ಮದುವೆ ಸಂಭ್ರಮದಲ್ಲಿರೋ ಬಿಗ್ ಬಾಸ್ ಕ್ಯಾತಿಯ ಮಾತಿನ ಮಲ್ಲ ಒಳ್ಳೆ ಹುಡುಗ ಪ್ರಥಮ್ ದೆವ್ವದ ಜೊತೆ ಫಸ್ಟ್ ನೈಟ್ ಮಾಡಿಕೊಳ್ಳಲು ರೆಡಿ ಆಗಿದ್ದಾರೆ.
ಹೌದು, ನಟ ಪ್ರಥಮ್ ಫಸ್ಟ್ ನೈಟ್ ವಿಥ್ಎಂ ದೆವ್ವ ಎಂಬ ಹೊಸ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ತಾವೇ ಕಥೆ ಬರೆದಿರೋ ಹಾರರ್ ವಿಥ್ ಕಾಮಿಡಿ ಜಾನರ್ ಚಿತ್ರದಲ್ಲಿ ನಾಯಕನಾಗಿ ಬಣ್ಣ ಹಚ್ಚಲಿದ್ದಾರೆ. ಇತ್ತೀಚೆಗಷ್ಟೇ ಬಂಡೆ ಮಾಹಾಂಕಾಳಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನೆರವೇರಿದೆ. ಸ್ಯಾಂಡಲ್ ವುಡ್ ನ ಹಿರಿಯ ನಟ ಶ್ರೀನಿವಾಸ ಮೂರ್ತಿ ಅವರು ಕ್ಲಾಪ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಕೋರಿದರು.
ಚಿತ್ರದಲ್ಲಿ ಒಳ್ಳೆ ಹುಡುಗ ಪ್ರಥಮ್ ನಾಯಕನಾಗಿ ನಟಿಸುತ್ತಿದ್ದು, ಅವರಿಗೆ ನಾಯಕಿಯಾಗಿ ನಿಖಿತ ಅವರು ಬಣ್ಣ ಹಚ್ಚಿದ್ದಾರೆ. ಇನ್ನೂ ಹಿರಿಯ ನಟ ಶ್ರೀನಿವಾಸ ಮೂರ್ತಿ, ಹರೀಶ್ ರಾಜ್,ತನುಜಾ, ಮಾನ್ಯ ಸಿಂಗ್ ಅವರು ತಾರಾ ಬಳಗದಲ್ಲಿದ್ದಾರೆ.
ಈ ವಾರದಲ್ಲಿ ಹಸೆ ಮಣೆ ಏರಲು ಸಜ್ಜಗಿರುವ ಪ್ರಥಮ್ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿರುವುದಕ್ಕೆ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಕಳೆದವಾರ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಚ್ಚಿಕೊಂಡಿದ್ದ ಪ್ರಥಮ್, ಮುಂದಿನ ವಾರ ಮದುವೆ ಅಲ್ಲೇ ಬಂದು ಆಶೀರ್ವಾದ ಮಾಡಬೇಕು ಅಂತೇನೂ ಇಲ್ಲ. ಕರೆಯೋಕೆ ಸಂಭ್ರಮವೂ ಇಲ್ಲ. ಆಹ್ವಾನ ಪತ್ರಿಕೆ ತಲುಪಿಸೋದೆ ಹರಸಾಹಸ. ಹಾಗಂತ ಸುಮ್ಮನೆ ಫಾರ್ವರ್ಡ್ ಮೆಸೇಜ್ ಹಾಕಿ ನಿಮ್ಮನ್ನ ಮದುವೆಗೆ ಕಾಟಚಾರಕ್ಕೆ ಕರೆಯೋದಿಲ್ಲ ಈಗ ಎಲ್ಲಿರ್ತಿರೋ ಅಲ್ಲಿಂದಲೇ ಹಾರೈಸಿ. ಅದ್ದೂರಿಯಾಗಿ ಆಗಬಹುದಿತ್ತು. ಆದರೆ ನನಗೆ ಆಸಕ್ತಿ ಇಲ್ಲ, ಸರಳವಾಗಿ ಆಗ್ತಿರೋ ಕಾರಣ ನೀವು ಇದ್ದಲ್ಲಿಯೇ ಹಾರೈಸಿ ಎಂದು ತಮ್ಮದೇ ಸ್ಟೈಲ್ ನಲ್ಲಿ ಮದುವೆ ಬಗೆಗಿನ ಅಪ್ಡೇಟ್ ನೀಡಿದ್ದರು.
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…
ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…