ಚಿತ್ರ ಮಂಜರಿ

ಮದುವೆ ಸಂಭ್ರಮದಲ್ಲಿರೋ ಪ್ರಥಮ್ ಗೆ ದೆವ್ವದ ಜೊತೆ ಫಸ್ಟ್ ನೈಟ್

ಮದುವೆ ಸಂಭ್ರಮದಲ್ಲಿರೋ ಬಿಗ್ ಬಾಸ್ ಕ್ಯಾತಿಯ ಮಾತಿನ ಮಲ್ಲ ಒಳ್ಳೆ ಹುಡುಗ ಪ್ರಥಮ್ ದೆವ್ವದ ಜೊತೆ ಫಸ್ಟ್ ನೈಟ್ ಮಾಡಿಕೊಳ್ಳಲು ರೆಡಿ ಆಗಿದ್ದಾರೆ.

ಹೌದು, ನಟ ಪ್ರಥಮ್  ಫಸ್ಟ್ ನೈಟ್ ವಿಥ್ಎಂ ದೆವ್ವ ಎಂಬ ಹೊಸ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ತಾವೇ ಕಥೆ ಬರೆದಿರೋ ಹಾರರ್ ವಿಥ್ ಕಾಮಿಡಿ ಜಾನರ್ ಚಿತ್ರದಲ್ಲಿ ನಾಯಕನಾಗಿ ಬಣ್ಣ ಹಚ್ಚಲಿದ್ದಾರೆ. ಇತ್ತೀಚೆಗಷ್ಟೇ ಬಂಡೆ ಮಾಹಾಂಕಾಳಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನೆರವೇರಿದೆ. ಸ್ಯಾಂಡಲ್ ವುಡ್ ನ ಹಿರಿಯ ನಟ ಶ್ರೀನಿವಾಸ ಮೂರ್ತಿ ಅವರು ಕ್ಲಾಪ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಕೋರಿದರು.

ಚಿತ್ರದಲ್ಲಿ ಒಳ್ಳೆ ಹುಡುಗ ಪ್ರಥಮ್ ನಾಯಕನಾಗಿ ನಟಿಸುತ್ತಿದ್ದು, ಅವರಿಗೆ ನಾಯಕಿಯಾಗಿ ನಿಖಿತ ಅವರು ಬಣ್ಣ ಹಚ್ಚಿದ್ದಾರೆ. ಇನ್ನೂ ಹಿರಿಯ ನಟ ಶ್ರೀನಿವಾಸ ಮೂರ್ತಿ, ಹರೀಶ್ ರಾಜ್,ತನುಜಾ, ಮಾನ್ಯ ಸಿಂಗ್ ಅವರು ತಾರಾ ಬಳಗದಲ್ಲಿದ್ದಾರೆ.

ಈ ವಾರದಲ್ಲಿ ಹಸೆ ಮಣೆ ಏರಲು ಸಜ್ಜಗಿರುವ ಪ್ರಥಮ್ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿರುವುದಕ್ಕೆ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಕಳೆದವಾರ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಚ್ಚಿಕೊಂಡಿದ್ದ ಪ್ರಥಮ್, ಮುಂದಿನ ವಾರ ಮದುವೆ ಅಲ್ಲೇ ಬಂದು ಆಶೀರ್ವಾದ ಮಾಡಬೇಕು ಅಂತೇನೂ ಇಲ್ಲ. ಕರೆಯೋಕೆ ಸಂಭ್ರಮವೂ ಇಲ್ಲ. ಆಹ್ವಾನ ಪತ್ರಿಕೆ ತಲುಪಿಸೋದೆ ಹರಸಾಹಸ. ಹಾಗಂತ ಸುಮ್ಮನೆ ಫಾರ್ವರ್ಡ್ ಮೆಸೇಜ್ ಹಾಕಿ ನಿಮ್ಮನ್ನ ಮದುವೆಗೆ ಕಾಟಚಾರಕ್ಕೆ ಕರೆಯೋದಿಲ್ಲ ಈಗ ಎಲ್ಲಿರ್ತಿರೋ ಅಲ್ಲಿಂದಲೇ ಹಾರೈಸಿ. ಅದ್ದೂರಿಯಾಗಿ ಆಗಬಹುದಿತ್ತು. ಆದರೆ ನನಗೆ ಆಸಕ್ತಿ ಇಲ್ಲ, ಸರಳವಾಗಿ ಆಗ್ತಿರೋ ಕಾರಣ ನೀವು ಇದ್ದಲ್ಲಿಯೇ ಹಾರೈಸಿ ಎಂದು ತಮ್ಮದೇ ಸ್ಟೈಲ್ ನಲ್ಲಿ ಮದುವೆ ಬಗೆಗಿನ ಅಪ್ಡೇಟ್ ನೀಡಿದ್ದರು.

lokesh

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

11 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

12 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

17 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

17 hours ago