ಚಿತ್ರ ಮಂಜರಿ

ಮುಂಬೈನಲ್ಲಿದ್ದ ಪ್ರಿಯಾಂಕಾ ಚೋಪ್ರಾ ಬಂಗಲೆ ಸೇಲ್

ನಟಿ ಪ್ರಿಯಾಂಕಾ ಚೋಪ್ರಾ ಪಾಪ್ ಸಿಂಗರ್ ನಿಕ್ ಜೋನಸ್ ಜೊತೆ ಮದುವೆಯಾದ ಬಳಿಕ ಭಾರತದಲ್ಲಿರುವ ತಮ್ಮ ಆಸ್ತಿಗಳನ್ನು ಒಂದೊಂದಾಗಿಯೇ ಮಾರಾಟ ಮಾಡುತ್ತಾ ಬರುತ್ತಿದ್ದಾರೆ. ಇದೀಗ ಮುಂಬೈನಲ್ಲಿದ್ದ ಅವರ ಐಷಾರಾಮಿ ಬಂಗಲೆಯನ್ನು ಕೂಡ ಸೇಲ್ ಮಾಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ತಮ್ಮ ಆಸ್ತಿಗಳನ್ನು ಹೀಗೆ ಮಾರಾಟ ಮಾಡುತ್ತಿರುವುದು ಪ್ರಿಯಾಂಕಾ ಭಾರತಕ್ಕೆ ಗುಡ್ ಬೈ ಹೇಳಲಿದ್ದಾರೆ ಎಂಬ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಸದ್ಯ ಬಾಲಿವುಡ್ ನಿಂದ ದೂರ ಉಳಿದಿರುವ ನಟಿ, ಹಾಲಿವುಡ್ ನಲ್ಲಿ ಭವಿಷ್ಯ ಹುಡುಕಿಕೊಳ್ಳಲು ಹರಸಾಹಸ ಮಾಡುತ್ತಿದ್ದಾರೆ. ಸೀಟಾಡೆಲ್ ವೆಬ್ ಸೀರೀಸ್ ಮೇಲೆ ಬಾರಿ ನಿರೀಕ್ಷೆ ಇಟ್ಟುಕೊಂಡಿದ್ದ ಪ್ರಿಯಾಂಕಾಗೆ ನಿರೀಕ್ಷಿತ ಪ್ರಮಾಣದಲ್ಲಿ ಯಶಸ್ಸು ಸಿಗಲಿಲ್ಲ. ಸೀಟಾಡೆಲ್ ವೆಬ್ ಸೀರೀಸ್ ಜನರ ಮೆಚ್ಚುಗೆ ಗಳಿಸುವಲ್ಲಿ ವಿಫಲವಾಯಿತು.

ಪಾಪ್ ಸಿಂಗರ್ ನಿಕ್ ಜೋನಸ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಳಿಕ ಪ್ರಿಯಾಂಕಾ ಚೋಪ್ರಾ ಬಾಡಿಗೆ ತಾಯ್ತನದ ಮೂಲಕ ಮಾಲ್ತಿ ಮೇರಿ ಎಂಬ ಮಗಳನ್ನು ಪಡೆದಿದ್ದಾರೆ.

2000 ರಲ್ಲಿ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದ ಪ್ರಿಯಾಂಕ ಚೋಪ್ರಾ 2002 ರಲ್ಲಿ ತಮಿಳು ಚಿತ್ರರಂಗದ ತಮಿಳನ್ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದರು. ಬಳಿಕ 2003 ರಲ್ಲಿ ಬಾಲಿವುಡ್ ನಲ್ಲಿ ಅವಕಾಶ ಗಿಟ್ಟಿಸಿಕೊಂಡು ಹೀರೋ ಲವ್ ಸ್ಟೋರಿ ಎಂಬ ಸಿನಿಮಾದಲ್ಲಿ ನಟಿಸಿದರು.

ಸದ್ಯ ಅಮೆರಿಕಾದಲ್ಲಿ ಪತಿ ನಿಕ್ ಜೋನಸ್ ಜೊತೆ ಸೆಟಲ್ ಆಗಿರುವ ಪ್ರಿಯಾಂಕಾ ಚೋಪ್ರಾ ಮಗಳು ಹಾಗೂ ಪತಿಯೊಟ್ಟಿಗೆ ಜೀವನವನ್ನುಆನಂದಿಸುತ್ತಾ, ಹಾಲಿವುಡ್ ನಲ್ಲಿ ಬ್ಯುಸಿ ಆಗಿದ್ದಾರೆ.

ಪ್ರಿಯಾಂಕ ಚೋಪ್ರಾ ಅಮೇರಿಕಾದಲ್ಲಿ ಹೋಟೆಲ್ ಉದ್ಯಮವನ್ನು ಕೂಡ ಶುರುಮಾಡಿದ್ದರು, ಆದರೆ ಪಾರ್ಟ್ನರ್ ಜೊತೆ ಹೊಂದಾಣಿಕೆ ಆಗದಿದ್ದರಿಂದ ಉದ್ಯಮದಿಂದ ಹೊರ ಬಂದಿದ್ದಾರೆ.

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago