ಚಿತ್ರ ಮಂಜರಿ

ಪ್ರಾಜೆಕ್ಟ್ ಕೆ ಫಸ್ಟ್ ಲುಕ್ ರಿಲೀಸ್‌ : ಪ್ರಭಾಸ್‌ ಫ್ಯಾನ್ಸ್‌ ಗೆ ಮತ್ತೆ ನಿರಾಸೆ

ದುಬಾರಿ ಬಜೆಟ್ ನಲ್ಲಿ ರೆಡಿ ಆಗುತ್ತಿರುವ ಪ್ರಾಜೆಕ್ಟ್ ಕೆ ಸಿನಿಮಾದ ಪ್ರಭಾಸ್ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಸಿನಿಮಾ ತಂಡ ಬಿಲ್ಡ್ ಅಪ್ ಕೊಟ್ಟಂತೆ, ಅಚ್ಚರಿಯೊಂದು ಅಭಿಮಾನಿಗಳಿಗೆ ಕಾದಿದೆ ಎಂದೇ ಹೇಳಲಾಗಿತ್ತು. ಆದರೆ, ಯಾವುದೇ ಅಚ್ಚರಿ ಮೂಡಿಸದೇ ನಿರಾಸೆ ಮಾಡಿದೆ ಚಿತ್ರತಂಡ. ಪ್ರಭಾಸ್ ಅವರ ಮಾಮೂಲು ಲುಕ್ ಇರುವಂತಹ ಫಸ್ಟ್ ಲುಕ್ ಅದಾಗಿದೆ.

ಈ ಸಿನಿಮಾದ ಶೂಟಿಂಗ್ ಈಗಾಗಲೇ ಶುರುವಾಗಿದ್ದು, ಪ್ರಭಾಸ್ ಜೊತೆ ಕಮಲ್ ಹಾಸನ್, ರಾಣಾ ದಗ್ಗುಬಾಟಿ ಈಗಾಗಲೇ ಅಮೆರಿಕಾಗೆ ಪ್ರವಾಸ ಬೆಳೆಸಿದ್ದಾರೆ. ಸುಮಾರು 600 ಕೋಟಿಗೂ ಅಧಿಕ ಬಜೆಟ್ ನಲ್ಲಿ ಈ ಸಿನಿಮಾ ತಯಾರಾಗಲಿದ್ದು, ಅನೇಕ ದಿಗ್ಗಜ ಕಲಾವಿದರು ಈ ಚಿತ್ರಕ್ಕಾಗಿ ಒಂದಾಗಿದ್ದಾರೆ. ಇಷ್ಟೊಂದು ನಿರೀಕ್ಷೆ ಇಟ್ಟುಕೊಂಡಿರುವ ಸಿನಿಮಾದ ಫಸ್ಟ್ ಲುಕ್ ಬೇರೆ ಹಂತದಲ್ಲಿ ಇರಬೇಕಿತ್ತು ಎಂದು ಅಭಿಮಾನಿಗಳು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ಪಠಾಣ್ ಚಿತ್ರದ ಸೂಪರ್ ಸಕ್ಸಸ್‌ನಲ್ಲಿರುವ ದೀಪಿಕಾ ಪಡುಕೋಣೆ ಈಗ ಪ್ರಭಾಸ್ ನಟನೆಯ ಪ್ರಾಜೆಕ್ಟ್ ಕೆ ಸಿನಿಮಾಗೆ ಭರ್ಜರಿ ಸಂಭಾವನೆ ಪಡೆದಿದ್ದಾರೆ. ಪಠಾಣ್ ಸಿನಿಮಾ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಹೊಸ ದಾಖಲೆ ಬರೆದಿದೆ. ಹಾಗಾಗಿ ಪ್ರಾಜೆಕ್ಟ್ ಕೆ ಚಿತ್ರಕ್ಕೆ ದುಬಾರಿ ಸಂಭಾವನೆಯನ್ನೇ ನಟಿ ಪಡೆದಿದ್ದಾರೆ.

ಈ ಸಿನಿಮಾಗಾಗಿ ಅವರು ದೊಡ್ಡ ಕಾಲ್‌ಶೀಟ್ ನೀಡಿದ್ದಾರೆ. ಹಲವು ದಿನಗಳನ್ನ ಈ ಚಿತ್ರಕ್ಕಾಗಿ ಮುಡಿಪಿಟ್ಟಿದ್ದಾರೆ. ನಾಗ್ ಅಶ್ವೀನ್ ನಿರ್ದೇಶನದ ಈ ಚಿತ್ರಕ್ಕೆ 10 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಕೆಲ ಸ್ಟಾರ್ ಹೀರೋಗಳು ಕೂಡ ಇಷ್ಟು ಸಂಭಾವನೆ ಪಡೆಯಲ್ಲ ಅನ್ನೋದು ಗಮಿನಿಸಬೇಕಾದ ವಿಷಯ. ಪ್ರಭಾಸ್ ಜೊತೆಗಿನ ಈ ಚಿತ್ರ ಮುಂದಿನ ವರ್ಷ ತೆರೆಗೆ ಅಪ್ಪಳಿಸಲಿದೆ.

lokesh

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

13 mins ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

4 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

5 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

5 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

5 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

6 hours ago