ಮದುವೆ ಸಂಭ್ರಮದಲ್ಲಿರೋ ಬಿಗ್ ಬಾಸ್ ಕ್ಯಾತಿಯ ಮಾತಿನ ಮಲ್ಲ ಒಳ್ಳೆ ಹುಡುಗ ಪ್ರಥಮ್ ದೆವ್ವದ ಜೊತೆ ಫಸ್ಟ್ ನೈಟ್ ಮಾಡಿಕೊಳ್ಳಲು ರೆಡಿ ಆಗಿದ್ದಾರೆ.
ಹೌದು, ನಟ ಪ್ರಥಮ್ ಫಸ್ಟ್ ನೈಟ್ ವಿಥ್ಎಂ ದೆವ್ವ ಎಂಬ ಹೊಸ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ತಾವೇ ಕಥೆ ಬರೆದಿರೋ ಹಾರರ್ ವಿಥ್ ಕಾಮಿಡಿ ಜಾನರ್ ಚಿತ್ರದಲ್ಲಿ ನಾಯಕನಾಗಿ ಬಣ್ಣ ಹಚ್ಚಲಿದ್ದಾರೆ. ಇತ್ತೀಚೆಗಷ್ಟೇ ಬಂಡೆ ಮಾಹಾಂಕಾಳಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನೆರವೇರಿದೆ. ಸ್ಯಾಂಡಲ್ ವುಡ್ ನ ಹಿರಿಯ ನಟ ಶ್ರೀನಿವಾಸ ಮೂರ್ತಿ ಅವರು ಕ್ಲಾಪ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಕೋರಿದರು.
ಚಿತ್ರದಲ್ಲಿ ಒಳ್ಳೆ ಹುಡುಗ ಪ್ರಥಮ್ ನಾಯಕನಾಗಿ ನಟಿಸುತ್ತಿದ್ದು, ಅವರಿಗೆ ನಾಯಕಿಯಾಗಿ ನಿಖಿತ ಅವರು ಬಣ್ಣ ಹಚ್ಚಿದ್ದಾರೆ. ಇನ್ನೂ ಹಿರಿಯ ನಟ ಶ್ರೀನಿವಾಸ ಮೂರ್ತಿ, ಹರೀಶ್ ರಾಜ್,ತನುಜಾ, ಮಾನ್ಯ ಸಿಂಗ್ ಅವರು ತಾರಾ ಬಳಗದಲ್ಲಿದ್ದಾರೆ.
ಈ ವಾರದಲ್ಲಿ ಹಸೆ ಮಣೆ ಏರಲು ಸಜ್ಜಗಿರುವ ಪ್ರಥಮ್ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿರುವುದಕ್ಕೆ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಕಳೆದವಾರ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಚ್ಚಿಕೊಂಡಿದ್ದ ಪ್ರಥಮ್, ಮುಂದಿನ ವಾರ ಮದುವೆ ಅಲ್ಲೇ ಬಂದು ಆಶೀರ್ವಾದ ಮಾಡಬೇಕು ಅಂತೇನೂ ಇಲ್ಲ. ಕರೆಯೋಕೆ ಸಂಭ್ರಮವೂ ಇಲ್ಲ. ಆಹ್ವಾನ ಪತ್ರಿಕೆ ತಲುಪಿಸೋದೆ ಹರಸಾಹಸ. ಹಾಗಂತ ಸುಮ್ಮನೆ ಫಾರ್ವರ್ಡ್ ಮೆಸೇಜ್ ಹಾಕಿ ನಿಮ್ಮನ್ನ ಮದುವೆಗೆ ಕಾಟಚಾರಕ್ಕೆ ಕರೆಯೋದಿಲ್ಲ ಈಗ ಎಲ್ಲಿರ್ತಿರೋ ಅಲ್ಲಿಂದಲೇ ಹಾರೈಸಿ. ಅದ್ದೂರಿಯಾಗಿ ಆಗಬಹುದಿತ್ತು. ಆದರೆ ನನಗೆ ಆಸಕ್ತಿ ಇಲ್ಲ, ಸರಳವಾಗಿ ಆಗ್ತಿರೋ ಕಾರಣ ನೀವು ಇದ್ದಲ್ಲಿಯೇ ಹಾರೈಸಿ ಎಂದು ತಮ್ಮದೇ ಸ್ಟೈಲ್ ನಲ್ಲಿ ಮದುವೆ ಬಗೆಗಿನ ಅಪ್ಡೇಟ್ ನೀಡಿದ್ದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…