ಚಿತ್ರ ಮಂಜರಿ

ಪ್ರಭಾಸ್ ನಟನೆ ‘ಸಲಾರ್’ ರಿಲೀಸ್ ಡೇಟ್ ಫಿಕ್ಸ್.!

ಪ್ರಭಾಸ್‌ ನಟನೆಯ ‘ಸಲಾರ್‌’ ಚಿತ್ರ ಬಿಡುಗಡೆಗೆ ಹೊಂಬಾಳೆ ಫಿಲ್ಮ್ಸ್‌ ಹೊಸ ಮುಹೂರ್ತ ನಿಗದಿ ಮಾಡಿದೆ.

ಚಿತ್ರವನ್ನಿ ಡಿಸೆಂಬರ್ 22 ರಂದು ವಿಶ್ವದಾದ್ಯಂತ ಬಿಡುಗಡೆ ಮಾಡುವುದಾಗಿ ಚಿತ್ರ ತಂಡ ಘೋಷಣೆ ಮಾಡಿದೆ. ಅಲ್ಲದೆ, ಸಲಾರ್‌ನ ಅಧಿಕೃತ ಟ್ರೇಲರ್ ಪ್ರಭಾಸ್ ಅವರ ಹುಟ್ಟುಹಬ್ಬದಂದು ಅಂದರೆ ಅಕ್ಟೋಬರ್ 23 ರಂದು ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.

ಈ ಹಿಂದೆ ಸೆ.28ರಂದು ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿತ್ತು. ಕಾರಣಾಂತರಗಳಿಂದ ಬಿಡುಗಡೆ ಮುಂದಕ್ಕೆ ಹೋಗಿತ್ತು. ಜುಲೈ 6 ರಂದು ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿತ್ತು.

ಕೆಜಿಫ್ ನಿರ್ದೇಶಕ ಪ್ರಶಾಂತ್‌ ನೀಲ್‌ ಆ್ಯಕ್ಷನ್‌, ಕಟ್‌ ಹೇಳಿರುವ ‘ಸಲಾರ್‌’, ‘ಕೆ.ಜಿ.ಎಫ್‌.’ನಂತೆ ಎರಡು ಭಾಗಗಳಲ್ಲಿ ತೆರೆಕಾಣುತ್ತಿದೆ. ಸಿನಿಮಾದ ಮೊದಲ ಭಾಗಕ್ಕೆ ‘ಸೀಸ್‌ ಫೈರ್‌’ ಎಂಬ ಅಡಿಬರಹವಿದೆ. ಹೊಂಬಾಳೆ ಫಿಲ್ಮ್ಸ್‌ನಡಿ ನಿರ್ಮಾಪಕ ವಿಜಯ್ ಕಿರಗಂದೂರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಭುವನ್ ಗೌಡ ಅವರ ಛಾಯಾಗ್ರಹಣ, ಉಜ್ವಲ್ ಕುಲಕರ್ಣಿ ಸಂಕಲನ ಮತ್ತು ಶಿವಕುಮಾರ್ ಮತ್ತು ವೆಂಕಟಾಚಲಪತಿ ಅವರ ನಿರ್ಮಾಣ ವಿನ್ಯಾಸವಿರುವ ಈ ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ಸಂಯೋಜಕರಾಗಿದ್ದಾರೆ.

ಚಿತ್ರದಲ್ಲಿ ಪ್ರಭಾಸ್ ಜೊತೆಗೆ ಸಲಾರ್, ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಟಿನ್ನು ಆನಂದ್, ಶ್ರೀಯಾ ರೆಡ್ಡಿ, ಮತ್ತು ಪ್ರಮೋದ್ ಕೂಡ ನಟಿಸಿದ್ದಾರೆ.

ಸಲಾರ್ ಕನ್ನಡ ಮತ್ತು ತೆಲುಗು ಜೊತೆಗೆ ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲೂ ಬಿಡುಗಡೆಯಾಗಲಿದೆ. ಶಾರುಖ್ ಖಾನ್-ರಾಜ್‌ಕುಮಾರ್ ಹಿರಾನಿ ಚಿತ್ರ ಡುಂಕಿ ಚಿತ್ರವನ್ನೂ ಇದೇ ದಿನದಂದೇ ಬಿಡುಗಡೆ ಮಾಡಲಾಗುತ್ತಿದ್ದು, ಎರಡು ಚಿತ್ರಗಳ ನಡುವೆ ಪೈಪೋಟಿ ಎದುರಾಗಲಿದೆ ಎನ್ನಲಾಗುತ್ತಿದೆ.

andolanait

Recent Posts

ಖಾದಿ ಕೇಂದ್ರಗಳಿಗೆ ಚೈತನ್ಯ ನೀಡುವ ನಿಟ್ಟಿನಲ್ಲಿ ಸರ್ಕಾರದ ಹೆಜ್ಜೆ

ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…

3 hours ago

ಮೌನ ಸಾಧಕ ಎಂ.ಶ್ರೀನಿವಾಸ್ @ 75

ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಜುಂಜುಂ ಫ್ಯಾಕ್ಟರಿ ಮಾಲೀಕನ ಸಾವಿನ ವೃತ್ತಾಂತ

ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…

3 hours ago

ಉದ್ಯಮಿಯ ಪರಿಶ್ರಮದಿಂದ ಕಾಯಕಲ್ಪ ಪಡೆದ ಉದ್ಯಾನ

ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…

3 hours ago

ಶತಮಾನದ ದೇವರಾಜ ಶಾಲೆಯ ಶೋಕಗೀತೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…

3 hours ago

ಅಭದ್ರತೆ ಹಾದಿಯಲಿ ವಿಕಸಿತ ಭಾರತದತ್ತ ‘ಆನಿ (ಆಮೆ) ನಡಿಗೆ’

ರಾಜಾರಾಂ ತಲ್ಲೂರು ಆರ್ಥಿಕ ಶಿಸ್ತಿನ ಚೌಕಟ್ಟಿನ ಒಂದೊಂದೇ ಅಂಶಗಳನ್ನು ಮುಂದಿಟ್ಟುಕೊಂಡು - ‘ನೋಡಿ, ನಾವು ಆರ್ಥಿಕವಾಗಿ ಸ್ಥಿರವಾಗಿದ್ದು, ವಿಕಸಿತ ಭಾರತದತ್ತ…

3 hours ago