ಚಿತ್ರ ಮಂಜರಿ

ಮದುವೆ ಸಂಭ್ರಮದಲ್ಲಿರೋ ಪ್ರಥಮ್ ಗೆ ದೆವ್ವದ ಜೊತೆ ಫಸ್ಟ್ ನೈಟ್

ಮದುವೆ ಸಂಭ್ರಮದಲ್ಲಿರೋ ಬಿಗ್ ಬಾಸ್ ಕ್ಯಾತಿಯ ಮಾತಿನ ಮಲ್ಲ ಒಳ್ಳೆ ಹುಡುಗ ಪ್ರಥಮ್ ದೆವ್ವದ ಜೊತೆ ಫಸ್ಟ್ ನೈಟ್ ಮಾಡಿಕೊಳ್ಳಲು ರೆಡಿ ಆಗಿದ್ದಾರೆ.

ಹೌದು, ನಟ ಪ್ರಥಮ್  ಫಸ್ಟ್ ನೈಟ್ ವಿಥ್ಎಂ ದೆವ್ವ ಎಂಬ ಹೊಸ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ತಾವೇ ಕಥೆ ಬರೆದಿರೋ ಹಾರರ್ ವಿಥ್ ಕಾಮಿಡಿ ಜಾನರ್ ಚಿತ್ರದಲ್ಲಿ ನಾಯಕನಾಗಿ ಬಣ್ಣ ಹಚ್ಚಲಿದ್ದಾರೆ. ಇತ್ತೀಚೆಗಷ್ಟೇ ಬಂಡೆ ಮಾಹಾಂಕಾಳಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನೆರವೇರಿದೆ. ಸ್ಯಾಂಡಲ್ ವುಡ್ ನ ಹಿರಿಯ ನಟ ಶ್ರೀನಿವಾಸ ಮೂರ್ತಿ ಅವರು ಕ್ಲಾಪ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಕೋರಿದರು.

ಚಿತ್ರದಲ್ಲಿ ಒಳ್ಳೆ ಹುಡುಗ ಪ್ರಥಮ್ ನಾಯಕನಾಗಿ ನಟಿಸುತ್ತಿದ್ದು, ಅವರಿಗೆ ನಾಯಕಿಯಾಗಿ ನಿಖಿತ ಅವರು ಬಣ್ಣ ಹಚ್ಚಿದ್ದಾರೆ. ಇನ್ನೂ ಹಿರಿಯ ನಟ ಶ್ರೀನಿವಾಸ ಮೂರ್ತಿ, ಹರೀಶ್ ರಾಜ್,ತನುಜಾ, ಮಾನ್ಯ ಸಿಂಗ್ ಅವರು ತಾರಾ ಬಳಗದಲ್ಲಿದ್ದಾರೆ.

ಈ ವಾರದಲ್ಲಿ ಹಸೆ ಮಣೆ ಏರಲು ಸಜ್ಜಗಿರುವ ಪ್ರಥಮ್ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿರುವುದಕ್ಕೆ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಕಳೆದವಾರ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಚ್ಚಿಕೊಂಡಿದ್ದ ಪ್ರಥಮ್, ಮುಂದಿನ ವಾರ ಮದುವೆ ಅಲ್ಲೇ ಬಂದು ಆಶೀರ್ವಾದ ಮಾಡಬೇಕು ಅಂತೇನೂ ಇಲ್ಲ. ಕರೆಯೋಕೆ ಸಂಭ್ರಮವೂ ಇಲ್ಲ. ಆಹ್ವಾನ ಪತ್ರಿಕೆ ತಲುಪಿಸೋದೆ ಹರಸಾಹಸ. ಹಾಗಂತ ಸುಮ್ಮನೆ ಫಾರ್ವರ್ಡ್ ಮೆಸೇಜ್ ಹಾಕಿ ನಿಮ್ಮನ್ನ ಮದುವೆಗೆ ಕಾಟಚಾರಕ್ಕೆ ಕರೆಯೋದಿಲ್ಲ ಈಗ ಎಲ್ಲಿರ್ತಿರೋ ಅಲ್ಲಿಂದಲೇ ಹಾರೈಸಿ. ಅದ್ದೂರಿಯಾಗಿ ಆಗಬಹುದಿತ್ತು. ಆದರೆ ನನಗೆ ಆಸಕ್ತಿ ಇಲ್ಲ, ಸರಳವಾಗಿ ಆಗ್ತಿರೋ ಕಾರಣ ನೀವು ಇದ್ದಲ್ಲಿಯೇ ಹಾರೈಸಿ ಎಂದು ತಮ್ಮದೇ ಸ್ಟೈಲ್ ನಲ್ಲಿ ಮದುವೆ ಬಗೆಗಿನ ಅಪ್ಡೇಟ್ ನೀಡಿದ್ದರು.

lokesh

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

12 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

14 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

14 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

18 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

23 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

23 hours ago