ಚಿತ್ರ ಮಂಜರಿ

ಪವರ್‌ ಸ್ಟಾರ್‌ ಪುನೀತ್‌ ಹುಟ್ಟುಹಬ್ಬದ ಪ್ರಯುಕ್ತ ‘ಅಪ್ಪು ದೇವರ ಮಾಲೆ’ ಧರಿಸಲು‌ ಕರೆ

ಬೆಂಗಳೂರು : ಶಬರಿಮಲೆ ಅಯ್ಯಪ್ಪ ಮಾಲೆಯಂತೆ ‘ಅಪ್ಪು ದೇವರ ಮಾಲೆ’ ಧರಿಸಲು ಹೊಸಪೇಟೆ ಅಭಿಮಾನಿ ಬಳಗ ಕರೆ ನೀಡಿರುವುದು ಸಾಮಾಜಿಕ ಮಾಧ್ಯಗಳಲ್ಲಿ ಭಾರೀ ಚರ್ಚೆಗೆ ಗುರಿಯಾಗಿದೆ. ಈ ವ್ರತದ ಕುರಿತು ಪರ–ವಿರೋಧದ ಅಭಿಪ್ರಾಯಗಳು ಹೊರಬರುತ್ತಿವೆ.

ಹೊಸಪೇಟೆಯ ಅಪ್ಪು ಅಭಿಮಾನಿಗಳ ಸಂಘ ಮಾರ್ಚ್​ 1ರಿಂದ​ 17ರವರೆಗೆ ಮಾಲಾಧಾರಣೆ ವ್ರತ ಆಚರಿಸಲು ಕರೆ ನೀಡಿದೆ. ಈ ಸಂಬಂಧ ಸಿದ್ಧಪಡಿಸಲಾದ ವ್ರತಾಚರಣೆ ನಿಯಮಗಳನ್ನು ಒಳಗೊಂಡಿರುವ ಕರಪತ್ರ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಮಾರ್ಚ್‌.17ರಂದು ಪುನೀತ್‌ ಹುಟ್ಟುಹಬ್ಬ ಇರುವುದರಿಂದ ಅಭಿಮಾನಿಗಳ ಸಂಘ ಈ ವ್ರತಕ್ಕೆ ಕರೆ ನೀಡಿದೆ. ಅಪ್ಪು ಮಾಲೆ ಧರಿಸಿದವರು ಮಾರ್ಚ್​ 18ರಂದು ಪುನೀತ್​ ರಾಜ್​ಕುಮಾರ್​ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ತಮ್ಮ ನೆಚ್ಚಿನ ನಟನಿಗೆ ಗೌರವ ಸಲ್ಲಿಸಬೇಕು ಎಂದು ಸಂಘ ಹೇಳಿದೆ.

ಹೊಸಪೇಟೆಯಲ್ಲಿ ಪುನೀತ್​ ರಾಜ್​ಕುಮಾರ್​ ಪ್ರತಿಮೆ ಇದೆ. ಅಪ್ಪು ಅಭಿಮಾನಿ ಎಂದು ಕರೆದುಕೊಂಡವರಿಂದ ಇದೇ ಊರಿನಲ್ಲಿ ನಟ ದರ್ಶನ್‌ ಮೇಲೆ ಇತ್ತೀಚೆಗೆ ಹಲ್ಲೆಯೂ ನಡೆದಿತ್ತು. ಇದೀಗ ಮಾಲೆ ಧರಿಸುವ ವ್ರತ ಹಮ್ಮಿಕೊಂಡಿದೆ. ಅಯ್ಯಪ್ಪ ಮಾಲಾಧಾರಣೆಯಂತೆ ರೂಪಿಸಲಾಗಿರುವ ಈ ಕಾರ್ಯಕ್ರಮಕ್ಕೆ ಕೆಲವರಿಂದ ತೀವ್ರ ವಿರೋಧವೂ ವ್ಯಕ್ತವಾಗುತ್ತಿದೆ. ಈ ರೀತಿ ಮಾಡುವುದು ಅಯ್ಯಪ್ಪ ಸ್ವಾಮಿಗೆ ಅವಮಾನ ಮಾಡಿದಂತೆ, ಮೌಢ್ಯತೆಯ ಹೊಸ ರೂಪ ಎಂದು ನೆಟ್ಟಿಗರು ಪ್ರತಿಕ್ರಿಯಿಸುತ್ತಿದ್ದಾರೆ.

‌‘ಅಪ್ಪು ದೇವರ ಮಾಲೆ’ ವ್ರತ ಆಚರಿಸುವವರು ಕೆಲವಷ್ಟು ನಿಯಮಗಳು :
ಅಪ್ಪು ಚಿತ್ರ ಹೊಂದಿರುವ ಡಾಲರ್​ ಧರಿಸಬೇಕು. ಕೇಸರಿ ಶಾಲು, ಪಂಚೆ, ಶರ್ಟ್​ ಧರಿಸಿ ಅಪ್ಪು ಭಾವಚಿತ್ರವನ್ನಿಟ್ಟು ಪೂಜಿಸಬೇಕು. ಬೆಳಗ್ಗೆ ಸೂರ್ಯ ಹುಟ್ಟುವುದಕ್ಕಿಂತ ಮೊದಲು ಮತ್ತು ಸಂಜೆ ಸೂರ್ಯ ಮುಳುಗಿದ ನಂತರ ಸ್ನಾನ ಮಾಡಬೇಕು ಎಂದು ಅಭಿಮಾನಿಗಳ ಸಂಘ ಹೇಳಿದೆ.

ಅಭಿಮಾನಿಗಳು 11,5 ಮತ್ತು ಒಂದು ದಿನದ ಮಾಲೆ ಧರಿಸಬಹುದು. ದಿನಸಿ ವಸ್ತುಗಳಿರುವ ಇಡುಮುರಿಯನ್ನು ಹೊತ್ತು ಪುನೀತ್​ ರಾಜ್​ಕುಮಾರ್​ ಅವರ ಪುಣ್ಯಭೂಮಿಗೆ ತೆರಳಬೇಕು. ಸಮಾಧಿ ದರ್ಶನ ಪಡೆದ ನಂತರ ಹಂಪಿಯ ಪುಣ್ಯ ನದಿಯಲ್ಲಿ ಸ್ನಾನ ಮಾಡಿ, ಬಳಿಕ ವಿರೂಪಾಕ್ಷ ದೇವರಿಗೆ ಪೂಜೆ ಸಲ್ಲಿಸಿ ಮಾಲೆ ವಿಸರ್ಜಿಸತಕ್ಕದ್ದು ಎಂದು ಕರಪತ್ರದಲ್ಲಿ ಸೂಚಿಸಲಾಗಿದೆ.  ಹೊಸಪೇಟೆಯ ಪುನೀತ್‌ ರಾಜ್‌ಕುಮಾರ್‌ ವೃತ್ತದಲ್ಲಿ ಮಾಲೆ ಧರಿಸುವವರು ಸೇರಬೇಕೆಂದು ತಿಳಿಸಲಾಗಿದೆ

andolanait

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

6 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

7 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago