ಕಳೆದ ವರ್ಷ ‘ಕರಟಕ ದಮನಕ’ ಚಿತ್ರದಲ್ಲಿ ಕಾಣಿಸಿ ಕೊಂಡು ಮರೆಯಾಗಿದ್ದ ಬಹುಭಾಷಾ ನಟಿ ಪ್ರಿಯಾ ಆನಂದ್, ಇದೀಗ ‘ಬಲರಾಮನ ದಿನಗಳು’ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಜೋಡಿಯಾಗಿದ್ದಾರೆ.ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ನಿರ್ಮಿಸು ತ್ತಿರುವ ಹಾಗೂ ‘ಆ ದಿನಗಳು’ ಖ್ಯಾತಿಯ ಕೆ. ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಚಿತ್ರ ‘ಬಲರಾಮನ ದಿನಗಳು’.
ಇದು ವಿನೋದ್ ಪ್ರಭಾಕರ್ ಅಭಿನಯದ ೨೫ನೇ ಚಿತ್ರವೂ ಹೌದು. ಈ ಚಿತ್ರಕ್ಕೆ ಇದೀಗ ಪ್ರಿಯಾ ಆನಂದ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಹೊಸ ವರ್ಷದ ಆರಂಭದ ದಿನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಾಯಕಿ ಪ್ರಿಯಾ ಆನಂದ್ ಅವರಿಗೆ ಚಿತ್ರತಂಡ ಸ್ವಾಗತ ಹೇಳಿದೆ.
‘ಬಲರಾಮನ ದಿನಗಳು’ ೧೯೮೦ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ಇತ್ತೀಚೆಗಷ್ಟೇ ವಿನೋದ್ ಪ್ರಭಾಕರ್ ಹುಟ್ಟುಹಬ್ಬಕ್ಕೆ ಅದರ ಮೊದಲ ನೋಟ ಬಿಡುಗಡೆಯಾಗಿತ್ತು. ದಕ್ಷಿಣ ಭಾರತದ ಜನಪ್ರಿಯ ಸಂಗೀತ ನಿರ್ದೇಶಕರಾದ ಸಂತೋಷ್ ನಾರಾಯಣನ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ. ಇದು ಅವರು ಸಂಗೀತ ಸಂಯೋಜಿಸುತ್ತಿರುವ ೫೧ನೇ ಚಿತ್ರ ಹಾಗೂ ಕನ್ನಡದ ಮೊದಲ ಚಿತ್ರ. ಈಗಾಗಲೇ ಚಿತ್ರಕ್ಕೆ ಎರಡು ಹಂತಗಳ ಚಿತ್ರೀಕರಣ ಮುಕ್ತಾಯವಾಗಿದ್ದು, ಜನವರಿ ೧೫ರಿಂದ ಮೂರನೇ ಹಂತದ ಚಿತ್ರೀಕರಣ ಆರಂಭವಾಗಲಿದೆ.
ಮೈಸೂರಿನ ಶಾರದಾದೇವಿ ನಗರದ ಸರ್ಕಲ್ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…
ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನೀತಿ ಇನ್ನೊಮ್ಮೆ ಬಯಲಾಗಿದೆ. ನೇಮಕಾತಿ ಮತ್ತು ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾಗಿ ಭರವಸೆ…
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಶ್ರೀಕಂಠೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ…
ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…
೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್ಡಿಎ ಮೈತ್ರಿಕೂಟದ ಬಿಜೆಪಿ ಮತ್ತು…
ಅನಿಲ್ ಅಂತರಸಂತೆ ಹಳ್ಳಿ ಸೊಗಡಿನ ದೇಸಿ ಕಂಠಸಿರಿಯಲ್ಲಿ ಇವರ ಜಾನ ಪದ ಹಾಡುಗಳನ್ನು ಕೇಳುವುದೇ ಬಲು ಹಿತಕರ. ಮೂಲತಃ ಎಚ್.ಡಿ.ಕೋಟೆ…