ಚಿತ್ರ ಮಂಜರಿ

ಹೊಂಬಾಳೆ ಫಿಲ್ಮ್ಸ್ ತಂಡದಿಂದ ಸಲಾರ್ ಚಿತ್ರದ ಪೃಥ್ವಿರಾಜ್ ಫಸ್ಟ್ ಲುಕ್ ಬಿಡುಗಡೆ

ಎಲ್ಲಾ ಸಲಾರ್ ಅಭಿಮಾನಿಗಳಿಗೆ ಇದು ಅದ್ಭುತ ದಿನವಾಗಲಿದೆ. ಖ್ಯಾತ ನಟ/ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ ಅವರ ಜನ್ಮದಿನದ ಸಂದರ್ಭದಲ್ಲಿ, ಅವರ ಕ್ರೂರ ಪಾತ್ರದ ಫಸ್ಟ್ ಲುಕ್ ಅನ್ನು ಹೊಂಬಾಳೆ ಫಿಲ್ಮ್ಸ್ ಪ್ರೊಡಕ್ಷನ್ ಹೌಸ್ ತಮ್ಮ ಟ್ವಿಟರ್ ಖಾತೆಯಲ್ಲಿ ಬಿಡುಗಡೆ ಮಾಡಿದೆ. ಈ ಅದ್ಭುತ ಪಾತ್ರ ಚಿತ್ರದಲ್ಲಿ ಹೊಸ ಅಲೆಯನ್ನು ಸೃಷ್ಟಿಸುವ ಭರವಸೆ ನೀಡಿದೆ.

ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿರುವ ಈ ಚಿತ್ರವನ್ನು ಕೆಜಿಎಫ್ ಮಾಸ್ಟರ್ ಮೈಂಡ್‌ ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ. ಸಲಾರ್ ಚಿತ್ರದಲ್ಲಿ ಪ್ರಭಾಸ್ ನಾಯಕನಾಗಿ ನಟಿಸಿದ್ದಾರೆ ಮತ್ತು ಶ್ರುತಿ ಹಾಸನ್ ನಾಯಕಿಯಾಗಿ ನಟಿಸಿದ್ದಾರೆ ಹಾಗೂ ಮಧು ಗುರುಸ್ವಾಮಿ, ಜಗಪತಿ ಬಾಬು, ಈಶ್ವರಿ ರಾವ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಆಕ್ಷನ್ ಥ್ರಿಲ್ಲರ್ ಎಂದು ಹೇಳಲಾದ ಈ ಚಿತ್ರವು ನಿರ್ದೇಶಕ ಪ್ರಶಾಂತ್ ನೀಲ್, ಪ್ರಭಾಸ್ ಮತ್ತು ಪೃಥ್ವಿರಾಜ್ ನಡುವಿನ ಮೊದಲ ಕಾಂಬಿನೇಷನ್‌ ಮತ್ತು ನೀಲ್ ಅವರ ಮೊದಲ ತೆಲುಗು ಸಾಹಸವಾಗಿದೆ. ತಮ್ಮ ಪಾತ್ರದ ಕುರಿತು ಪ್ರಭಾಸ್ ಈಗಾಗಲೇ ಹೀಗೆ ಹೇಳಿದ್ದಾರೆ: “ನನ್ನ ಪಾತ್ರವು ಅತ್ಯಂತ ಹಿಂಸಾತ್ಮಕವಾಗಿದೆ, ಈ ರೀತಿಯ ಪಾತ್ರವನ್ನು ನಾನು ಈ ಮೊದಲು ಮಾಡಿಲ್ಲ.”

ಪೃಥ್ವಿರಾಜ್ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿ ಮಾತನಾಡಿದ ಪ್ರಶಾಂತ್ ನೀಲ್, ‘ಪೃಥ್ವಿರಾಜ್ ಪಾತ್ರವು ಸ್ನೇಹಿತ ಮತ್ತು ಶತ್ರುವನ್ನು ಆಳವಾಗಿ ಬಿಂಬಿಸುತ್ತದೆ. ಈ ಪಾತ್ರ ಪ್ರಭಾಸ್ ಪಾತ್ರಕ್ಕೆ ಸಮನಾಗಿದೆ. ನಾವು ಬಯಸಿದ ರೀತಿಯಲ್ಲಿ; ಈ ಪಾತ್ರವನ್ನು ಪ್ರಥ್ವಿರಾಜ್‌ ಮಾತ್ರ ಮಾಡಲು ಸಾಧ್ಯ. ಇದು ಹೊಸ ಅಲೆಯನ್ನು ಸೃಷ್ಟಿಸಲಿದೆ. ಈ ಹೊಸ ಅವತಾರದಲ್ಲಿ ಅಭಿಮಾನಿಗಳಿಗೆ ಅವರು ಇಷ್ಟವಾಗಲಿದ್ದಾರೆ.

