ಚಿತ್ರ ಮಂಜರಿ

ಬೇಸಿಗೆಗೆ ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ಪ್ರಭಾಸ್‌ ನಟನಯೆ “ಸಲಾರ್‌”

ಪ್ರಭಾಸ್‌ ನಟನೆಯ ಮಾಸ್‌ ಎಲಿಮೆಂಟ್‌ ಸಿನಿಮಾ ಸಲಾರ್‌ ಕದನ ವಿರಾಮ-1 ಚಿತ್ರ ದೇಶಾದ್ಯಂತ ಯಶಸ್ಸು ಕಂಡ ಬಳಿಕ ಇದೀಗ ದ್ವೀಪ ರಾಷ್ಟ್ರ ಜಪಾನ್‌ ನಲ್ಲಿ ಬೇಸಿಗೆಗೆ ಸಲಾರ್‌ ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ.

ಹೊಂಬಾಳೆ ಪಿಲ್ಮ್ಸ್‌ ನಿರ್ಮಿಸಿ, ಪ್ರಶಾಂತ್‌ ನೀಲ್‌ ನಿರ್ದೇಶನದ ಸಲಾರ್‌ ಚಿತ್ರದ ವಿತರಣೆಯನ್ನು ಜಪಾನ್‌ ವಿತರಣ ಕಂಪನಿ ʼಟ್ವಿನ್‌ʼ ಹಕ್ಕನ್ನು ಪಡೆದುಕೊಂಡಿದ್ದು, ಬೇಸಿಗೆಗೆ ಚಿತ್ರವನ್ನು ಬಿಡುಗಡೆ ಮಾಡಲಿದೆ.

ಟ್ವಿನ್‌-೨ ಹೆಸರನ ಮೂಲಕ ಜಪಾನಿನಾದ್ಯಂತ ಎಲ್ಲಾ ಚಿತ್ರಮಂದಿರಗಳಲ್ಲಿ ಬೇಸಿಗೆಯಲ್ಲಿ ಸಲಾರ್‌ ಚಿತ್ರ ಬಿಡುಗಡೆಯಾಗಲಿದೆ. ಎಂದು ಚತ್ರ ತಂಡ ಶನಿವಾರ ಎಕ್ಸ್‌ ನ ಸಲಾರ್‌ ಅಧಿಕೃತ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಜೊತೆಗೆ ಮಾರ್ಚ್‌ ಏಳರಂದು ಲ್ಯಾಟಿನ್‌ ಅಮೇರಿಕಾದಲ್ಲಿ ಸ್ಪ್ಯಾನಿಷ್‌ ಭಾಷೆಯಲ್ಲಿ ಸಲಾರ್‌ ತೆರೆಕಾಣಲಿದೆ.

ಪ್ರಭಾಸ್‌, ಪೃಥ್ವಿರಾಜ್‌ ನಾಯಕರಾಗಿ ನಟಿಸಿರುವ ಸಲಾರ್‌ ಚಿತ್ರ ೨೦೨೩ರ ಡಿಸೆಂಬರ್‌ ೨೨ ರಂದು ದೇಶಾದ್ಯಂತ ತೆಲುಗು, ಕನ್ನಡ, ಮಲಯಾಳಂ, ತಮಿಳು ಮತ್ತು ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಿತ್ತು. ಮತ್ತು ಈ ಚಿತ್ರ ಬಾಕ್ಸ್‌ ಆಫೀಸ್‌ನಲ್ಲಿ ೬೫೦ ಕೋಟಿ ರೂ ಗಳಿಕೆ ಕಂಡು ಮುನ್ನುಗ್ಗುತ್ತಿದೆ.

ನಾಯಕಿಯಾಗಿ ಶ್ರುತಿ ಹಾಸನ್‌, ಜಗಪತಿ ಬಾಬು, ಈಶ್ವರಿ ರಾವ್‌, ಶ್ರೀಯಾ ರೆಡ್ಡಿ ಸೇರಿದಂತೆ ಹಲವು ನಟ-ನಟಿಯರ ದಂಡೇ ಚಿತ್ರ ತಂಡದಲ್ಲಿದೆ.

https://x.com/SalaarTheSaga/status/1743607138847744490?s=20

andolanait

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

8 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

9 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

10 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

10 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

10 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

10 hours ago