ಚಿತ್ರ ಮಂಜರಿ

ಪ್ರಾಜೆಕ್ಟ್ ಕೆ ಫಸ್ಟ್ ಲುಕ್ ರಿಲೀಸ್‌ : ಪ್ರಭಾಸ್‌ ಫ್ಯಾನ್ಸ್‌ ಗೆ ಮತ್ತೆ ನಿರಾಸೆ

ದುಬಾರಿ ಬಜೆಟ್ ನಲ್ಲಿ ರೆಡಿ ಆಗುತ್ತಿರುವ ಪ್ರಾಜೆಕ್ಟ್ ಕೆ ಸಿನಿಮಾದ ಪ್ರಭಾಸ್ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಸಿನಿಮಾ ತಂಡ ಬಿಲ್ಡ್ ಅಪ್ ಕೊಟ್ಟಂತೆ, ಅಚ್ಚರಿಯೊಂದು ಅಭಿಮಾನಿಗಳಿಗೆ ಕಾದಿದೆ ಎಂದೇ ಹೇಳಲಾಗಿತ್ತು. ಆದರೆ, ಯಾವುದೇ ಅಚ್ಚರಿ ಮೂಡಿಸದೇ ನಿರಾಸೆ ಮಾಡಿದೆ ಚಿತ್ರತಂಡ. ಪ್ರಭಾಸ್ ಅವರ ಮಾಮೂಲು ಲುಕ್ ಇರುವಂತಹ ಫಸ್ಟ್ ಲುಕ್ ಅದಾಗಿದೆ.

ಈ ಸಿನಿಮಾದ ಶೂಟಿಂಗ್ ಈಗಾಗಲೇ ಶುರುವಾಗಿದ್ದು, ಪ್ರಭಾಸ್ ಜೊತೆ ಕಮಲ್ ಹಾಸನ್, ರಾಣಾ ದಗ್ಗುಬಾಟಿ ಈಗಾಗಲೇ ಅಮೆರಿಕಾಗೆ ಪ್ರವಾಸ ಬೆಳೆಸಿದ್ದಾರೆ. ಸುಮಾರು 600 ಕೋಟಿಗೂ ಅಧಿಕ ಬಜೆಟ್ ನಲ್ಲಿ ಈ ಸಿನಿಮಾ ತಯಾರಾಗಲಿದ್ದು, ಅನೇಕ ದಿಗ್ಗಜ ಕಲಾವಿದರು ಈ ಚಿತ್ರಕ್ಕಾಗಿ ಒಂದಾಗಿದ್ದಾರೆ. ಇಷ್ಟೊಂದು ನಿರೀಕ್ಷೆ ಇಟ್ಟುಕೊಂಡಿರುವ ಸಿನಿಮಾದ ಫಸ್ಟ್ ಲುಕ್ ಬೇರೆ ಹಂತದಲ್ಲಿ ಇರಬೇಕಿತ್ತು ಎಂದು ಅಭಿಮಾನಿಗಳು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ಪಠಾಣ್ ಚಿತ್ರದ ಸೂಪರ್ ಸಕ್ಸಸ್‌ನಲ್ಲಿರುವ ದೀಪಿಕಾ ಪಡುಕೋಣೆ ಈಗ ಪ್ರಭಾಸ್ ನಟನೆಯ ಪ್ರಾಜೆಕ್ಟ್ ಕೆ ಸಿನಿಮಾಗೆ ಭರ್ಜರಿ ಸಂಭಾವನೆ ಪಡೆದಿದ್ದಾರೆ. ಪಠಾಣ್ ಸಿನಿಮಾ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಹೊಸ ದಾಖಲೆ ಬರೆದಿದೆ. ಹಾಗಾಗಿ ಪ್ರಾಜೆಕ್ಟ್ ಕೆ ಚಿತ್ರಕ್ಕೆ ದುಬಾರಿ ಸಂಭಾವನೆಯನ್ನೇ ನಟಿ ಪಡೆದಿದ್ದಾರೆ.

ಈ ಸಿನಿಮಾಗಾಗಿ ಅವರು ದೊಡ್ಡ ಕಾಲ್‌ಶೀಟ್ ನೀಡಿದ್ದಾರೆ. ಹಲವು ದಿನಗಳನ್ನ ಈ ಚಿತ್ರಕ್ಕಾಗಿ ಮುಡಿಪಿಟ್ಟಿದ್ದಾರೆ. ನಾಗ್ ಅಶ್ವೀನ್ ನಿರ್ದೇಶನದ ಈ ಚಿತ್ರಕ್ಕೆ 10 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಕೆಲ ಸ್ಟಾರ್ ಹೀರೋಗಳು ಕೂಡ ಇಷ್ಟು ಸಂಭಾವನೆ ಪಡೆಯಲ್ಲ ಅನ್ನೋದು ಗಮಿನಿಸಬೇಕಾದ ವಿಷಯ. ಪ್ರಭಾಸ್ ಜೊತೆಗಿನ ಈ ಚಿತ್ರ ಮುಂದಿನ ವರ್ಷ ತೆರೆಗೆ ಅಪ್ಪಳಿಸಲಿದೆ.

lokesh

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

6 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

8 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

9 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

10 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

12 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

13 hours ago