ಚಿತ್ರ ಮಂಜರಿ

ಬೇಸಿಗೆಗೆ ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ಪ್ರಭಾಸ್‌ ನಟನಯೆ “ಸಲಾರ್‌”

ಪ್ರಭಾಸ್‌ ನಟನೆಯ ಮಾಸ್‌ ಎಲಿಮೆಂಟ್‌ ಸಿನಿಮಾ ಸಲಾರ್‌ ಕದನ ವಿರಾಮ-1 ಚಿತ್ರ ದೇಶಾದ್ಯಂತ ಯಶಸ್ಸು ಕಂಡ ಬಳಿಕ ಇದೀಗ ದ್ವೀಪ ರಾಷ್ಟ್ರ ಜಪಾನ್‌ ನಲ್ಲಿ ಬೇಸಿಗೆಗೆ ಸಲಾರ್‌ ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ.

ಹೊಂಬಾಳೆ ಪಿಲ್ಮ್ಸ್‌ ನಿರ್ಮಿಸಿ, ಪ್ರಶಾಂತ್‌ ನೀಲ್‌ ನಿರ್ದೇಶನದ ಸಲಾರ್‌ ಚಿತ್ರದ ವಿತರಣೆಯನ್ನು ಜಪಾನ್‌ ವಿತರಣ ಕಂಪನಿ ʼಟ್ವಿನ್‌ʼ ಹಕ್ಕನ್ನು ಪಡೆದುಕೊಂಡಿದ್ದು, ಬೇಸಿಗೆಗೆ ಚಿತ್ರವನ್ನು ಬಿಡುಗಡೆ ಮಾಡಲಿದೆ.

ಟ್ವಿನ್‌-೨ ಹೆಸರನ ಮೂಲಕ ಜಪಾನಿನಾದ್ಯಂತ ಎಲ್ಲಾ ಚಿತ್ರಮಂದಿರಗಳಲ್ಲಿ ಬೇಸಿಗೆಯಲ್ಲಿ ಸಲಾರ್‌ ಚಿತ್ರ ಬಿಡುಗಡೆಯಾಗಲಿದೆ. ಎಂದು ಚತ್ರ ತಂಡ ಶನಿವಾರ ಎಕ್ಸ್‌ ನ ಸಲಾರ್‌ ಅಧಿಕೃತ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಜೊತೆಗೆ ಮಾರ್ಚ್‌ ಏಳರಂದು ಲ್ಯಾಟಿನ್‌ ಅಮೇರಿಕಾದಲ್ಲಿ ಸ್ಪ್ಯಾನಿಷ್‌ ಭಾಷೆಯಲ್ಲಿ ಸಲಾರ್‌ ತೆರೆಕಾಣಲಿದೆ.

ಪ್ರಭಾಸ್‌, ಪೃಥ್ವಿರಾಜ್‌ ನಾಯಕರಾಗಿ ನಟಿಸಿರುವ ಸಲಾರ್‌ ಚಿತ್ರ ೨೦೨೩ರ ಡಿಸೆಂಬರ್‌ ೨೨ ರಂದು ದೇಶಾದ್ಯಂತ ತೆಲುಗು, ಕನ್ನಡ, ಮಲಯಾಳಂ, ತಮಿಳು ಮತ್ತು ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಿತ್ತು. ಮತ್ತು ಈ ಚಿತ್ರ ಬಾಕ್ಸ್‌ ಆಫೀಸ್‌ನಲ್ಲಿ ೬೫೦ ಕೋಟಿ ರೂ ಗಳಿಕೆ ಕಂಡು ಮುನ್ನುಗ್ಗುತ್ತಿದೆ.

ನಾಯಕಿಯಾಗಿ ಶ್ರುತಿ ಹಾಸನ್‌, ಜಗಪತಿ ಬಾಬು, ಈಶ್ವರಿ ರಾವ್‌, ಶ್ರೀಯಾ ರೆಡ್ಡಿ ಸೇರಿದಂತೆ ಹಲವು ನಟ-ನಟಿಯರ ದಂಡೇ ಚಿತ್ರ ತಂಡದಲ್ಲಿದೆ.

https://x.com/SalaarTheSaga/status/1743607138847744490?s=20

andolanait

Recent Posts

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

43 mins ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

1 hour ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

9 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

10 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

10 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

10 hours ago