ಬೆಂಗಳೂರು : ಶಬರಿಮಲೆ ಅಯ್ಯಪ್ಪ ಮಾಲೆಯಂತೆ ‘ಅಪ್ಪು ದೇವರ ಮಾಲೆ’ ಧರಿಸಲು ಹೊಸಪೇಟೆ ಅಭಿಮಾನಿ ಬಳಗ ಕರೆ ನೀಡಿರುವುದು ಸಾಮಾಜಿಕ ಮಾಧ್ಯಗಳಲ್ಲಿ ಭಾರೀ ಚರ್ಚೆಗೆ ಗುರಿಯಾಗಿದೆ. ಈ ವ್ರತದ ಕುರಿತು ಪರ–ವಿರೋಧದ ಅಭಿಪ್ರಾಯಗಳು ಹೊರಬರುತ್ತಿವೆ.
ಹೊಸಪೇಟೆಯ ಅಪ್ಪು ಅಭಿಮಾನಿಗಳ ಸಂಘ ಮಾರ್ಚ್ 1ರಿಂದ 17ರವರೆಗೆ ಮಾಲಾಧಾರಣೆ ವ್ರತ ಆಚರಿಸಲು ಕರೆ ನೀಡಿದೆ. ಈ ಸಂಬಂಧ ಸಿದ್ಧಪಡಿಸಲಾದ ವ್ರತಾಚರಣೆ ನಿಯಮಗಳನ್ನು ಒಳಗೊಂಡಿರುವ ಕರಪತ್ರ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಮಾರ್ಚ್.17ರಂದು ಪುನೀತ್ ಹುಟ್ಟುಹಬ್ಬ ಇರುವುದರಿಂದ ಅಭಿಮಾನಿಗಳ ಸಂಘ ಈ ವ್ರತಕ್ಕೆ ಕರೆ ನೀಡಿದೆ. ಅಪ್ಪು ಮಾಲೆ ಧರಿಸಿದವರು ಮಾರ್ಚ್ 18ರಂದು ಪುನೀತ್ ರಾಜ್ಕುಮಾರ್ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ತಮ್ಮ ನೆಚ್ಚಿನ ನಟನಿಗೆ ಗೌರವ ಸಲ್ಲಿಸಬೇಕು ಎಂದು ಸಂಘ ಹೇಳಿದೆ.
ಹೊಸಪೇಟೆಯಲ್ಲಿ ಪುನೀತ್ ರಾಜ್ಕುಮಾರ್ ಪ್ರತಿಮೆ ಇದೆ. ಅಪ್ಪು ಅಭಿಮಾನಿ ಎಂದು ಕರೆದುಕೊಂಡವರಿಂದ ಇದೇ ಊರಿನಲ್ಲಿ ನಟ ದರ್ಶನ್ ಮೇಲೆ ಇತ್ತೀಚೆಗೆ ಹಲ್ಲೆಯೂ ನಡೆದಿತ್ತು. ಇದೀಗ ಮಾಲೆ ಧರಿಸುವ ವ್ರತ ಹಮ್ಮಿಕೊಂಡಿದೆ. ಅಯ್ಯಪ್ಪ ಮಾಲಾಧಾರಣೆಯಂತೆ ರೂಪಿಸಲಾಗಿರುವ ಈ ಕಾರ್ಯಕ್ರಮಕ್ಕೆ ಕೆಲವರಿಂದ ತೀವ್ರ ವಿರೋಧವೂ ವ್ಯಕ್ತವಾಗುತ್ತಿದೆ. ಈ ರೀತಿ ಮಾಡುವುದು ಅಯ್ಯಪ್ಪ ಸ್ವಾಮಿಗೆ ಅವಮಾನ ಮಾಡಿದಂತೆ, ಮೌಢ್ಯತೆಯ ಹೊಸ ರೂಪ ಎಂದು ನೆಟ್ಟಿಗರು ಪ್ರತಿಕ್ರಿಯಿಸುತ್ತಿದ್ದಾರೆ.
‘ಅಪ್ಪು ದೇವರ ಮಾಲೆ’ ವ್ರತ ಆಚರಿಸುವವರು ಕೆಲವಷ್ಟು ನಿಯಮಗಳು :
ಅಪ್ಪು ಚಿತ್ರ ಹೊಂದಿರುವ ಡಾಲರ್ ಧರಿಸಬೇಕು. ಕೇಸರಿ ಶಾಲು, ಪಂಚೆ, ಶರ್ಟ್ ಧರಿಸಿ ಅಪ್ಪು ಭಾವಚಿತ್ರವನ್ನಿಟ್ಟು ಪೂಜಿಸಬೇಕು. ಬೆಳಗ್ಗೆ ಸೂರ್ಯ ಹುಟ್ಟುವುದಕ್ಕಿಂತ ಮೊದಲು ಮತ್ತು ಸಂಜೆ ಸೂರ್ಯ ಮುಳುಗಿದ ನಂತರ ಸ್ನಾನ ಮಾಡಬೇಕು ಎಂದು ಅಭಿಮಾನಿಗಳ ಸಂಘ ಹೇಳಿದೆ.
ಅಭಿಮಾನಿಗಳು 11,5 ಮತ್ತು ಒಂದು ದಿನದ ಮಾಲೆ ಧರಿಸಬಹುದು. ದಿನಸಿ ವಸ್ತುಗಳಿರುವ ಇಡುಮುರಿಯನ್ನು ಹೊತ್ತು ಪುನೀತ್ ರಾಜ್ಕುಮಾರ್ ಅವರ ಪುಣ್ಯಭೂಮಿಗೆ ತೆರಳಬೇಕು. ಸಮಾಧಿ ದರ್ಶನ ಪಡೆದ ನಂತರ ಹಂಪಿಯ ಪುಣ್ಯ ನದಿಯಲ್ಲಿ ಸ್ನಾನ ಮಾಡಿ, ಬಳಿಕ ವಿರೂಪಾಕ್ಷ ದೇವರಿಗೆ ಪೂಜೆ ಸಲ್ಲಿಸಿ ಮಾಲೆ ವಿಸರ್ಜಿಸತಕ್ಕದ್ದು ಎಂದು ಕರಪತ್ರದಲ್ಲಿ ಸೂಚಿಸಲಾಗಿದೆ. ಹೊಸಪೇಟೆಯ ಪುನೀತ್ ರಾಜ್ಕುಮಾರ್ ವೃತ್ತದಲ್ಲಿ ಮಾಲೆ ಧರಿಸುವವರು ಸೇರಬೇಕೆಂದು ತಿಳಿಸಲಾಗಿದೆ
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…