೀಡಿದೆ. ಅಪ್ಪು ಮಾಲೆ ಧರಿಸಿದವರು ಮಾರ್ಚ್​ 18ರಂದು ಪುನೀತ್​ ರಾಜ್​ಕುಮಾರ್​ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ತಮ್ಮ ನೆಚ್ಚಿನ ನಟನಿಗೆ ಗೌರವ ಸಲ್ಲಿಸಬೇಕು ಎಂದು ಸಂಘ ಹೇಳಿದೆ.

ಹೊಸಪೇಟೆಯಲ್ಲಿ ಪುನೀತ್​ ರಾಜ್​ಕುಮಾರ್​ ಪ್ರತಿಮೆ ಇದೆ. ಅಪ್ಪು ಅಭಿಮಾನಿ ಎಂದು ಕರೆದುಕೊಂಡವರಿಂದ ಇದೇ ಊರಿನಲ್ಲಿ ನಟ ದರ್ಶನ್‌ ಮೇಲೆ ಇತ್ತೀಚೆಗೆ ಹಲ್ಲೆಯೂ ನಡೆದಿತ್ತು. ಇದೀಗ ಮಾಲೆ ಧರಿಸುವ ವ್ರತ ಹಮ್ಮಿಕೊಂಡಿದೆ. ಅಯ್ಯಪ್ಪ ಮಾಲಾಧಾರಣೆಯಂತೆ ರೂಪಿಸಲಾಗಿರುವ ಈ ಕಾರ್ಯಕ್ರಮಕ್ಕೆ ಕೆಲವರಿಂದ ತೀವ್ರ ವಿರೋಧವೂ ವ್ಯಕ್ತವಾಗುತ್ತಿದೆ. ಈ ರೀತಿ ಮಾಡುವುದು ಅಯ್ಯಪ್ಪ ಸ್ವಾಮಿಗೆ ಅವಮಾನ ಮಾಡಿದಂತೆ, ಮೌಢ್ಯತೆಯ ಹೊಸ ರೂಪ ಎಂದು ನೆಟ್ಟಿಗರು ಪ್ರತಿಕ್ರಿಯಿಸುತ್ತಿದ್ದಾರೆ.

‌‘ಅಪ್ಪು ದೇವರ ಮಾಲೆ’ ವ್ರತ ಆಚರಿಸುವವರು ಕೆಲವಷ್ಟು ನಿಯಮಗಳು :
ಅಪ್ಪು ಚಿತ್ರ ಹೊಂದಿರುವ ಡಾಲರ್​ ಧರಿಸಬೇಕು. ಕೇಸರಿ ಶಾಲು, ಪಂಚೆ, ಶರ್ಟ್​ ಧರಿಸಿ ಅಪ್ಪು ಭಾವಚಿತ್ರವನ್ನಿಟ್ಟು ಪೂಜಿಸಬೇಕು. ಬೆಳಗ್ಗೆ ಸೂರ್ಯ ಹುಟ್ಟುವುದಕ್ಕಿಂತ ಮೊದಲು ಮತ್ತು ಸಂಜೆ ಸೂರ್ಯ ಮುಳುಗಿದ ನಂತರ ಸ್ನಾನ ಮಾಡಬೇಕು ಎಂದು ಅಭಿಮಾನಿಗಳ ಸಂಘ ಹೇಳಿದೆ.

ಅಭಿಮಾನಿಗಳು 11,5 ಮತ್ತು ಒಂದು ದಿನದ ಮಾಲೆ ಧರಿಸಬಹುದು. ದಿನಸಿ ವಸ್ತುಗಳಿರುವ ಇಡುಮುರಿಯನ್ನು ಹೊತ್ತು ಪುನೀತ್​ ರಾಜ್​ಕುಮಾರ್​ ಅವರ ಪುಣ್ಯಭೂಮಿಗೆ ತೆರಳಬೇಕು. ಸಮಾಧಿ ದರ್ಶನ ಪಡೆದ ನಂತರ ಹಂಪಿಯ ಪುಣ್ಯ ನದಿಯಲ್ಲಿ ಸ್ನಾನ ಮಾಡಿ, ಬಳಿಕ ವಿರೂಪಾಕ್ಷ ದೇವರಿಗೆ ಪೂಜೆ ಸಲ್ಲಿಸಿ ಮಾಲೆ ವಿಸರ್ಜಿಸತಕ್ಕದ್ದು ಎಂದು ಕರಪತ್ರದಲ್ಲಿ ಸೂಚಿಸಲಾಗಿದೆ.  ಹೊಸಪೇಟೆಯ ಪುನೀತ್‌ ರಾಜ್‌ಕುಮಾರ್‌ ವೃತ್ತದಲ್ಲಿ ಮಾಲೆ ಧರಿಸುವವರು ಸೇರಬೇಕೆಂದು ತಿಳಿಸಲಾಗಿದೆ

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

21 mins ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

1 hour ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

1 hour ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

2 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

2 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

3 hours ago