ಚಿತ್ರ ಮಂಜರಿ

ಮುಂಬೈನಲ್ಲಿದ್ದ ಪ್ರಿಯಾಂಕಾ ಚೋಪ್ರಾ ಬಂಗಲೆ ಸೇಲ್

ನಟಿ ಪ್ರಿಯಾಂಕಾ ಚೋಪ್ರಾ ಪಾಪ್ ಸಿಂಗರ್ ನಿಕ್ ಜೋನಸ್ ಜೊತೆ ಮದುವೆಯಾದ ಬಳಿಕ ಭಾರತದಲ್ಲಿರುವ ತಮ್ಮ ಆಸ್ತಿಗಳನ್ನು ಒಂದೊಂದಾಗಿಯೇ ಮಾರಾಟ ಮಾಡುತ್ತಾ ಬರುತ್ತಿದ್ದಾರೆ. ಇದೀಗ ಮುಂಬೈನಲ್ಲಿದ್ದ ಅವರ ಐಷಾರಾಮಿ ಬಂಗಲೆಯನ್ನು ಕೂಡ ಸೇಲ್ ಮಾಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ತಮ್ಮ ಆಸ್ತಿಗಳನ್ನು ಹೀಗೆ ಮಾರಾಟ ಮಾಡುತ್ತಿರುವುದು ಪ್ರಿಯಾಂಕಾ ಭಾರತಕ್ಕೆ ಗುಡ್ ಬೈ ಹೇಳಲಿದ್ದಾರೆ ಎಂಬ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಸದ್ಯ ಬಾಲಿವುಡ್ ನಿಂದ ದೂರ ಉಳಿದಿರುವ ನಟಿ, ಹಾಲಿವುಡ್ ನಲ್ಲಿ ಭವಿಷ್ಯ ಹುಡುಕಿಕೊಳ್ಳಲು ಹರಸಾಹಸ ಮಾಡುತ್ತಿದ್ದಾರೆ. ಸೀಟಾಡೆಲ್ ವೆಬ್ ಸೀರೀಸ್ ಮೇಲೆ ಬಾರಿ ನಿರೀಕ್ಷೆ ಇಟ್ಟುಕೊಂಡಿದ್ದ ಪ್ರಿಯಾಂಕಾಗೆ ನಿರೀಕ್ಷಿತ ಪ್ರಮಾಣದಲ್ಲಿ ಯಶಸ್ಸು ಸಿಗಲಿಲ್ಲ. ಸೀಟಾಡೆಲ್ ವೆಬ್ ಸೀರೀಸ್ ಜನರ ಮೆಚ್ಚುಗೆ ಗಳಿಸುವಲ್ಲಿ ವಿಫಲವಾಯಿತು.

ಪಾಪ್ ಸಿಂಗರ್ ನಿಕ್ ಜೋನಸ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಳಿಕ ಪ್ರಿಯಾಂಕಾ ಚೋಪ್ರಾ ಬಾಡಿಗೆ ತಾಯ್ತನದ ಮೂಲಕ ಮಾಲ್ತಿ ಮೇರಿ ಎಂಬ ಮಗಳನ್ನು ಪಡೆದಿದ್ದಾರೆ.

2000 ರಲ್ಲಿ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದ ಪ್ರಿಯಾಂಕ ಚೋಪ್ರಾ 2002 ರಲ್ಲಿ ತಮಿಳು ಚಿತ್ರರಂಗದ ತಮಿಳನ್ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದರು. ಬಳಿಕ 2003 ರಲ್ಲಿ ಬಾಲಿವುಡ್ ನಲ್ಲಿ ಅವಕಾಶ ಗಿಟ್ಟಿಸಿಕೊಂಡು ಹೀರೋ ಲವ್ ಸ್ಟೋರಿ ಎಂಬ ಸಿನಿಮಾದಲ್ಲಿ ನಟಿಸಿದರು.

ಸದ್ಯ ಅಮೆರಿಕಾದಲ್ಲಿ ಪತಿ ನಿಕ್ ಜೋನಸ್ ಜೊತೆ ಸೆಟಲ್ ಆಗಿರುವ ಪ್ರಿಯಾಂಕಾ ಚೋಪ್ರಾ ಮಗಳು ಹಾಗೂ ಪತಿಯೊಟ್ಟಿಗೆ ಜೀವನವನ್ನುಆನಂದಿಸುತ್ತಾ, ಹಾಲಿವುಡ್ ನಲ್ಲಿ ಬ್ಯುಸಿ ಆಗಿದ್ದಾರೆ.

ಪ್ರಿಯಾಂಕ ಚೋಪ್ರಾ ಅಮೇರಿಕಾದಲ್ಲಿ ಹೋಟೆಲ್ ಉದ್ಯಮವನ್ನು ಕೂಡ ಶುರುಮಾಡಿದ್ದರು, ಆದರೆ ಪಾರ್ಟ್ನರ್ ಜೊತೆ ಹೊಂದಾಣಿಕೆ ಆಗದಿದ್ದರಿಂದ ಉದ್ಯಮದಿಂದ ಹೊರ ಬಂದಿದ್ದಾರೆ.

lokesh

Recent Posts

ಎಸ್‌ಐಆರ್‌ ಕಾನೂನುಬದ್ಧವಾಗಿದೆ : ಸುಪ್ರಿಂ ಮಹತ್ವದ ಆದೇಶ

ಹೊಸದಿಲ್ಲಿ : ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿರುದ್ಧ ಎದ್ದಿದ್ದ ರಾಜಕೀಯ…

27 mins ago

ನಾಳೆ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…

4 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್:‌ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್‌ ರಿಪೋರ್ಟ್‌ನಲ್ಲಿ ನೆಗೆಟಿವ್‌ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್‌…

4 hours ago

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ?

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…

5 hours ago

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

7 hours ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

7 hours ago