ಚಿತ್ರ ಮಂಜರಿ

ಪ್ರಾಜೆಕ್ಟ್ ಕೆ ಫಸ್ಟ್ ಲುಕ್ ರಿಲೀಸ್‌ : ಪ್ರಭಾಸ್‌ ಫ್ಯಾನ್ಸ್‌ ಗೆ ಮತ್ತೆ ನಿರಾಸೆ

ದುಬಾರಿ ಬಜೆಟ್ ನಲ್ಲಿ ರೆಡಿ ಆಗುತ್ತಿರುವ ಪ್ರಾಜೆಕ್ಟ್ ಕೆ ಸಿನಿಮಾದ ಪ್ರಭಾಸ್ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಸಿನಿಮಾ ತಂಡ ಬಿಲ್ಡ್ ಅಪ್ ಕೊಟ್ಟಂತೆ, ಅಚ್ಚರಿಯೊಂದು ಅಭಿಮಾನಿಗಳಿಗೆ ಕಾದಿದೆ ಎಂದೇ ಹೇಳಲಾಗಿತ್ತು. ಆದರೆ, ಯಾವುದೇ ಅಚ್ಚರಿ ಮೂಡಿಸದೇ ನಿರಾಸೆ ಮಾಡಿದೆ ಚಿತ್ರತಂಡ. ಪ್ರಭಾಸ್ ಅವರ ಮಾಮೂಲು ಲುಕ್ ಇರುವಂತಹ ಫಸ್ಟ್ ಲುಕ್ ಅದಾಗಿದೆ.

ಈ ಸಿನಿಮಾದ ಶೂಟಿಂಗ್ ಈಗಾಗಲೇ ಶುರುವಾಗಿದ್ದು, ಪ್ರಭಾಸ್ ಜೊತೆ ಕಮಲ್ ಹಾಸನ್, ರಾಣಾ ದಗ್ಗುಬಾಟಿ ಈಗಾಗಲೇ ಅಮೆರಿಕಾಗೆ ಪ್ರವಾಸ ಬೆಳೆಸಿದ್ದಾರೆ. ಸುಮಾರು 600 ಕೋಟಿಗೂ ಅಧಿಕ ಬಜೆಟ್ ನಲ್ಲಿ ಈ ಸಿನಿಮಾ ತಯಾರಾಗಲಿದ್ದು, ಅನೇಕ ದಿಗ್ಗಜ ಕಲಾವಿದರು ಈ ಚಿತ್ರಕ್ಕಾಗಿ ಒಂದಾಗಿದ್ದಾರೆ. ಇಷ್ಟೊಂದು ನಿರೀಕ್ಷೆ ಇಟ್ಟುಕೊಂಡಿರುವ ಸಿನಿಮಾದ ಫಸ್ಟ್ ಲುಕ್ ಬೇರೆ ಹಂತದಲ್ಲಿ ಇರಬೇಕಿತ್ತು ಎಂದು ಅಭಿಮಾನಿಗಳು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ಪಠಾಣ್ ಚಿತ್ರದ ಸೂಪರ್ ಸಕ್ಸಸ್‌ನಲ್ಲಿರುವ ದೀಪಿಕಾ ಪಡುಕೋಣೆ ಈಗ ಪ್ರಭಾಸ್ ನಟನೆಯ ಪ್ರಾಜೆಕ್ಟ್ ಕೆ ಸಿನಿಮಾಗೆ ಭರ್ಜರಿ ಸಂಭಾವನೆ ಪಡೆದಿದ್ದಾರೆ. ಪಠಾಣ್ ಸಿನಿಮಾ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಹೊಸ ದಾಖಲೆ ಬರೆದಿದೆ. ಹಾಗಾಗಿ ಪ್ರಾಜೆಕ್ಟ್ ಕೆ ಚಿತ್ರಕ್ಕೆ ದುಬಾರಿ ಸಂಭಾವನೆಯನ್ನೇ ನಟಿ ಪಡೆದಿದ್ದಾರೆ.

ಈ ಸಿನಿಮಾಗಾಗಿ ಅವರು ದೊಡ್ಡ ಕಾಲ್‌ಶೀಟ್ ನೀಡಿದ್ದಾರೆ. ಹಲವು ದಿನಗಳನ್ನ ಈ ಚಿತ್ರಕ್ಕಾಗಿ ಮುಡಿಪಿಟ್ಟಿದ್ದಾರೆ. ನಾಗ್ ಅಶ್ವೀನ್ ನಿರ್ದೇಶನದ ಈ ಚಿತ್ರಕ್ಕೆ 10 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಕೆಲ ಸ್ಟಾರ್ ಹೀರೋಗಳು ಕೂಡ ಇಷ್ಟು ಸಂಭಾವನೆ ಪಡೆಯಲ್ಲ ಅನ್ನೋದು ಗಮಿನಿಸಬೇಕಾದ ವಿಷಯ. ಪ್ರಭಾಸ್ ಜೊತೆಗಿನ ಈ ಚಿತ್ರ ಮುಂದಿನ ವರ್ಷ ತೆರೆಗೆ ಅಪ್ಪಳಿಸಲಿದೆ.

lokesh

Recent Posts

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

26 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

1 hour ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

3 hours ago