ಚಿತ್ರ ಮಂಜರಿ

ಪ್ರಭಾಸ್ ನಟನೆ ‘ಸಲಾರ್’ ರಿಲೀಸ್ ಡೇಟ್ ಫಿಕ್ಸ್.!

ಪ್ರಭಾಸ್‌ ನಟನೆಯ ‘ಸಲಾರ್‌’ ಚಿತ್ರ ಬಿಡುಗಡೆಗೆ ಹೊಂಬಾಳೆ ಫಿಲ್ಮ್ಸ್‌ ಹೊಸ ಮುಹೂರ್ತ ನಿಗದಿ ಮಾಡಿದೆ.

ಚಿತ್ರವನ್ನಿ ಡಿಸೆಂಬರ್ 22 ರಂದು ವಿಶ್ವದಾದ್ಯಂತ ಬಿಡುಗಡೆ ಮಾಡುವುದಾಗಿ ಚಿತ್ರ ತಂಡ ಘೋಷಣೆ ಮಾಡಿದೆ. ಅಲ್ಲದೆ, ಸಲಾರ್‌ನ ಅಧಿಕೃತ ಟ್ರೇಲರ್ ಪ್ರಭಾಸ್ ಅವರ ಹುಟ್ಟುಹಬ್ಬದಂದು ಅಂದರೆ ಅಕ್ಟೋಬರ್ 23 ರಂದು ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.

ಈ ಹಿಂದೆ ಸೆ.28ರಂದು ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿತ್ತು. ಕಾರಣಾಂತರಗಳಿಂದ ಬಿಡುಗಡೆ ಮುಂದಕ್ಕೆ ಹೋಗಿತ್ತು. ಜುಲೈ 6 ರಂದು ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿತ್ತು.

ಕೆಜಿಫ್ ನಿರ್ದೇಶಕ ಪ್ರಶಾಂತ್‌ ನೀಲ್‌ ಆ್ಯಕ್ಷನ್‌, ಕಟ್‌ ಹೇಳಿರುವ ‘ಸಲಾರ್‌’, ‘ಕೆ.ಜಿ.ಎಫ್‌.’ನಂತೆ ಎರಡು ಭಾಗಗಳಲ್ಲಿ ತೆರೆಕಾಣುತ್ತಿದೆ. ಸಿನಿಮಾದ ಮೊದಲ ಭಾಗಕ್ಕೆ ‘ಸೀಸ್‌ ಫೈರ್‌’ ಎಂಬ ಅಡಿಬರಹವಿದೆ. ಹೊಂಬಾಳೆ ಫಿಲ್ಮ್ಸ್‌ನಡಿ ನಿರ್ಮಾಪಕ ವಿಜಯ್ ಕಿರಗಂದೂರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಭುವನ್ ಗೌಡ ಅವರ ಛಾಯಾಗ್ರಹಣ, ಉಜ್ವಲ್ ಕುಲಕರ್ಣಿ ಸಂಕಲನ ಮತ್ತು ಶಿವಕುಮಾರ್ ಮತ್ತು ವೆಂಕಟಾಚಲಪತಿ ಅವರ ನಿರ್ಮಾಣ ವಿನ್ಯಾಸವಿರುವ ಈ ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ಸಂಯೋಜಕರಾಗಿದ್ದಾರೆ.

ಚಿತ್ರದಲ್ಲಿ ಪ್ರಭಾಸ್ ಜೊತೆಗೆ ಸಲಾರ್, ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಟಿನ್ನು ಆನಂದ್, ಶ್ರೀಯಾ ರೆಡ್ಡಿ, ಮತ್ತು ಪ್ರಮೋದ್ ಕೂಡ ನಟಿಸಿದ್ದಾರೆ.

ಸಲಾರ್ ಕನ್ನಡ ಮತ್ತು ತೆಲುಗು ಜೊತೆಗೆ ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲೂ ಬಿಡುಗಡೆಯಾಗಲಿದೆ. ಶಾರುಖ್ ಖಾನ್-ರಾಜ್‌ಕುಮಾರ್ ಹಿರಾನಿ ಚಿತ್ರ ಡುಂಕಿ ಚಿತ್ರವನ್ನೂ ಇದೇ ದಿನದಂದೇ ಬಿಡುಗಡೆ ಮಾಡಲಾಗುತ್ತಿದ್ದು, ಎರಡು ಚಿತ್ರಗಳ ನಡುವೆ ಪೈಪೋಟಿ ಎದುರಾಗಲಿದೆ ಎನ್ನಲಾಗುತ್ತಿದೆ.

andolanait

Recent Posts

ಶಿವಮೊಗ್ಗದಲ್ಲಿ 8 ಮಂದಿಗೆ ಮಂಗನ ಕಾಯಿಲೆ ಪಾಸಿಟಿವ್‌: ಮನೆಮಾಡಿದ ಆತಂಕ

ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್‌ ಕೇಸ್‌ಗಳು ಮತ್ತಷ್ಟು…

19 mins ago

ಫಲಾನುಭವಿಗಳ ಖಾತೆಗೆ ಜಮೆಯಾಗದ ಗೃಹಲಕ್ಷ್ಮಿ ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಿಷ್ಟು.!

ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ…

38 mins ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಸೋಮವಾರಪೇಟೆ ವಿದ್ಯುತ್‌ ವಿತರಣಾ ಉಪ ಕೇಂದ್ರದಿಂದ ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಫೀಡರ್‌ ನಿರ್ವಹಣೆ ಕಾಮಗಾರಿ…

52 mins ago

ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ

ಎಚ್.ಡಿ.ಕೋಟೆ: ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿ…

1 hour ago

ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್‌ ಮೇಲೆ ಐಟಿ ದಾಳಿ

ಬೆಂಗಳೂರು: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್‌ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.…

2 hours ago

ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಹೊಸ ರೂಲ್ಸ್

ಬೆಂಗಳೂರು: ಈ ಬಾರಿ ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್‌ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. 1)…

2 hours ago