ಚಿತ್ರ ಮಂಜರಿ

‘ಬಲರಾಮನ ದಿನಗಳು’ ಚಿತ್ರದಲ್ಲಿ ಪ್ರಿಯಾ ಆನಂದ್

ಕಳೆದ ವರ್ಷ ‘ಕರಟಕ ದಮನಕ’ ಚಿತ್ರದಲ್ಲಿ ಕಾಣಿಸಿ ಕೊಂಡು ಮರೆಯಾಗಿದ್ದ ಬಹುಭಾಷಾ ನಟಿ ಪ್ರಿಯಾ ಆನಂದ್, ಇದೀಗ ‘ಬಲರಾಮನ ದಿನಗಳು’ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಜೋಡಿಯಾಗಿದ್ದಾರೆ.ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ನಿರ್ಮಿಸು ತ್ತಿರುವ ಹಾಗೂ ‘ಆ ದಿನಗಳು’ ಖ್ಯಾತಿಯ ಕೆ. ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಚಿತ್ರ ‘ಬಲರಾಮನ ದಿನಗಳು’.

ಇದು ವಿನೋದ್ ಪ್ರಭಾಕರ್ ಅಭಿನಯದ ೨೫ನೇ ಚಿತ್ರವೂ ಹೌದು. ಈ ಚಿತ್ರಕ್ಕೆ ಇದೀಗ ಪ್ರಿಯಾ ಆನಂದ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಹೊಸ ವರ್ಷದ ಆರಂಭದ ದಿನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಾಯಕಿ ಪ್ರಿಯಾ ಆನಂದ್ ಅವರಿಗೆ ಚಿತ್ರತಂಡ ಸ್ವಾಗತ ಹೇಳಿದೆ.

‘ಬಲರಾಮನ ದಿನಗಳು’ ೧೯೮೦ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ಇತ್ತೀಚೆಗಷ್ಟೇ ವಿನೋದ್ ಪ್ರಭಾಕರ್ ಹುಟ್ಟುಹಬ್ಬಕ್ಕೆ ಅದರ ಮೊದಲ ನೋಟ ಬಿಡುಗಡೆಯಾಗಿತ್ತು. ದಕ್ಷಿಣ ಭಾರತದ ಜನಪ್ರಿಯ ಸಂಗೀತ ನಿರ್ದೇಶಕರಾದ ಸಂತೋಷ್ ನಾರಾಯಣನ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ. ಇದು ಅವರು ಸಂಗೀತ ಸಂಯೋಜಿಸುತ್ತಿರುವ ೫೧ನೇ ಚಿತ್ರ ಹಾಗೂ ಕನ್ನಡದ ಮೊದಲ ಚಿತ್ರ. ಈಗಾಗಲೇ ಚಿತ್ರಕ್ಕೆ ಎರಡು ಹಂತಗಳ ಚಿತ್ರೀಕರಣ ಮುಕ್ತಾಯವಾಗಿದ್ದು, ಜನವರಿ ೧೫ರಿಂದ ಮೂರನೇ ಹಂತದ ಚಿತ್ರೀಕರಣ ಆರಂಭವಾಗಲಿದೆ.

ಆಂದೋಲನ ಡೆಸ್ಕ್

Recent Posts

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

51 mins ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

3 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

4 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

5 hours ago

ಸಿಎಂ ಡಿಕೆಶಿ ಹಾಗೂ ಸಚಿವ ಲಕ್ಷ್ಮಣ್ ಸವದಿ ಸಹಕಾರದಿಂದ ಅಧ್ಯಕ್ಷನಾಗಿದ್ದೇನೆ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

5 hours ago

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…

11 hours ago