ಚಿತ್ರ ಮಂಜರಿ

ಮುಂಬೈನಲ್ಲಿದ್ದ ಪ್ರಿಯಾಂಕಾ ಚೋಪ್ರಾ ಬಂಗಲೆ ಸೇಲ್

ನಟಿ ಪ್ರಿಯಾಂಕಾ ಚೋಪ್ರಾ ಪಾಪ್ ಸಿಂಗರ್ ನಿಕ್ ಜೋನಸ್ ಜೊತೆ ಮದುವೆಯಾದ ಬಳಿಕ ಭಾರತದಲ್ಲಿರುವ ತಮ್ಮ ಆಸ್ತಿಗಳನ್ನು ಒಂದೊಂದಾಗಿಯೇ ಮಾರಾಟ ಮಾಡುತ್ತಾ ಬರುತ್ತಿದ್ದಾರೆ. ಇದೀಗ ಮುಂಬೈನಲ್ಲಿದ್ದ ಅವರ ಐಷಾರಾಮಿ ಬಂಗಲೆಯನ್ನು ಕೂಡ ಸೇಲ್ ಮಾಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ತಮ್ಮ ಆಸ್ತಿಗಳನ್ನು ಹೀಗೆ ಮಾರಾಟ ಮಾಡುತ್ತಿರುವುದು ಪ್ರಿಯಾಂಕಾ ಭಾರತಕ್ಕೆ ಗುಡ್ ಬೈ ಹೇಳಲಿದ್ದಾರೆ ಎಂಬ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಸದ್ಯ ಬಾಲಿವುಡ್ ನಿಂದ ದೂರ ಉಳಿದಿರುವ ನಟಿ, ಹಾಲಿವುಡ್ ನಲ್ಲಿ ಭವಿಷ್ಯ ಹುಡುಕಿಕೊಳ್ಳಲು ಹರಸಾಹಸ ಮಾಡುತ್ತಿದ್ದಾರೆ. ಸೀಟಾಡೆಲ್ ವೆಬ್ ಸೀರೀಸ್ ಮೇಲೆ ಬಾರಿ ನಿರೀಕ್ಷೆ ಇಟ್ಟುಕೊಂಡಿದ್ದ ಪ್ರಿಯಾಂಕಾಗೆ ನಿರೀಕ್ಷಿತ ಪ್ರಮಾಣದಲ್ಲಿ ಯಶಸ್ಸು ಸಿಗಲಿಲ್ಲ. ಸೀಟಾಡೆಲ್ ವೆಬ್ ಸೀರೀಸ್ ಜನರ ಮೆಚ್ಚುಗೆ ಗಳಿಸುವಲ್ಲಿ ವಿಫಲವಾಯಿತು.

ಪಾಪ್ ಸಿಂಗರ್ ನಿಕ್ ಜೋನಸ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಳಿಕ ಪ್ರಿಯಾಂಕಾ ಚೋಪ್ರಾ ಬಾಡಿಗೆ ತಾಯ್ತನದ ಮೂಲಕ ಮಾಲ್ತಿ ಮೇರಿ ಎಂಬ ಮಗಳನ್ನು ಪಡೆದಿದ್ದಾರೆ.

2000 ರಲ್ಲಿ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದ ಪ್ರಿಯಾಂಕ ಚೋಪ್ರಾ 2002 ರಲ್ಲಿ ತಮಿಳು ಚಿತ್ರರಂಗದ ತಮಿಳನ್ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದರು. ಬಳಿಕ 2003 ರಲ್ಲಿ ಬಾಲಿವುಡ್ ನಲ್ಲಿ ಅವಕಾಶ ಗಿಟ್ಟಿಸಿಕೊಂಡು ಹೀರೋ ಲವ್ ಸ್ಟೋರಿ ಎಂಬ ಸಿನಿಮಾದಲ್ಲಿ ನಟಿಸಿದರು.

ಸದ್ಯ ಅಮೆರಿಕಾದಲ್ಲಿ ಪತಿ ನಿಕ್ ಜೋನಸ್ ಜೊತೆ ಸೆಟಲ್ ಆಗಿರುವ ಪ್ರಿಯಾಂಕಾ ಚೋಪ್ರಾ ಮಗಳು ಹಾಗೂ ಪತಿಯೊಟ್ಟಿಗೆ ಜೀವನವನ್ನುಆನಂದಿಸುತ್ತಾ, ಹಾಲಿವುಡ್ ನಲ್ಲಿ ಬ್ಯುಸಿ ಆಗಿದ್ದಾರೆ.

ಪ್ರಿಯಾಂಕ ಚೋಪ್ರಾ ಅಮೇರಿಕಾದಲ್ಲಿ ಹೋಟೆಲ್ ಉದ್ಯಮವನ್ನು ಕೂಡ ಶುರುಮಾಡಿದ್ದರು, ಆದರೆ ಪಾರ್ಟ್ನರ್ ಜೊತೆ ಹೊಂದಾಣಿಕೆ ಆಗದಿದ್ದರಿಂದ ಉದ್ಯಮದಿಂದ ಹೊರ ಬಂದಿದ್ದಾರೆ.

lokesh

Recent Posts

ಮಹಾತ್ಮ ಗಾಂಧಿ ಪುಣ್ಯತಿಥಿ | ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ನಮನ

ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…

21 mins ago

ಡ್ರಗ್ಸ್‌ ಗುಮಾನಿ | ಎನ್‌ಸಿಬಿ ಅಧಿಕಾರಿಗಳ ದಾಳಿ ಫಾಲೋಅಪ್‌ ಅಷ್ಟೇ : ಗೃಹ ಸಚಿವ

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್‌ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್‌.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್‌…

55 mins ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

5 hours ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

5 hours ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

5 hours ago

ಬಾಪೂಜಿ ನೆನಪಲ್ಲಿ; ಖಾದಿ ಕೇಂದ್ರದ ಅಂಗಳದಲ್ಲಿ…

ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ  ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…

5 hours ago