ಚಿತ್ರ ಮಂಜರಿ

‘ಬಲರಾಮನ ದಿನಗಳು’ ಚಿತ್ರದಲ್ಲಿ ಪ್ರಿಯಾ ಆನಂದ್

ಕಳೆದ ವರ್ಷ ‘ಕರಟಕ ದಮನಕ’ ಚಿತ್ರದಲ್ಲಿ ಕಾಣಿಸಿ ಕೊಂಡು ಮರೆಯಾಗಿದ್ದ ಬಹುಭಾಷಾ ನಟಿ ಪ್ರಿಯಾ ಆನಂದ್, ಇದೀಗ ‘ಬಲರಾಮನ ದಿನಗಳು’ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಜೋಡಿಯಾಗಿದ್ದಾರೆ.ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ನಿರ್ಮಿಸು ತ್ತಿರುವ ಹಾಗೂ ‘ಆ ದಿನಗಳು’ ಖ್ಯಾತಿಯ ಕೆ. ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಚಿತ್ರ ‘ಬಲರಾಮನ ದಿನಗಳು’.

ಇದು ವಿನೋದ್ ಪ್ರಭಾಕರ್ ಅಭಿನಯದ ೨೫ನೇ ಚಿತ್ರವೂ ಹೌದು. ಈ ಚಿತ್ರಕ್ಕೆ ಇದೀಗ ಪ್ರಿಯಾ ಆನಂದ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಹೊಸ ವರ್ಷದ ಆರಂಭದ ದಿನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಾಯಕಿ ಪ್ರಿಯಾ ಆನಂದ್ ಅವರಿಗೆ ಚಿತ್ರತಂಡ ಸ್ವಾಗತ ಹೇಳಿದೆ.

‘ಬಲರಾಮನ ದಿನಗಳು’ ೧೯೮೦ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ಇತ್ತೀಚೆಗಷ್ಟೇ ವಿನೋದ್ ಪ್ರಭಾಕರ್ ಹುಟ್ಟುಹಬ್ಬಕ್ಕೆ ಅದರ ಮೊದಲ ನೋಟ ಬಿಡುಗಡೆಯಾಗಿತ್ತು. ದಕ್ಷಿಣ ಭಾರತದ ಜನಪ್ರಿಯ ಸಂಗೀತ ನಿರ್ದೇಶಕರಾದ ಸಂತೋಷ್ ನಾರಾಯಣನ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ. ಇದು ಅವರು ಸಂಗೀತ ಸಂಯೋಜಿಸುತ್ತಿರುವ ೫೧ನೇ ಚಿತ್ರ ಹಾಗೂ ಕನ್ನಡದ ಮೊದಲ ಚಿತ್ರ. ಈಗಾಗಲೇ ಚಿತ್ರಕ್ಕೆ ಎರಡು ಹಂತಗಳ ಚಿತ್ರೀಕರಣ ಮುಕ್ತಾಯವಾಗಿದ್ದು, ಜನವರಿ ೧೫ರಿಂದ ಮೂರನೇ ಹಂತದ ಚಿತ್ರೀಕರಣ ಆರಂಭವಾಗಲಿದೆ.

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

12 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

13 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

13 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

15 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

19 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

19 hours ago