ಸಲಾರ್ 28 ಸೆಪ್ಟೆಂಬರ್ 2023 ರಂದು ತೆಲುಗು ಮತ್ತು ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಗಳ ಡಬ್ಬಿಂಗ್ ಆವೃತ್ತಿಗಳಲ್ಲಿ ಥಿಯೇಟ್ರಿಕಲ್ ಬಿಡುಗಡೆಗೆ ನಿಗದಿಯಾಗಿದೆ. 50ರಷ್ಟು ಚಿತ್ರೀಕರಣ ಈಗಾಗಲೇ ಮುಗಿದಿದೆ. ಸಲಾರ್ ತಂಡವು ಇತ್ತೀಚೆಗೆ 10 ಕೋಟಿ ವೆಚ್ಚದಲ್ಲಿ ಸಮುದ್ರದ ಮಧ್ಯದಲ್ಲಿ 20 ನಿಮಿಷಗಳ ಚೇಸಿಂಗ್ ಸೀಕ್ವೆನ್ಸ್ ಅನ್ನು ಚಿತ್ರೀಕರಿಸುತ್ತಿದೆ. ಭಾರತದಲ್ಲಿ ಮೊದಲ ಬಾರಿಗೆ, ಡಾರ್ಕ್ ಸೆಂಟ್ರಿಕ್ ಥೀಮ್ (ಡಿಸಿಟಿ) ತಂತ್ರಜ್ಞಾನವನ್ನು ಚಿತ್ರದ ಚಿತ್ರೀಕರಣಕ್ಕೆ ಬಳಸಲಾಗುತ್ತಿದೆ, ಇದನ್ನು ಬಳಸುತ್ತಿರುವ ಮೊದಲ ಭಾರತೀಯ ಚಲನಚಿತ್ರವಾಗಿದೆ.

400 ಪ್ಲಸ್ ಕೋಟಿ ಬಜೆಟ್‌ನ ಬಹು ನಿರೀಕ್ಷಿತ ಚಿತ್ರಗಳಲ್ಲಿ ಸಲಾರ್ ಕೂಡ ಒಂದು. ಚಿತ್ರಕ್ಕೆ ಈಗಾಗಲೇ ಸಾಕಷ್ಟು ದೊಡ್ಡ ಭರವಸೆಯ ಗುರಿಯನ್ನು ಹಾಕಿಕೊಳ್ಳಲಾಗಿದೆ ಮತ್ತು ಇದು ಸಾಹಸದಿಂದ ತುಂಬಿದ ಮಾಸ್ ಆಕ್ಷನ್ ಚಿತ್ರವಾಗಲಿದೆ. ಇದು ಚಲನಚಿತ್ರದ ನಿರ್ಮಾಣದಲ್ಲಿ ಒಳಗೊಂಡಿರುವ ಎಲ್ಲಾ ದೊಡ್ಡ ವ್ಯಕ್ತಿಗಳ ಡೆಡ್ಲಿ ಕಾಂಬಿನೇಷನ್‌ ಸಹ ಕಾಣಿಸುತ್ತದೆ. ಬಾಹುಬಲಿ ನಾಯಕನ ಜತೆ ಕೆಜಿಎಫ್ ನಿರ್ದೇಶಕ, ನಿರ್ಮಾಪಕ ಮತ್ತು ತಂತ್ರಜ್ಞರ ಕ್ರಿಯಾತ್ಮಕ ಸಹಯೋಗವನ್ನು ಅಭಿಮಾನಿಗಳು ಖಂಡಿತವಾಗಿ ತಪ್ಪಿಸಿಕೊಳ್ಳಬಾರದು. ಖಂಡಿತವಾಗಿಯೂ ಇದು ಭಾರತೀಯ ಚಲನಚಿತ್ರೋದ್ಯಮಕ್ಕೆ ಹೊಸ ದಾಖಲೆಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ.

andolana

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

5 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

6 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

6 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

7 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

12 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

12 hours ago